ಚರಿತ್ರೆ ನಿರ್ಮಿಸಿದ ಅಪೂರ್ವ ಸಾಧಕ ಜಾರ್ಜ್‌: ಡಾ| ಜಿ. ಎನ್‌. ಉಪಾಧ್ಯ


Team Udayavani, Jul 22, 2021, 1:41 PM IST

anivasi kannadiga

ಮುಂಬಯಿ: ಘನ ವ್ಯಕ್ತಿತ್ವದ ಜಾರ್ಜ್‌ ಅವರು ಮುಂಬಯಿಯಲ್ಲಿ  ಅರಳಿದ ಮಹಾನ್‌ ಪ್ರತಿಭೆ. ಮುಂಬಯಿಯ ಕಾರ್ಮಿಕರ ಆಂದೋಲನದಲ್ಲಿ ಮಿಂಚಿ ಸಂಚಲನ ಉಂಟು ಮಾಡಿ ಲಕ್ಷಾಂತರ ಬಡ ಕಾರ್ಮಿಕರ ಬಾಳಿಗೆ ಬೆಳಕಾದ ಕ್ರಾಂತಿಯ ಕಿಡಿ  ಅವರು. ಲೋಹಿಯಾವಾದಿ, ಛಲದಂಕಮಲ್ಲ, ದಣಿವರಿಯದ ನಿಷ್ಠಾವಂತ ರಾಜಕಾರಣಿ, ಕಾರ್ಮಿಕ ನೇತಾರ ಹೀಗೆ ವಿವಿಧ ನೆಲೆಗಳಲ್ಲಿ ಲೋಕಮಾನ್ಯರಾದ ಶ್ರೇಯಸ್ಸು ಫೆರ್ನಾಂಡಿಸ್‌ ಅವರಿಗೆ ಸಲ್ಲುತ್ತದೆ.

ಲೋಕೋಪಯೋಗಿಯಾದ ಅಸಾಧಾರಣವಾದ ಕಾರ್ಯ ಸಾಹಸಗಳನ್ನು ಮಾಡಿ ಸಫಲರಾದವರು ಜಾರ್ಜ್‌ ಎಂಬುದು ಉಲ್ಲೇಖನೀಯ. ಪ್ರತಿಯೊಬ್ಬ ವ್ಯಕ್ತಿಯೂ ಚರಿತ್ರೆಗೆ ತನ್ನ ಪಾಲಿನ ಕೊಡುಗೆಯನ್ನು ಸಂದಾಯ ಮಾಡುತ್ತಾನೆ. ಆದರೆ ಚರಿತ್ರೆ ನಿರ್ಮಿಸುವವರ ಸಂಖ್ಯೆ ವಿರಳ. ನಿಜವಾದ ಅರ್ಥದಲ್ಲಿ  ಚರಿತ್ರೆಯನ್ನು ನಿರ್ಮಿಸಿದ ಅಪೂರ್ವ ಸಾಧಕ ನಮ್ಮ ಜಾರ್ಜ್‌ ಎಂದು ಮುಂಬಯಿ ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯ ಅಭಿಪ್ರಾಯಪಟ್ಟರು.

ಸಾಂತಕ್ರೂಜ್‌ ಪೂರ್ವದ ವಿದ್ಯಾನಗರಿಯ ಕಲೀನಾ ಕ್ಯಾಂಪಸ್‌ನ ರಾನಡೆ ಭವನದಲ್ಲಿ ಜು. 13ರಂದು ಸುರೇಖಾ ಹೇಮನಾಥ ದೇವಾಡಿಗ ಅವರ “ಹೋರಾಟದ ಮೂಲಕ ಕ್ರಾಂತಿಯ ಕನಸು ಕಂಡ ಪದ್ಮವಿಭೂಷಣ ಜಾರ್ಜ್‌ ಫೆರ್ನಾಂಡಿಸ್‌’ ಕೃತಿ ಸಮರ್ಪಣ ಕಾರ್ಯಕ್ರಮದಲ್ಲಿ  ಕೃತಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ಜಾರ್ಜ್‌ ಅವರು ಮಾನವತಾವಾದಿ. ಜಾತಿ, ಮತ, ಪಂಥ, ಪಂಗಡಗಳನ್ನು ಮೀರಿ ಬೆಳೆದ ದೂರದೃಷ್ಟಿ ಹೊಂದಿದ್ದ ಪ್ರಗತಿಶೀಲ ಚಿಂತಕರೂ ಆಗಿದ್ದರು.

ಸಹಜವಾದ ಪ್ರತಿಭೆ ಸಮಾಜವನ್ನು ಮೀರಿ ಬೆಳೆಯಬಲ್ಲದು ಎಂಬುದಕ್ಕೆ ಜಾರ್ಜ್‌ ಅವರು ಉತ್ತಮ ನಿದರ್ಶನ. ಜಾರ್ಜ್‌ ಅವರ ಕುರಿತು ಅಮ್ಮೆಂಬಳ ಆನಂದ ಅವರು ಕನ್ನಡದಲ್ಲಿ ಕೃತಿಯನ್ನು ರಚಿಸಿದ್ದಾರೆ. ಇದೀಗ ದೊಡ್ಡ ಪ್ರಮಾಣದಲ್ಲಿ ಜಾರ್ಜ್‌ ಫೆರ್ನಾಂಡಿಸ್‌ ಅವರ ಧೀಮಂತ ವ್ಯಕ್ತಿತ್ವದ ಸಮಗ್ರ ದರ್ಶನ ಪ್ರಸ್ತುತ ಕೃತಿಯಲ್ಲಿ ದಾಖಲಾಗಿದೆ. ಈ ಕೃತಿಯನ್ನು ಅಭಿಜಿತ್‌ ಪ್ರಕಾಶನವು ಪ್ರಕಟಿಸಿದೆ. ಇದೊಂದು ಒಳ್ಳೆಯ ಕೃತಿ. ಬಹು ಶ್ರಮವಹಿಸಿ ಈ ಕೃತಿಯನ್ನು ರಚಿಸಿದ ನಮ್ಮ ವಿಭಾಗದ ಸುರೇಖಾ ದೇವಾಡಿಗ ಅವರ ಶ್ರಮ ಸಾರ್ಥಕವಾಗಿದೆ ಎಂದು ಈ ಮೌಲಿಕ ಕೃತಿಗಾಗಿ ಸುರೇಖಾ ದೇವಾಡಿಗ ಅವರಿಗೆ ಅಭಿನಂದನೆ ಸಲ್ಲಿಸಿದರು.

ಮುಂಬಯಿ ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ  ಮಾತನಾಡಿ, ಕಾರ್ಮಿಕ ನೇತಾರರಾಗಿ, ರಾಜಕೀಯ ಮುಖಂಡರಾಗಿ ಅನೇಕ ಜನಪರ ಕಾರ್ಯಗಳನ್ನು ಮಾಡಿದ ಜಾರ್ಜ್‌ ಫೆರ್ನಾಂಡಿಸ್‌ ಅವರ ಜೀವನದ ವಿವಿಧ ಮುಖಗಳು, ಏಳುಬೀಳುಗಳನ್ನು ಈ ಕೃತಿಯಲ್ಲಿ ಅವರ ನಿಕಟವರ್ತಿಗಳು, ಆತ್ಮೀಯರು ಹಂಚಿಕೊಂಡಿದ್ದಾರೆ. ಇಷ್ಟೆಲ್ಲ ಮಾಹಿತಿಗಳನ್ನು ಕಲೆ ಹಾಕುವುದು ಅಷ್ಟು ಸುಲಭದ ಸಂಗತಿಯಲ್ಲ. ಸುರೇಖಾ ದೇವಾಡಿಗ ಅವರು ಬಹಳ ಪರಿಶ್ರಮಪಟ್ಟು ಸಮಯೋಚಿತ ವಿಷಯಗಳನ್ನು ಸಂಗ್ರಹಿಸಿ ದಾಖಲಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಿದ್ದಾರೆ. ಜಾರ್ಜ್‌ ಫೆರ್ನಾಂಡಿಸ್‌ ಅವರ ಜೀವನದ ಯಶೋಗಾಥೆ ಬಿಂಬಿಸುವ ಈ ಕೃತಿ ಕನ್ನಡ ವಿಭಾಗದ ಸಂಶೋಧನ ಸಹಾಯಕಿ ಆಗಿರುವ ಸುರೇಖಾ ಅವರು ಸಂಪಾದಿಸಿರುವುದು ಅಭಿಮಾನದ ಸಂಗತಿ ಎಂದರು.

ಕೃತಿ ಸಮರ್ಪಣ ಕಾರ್ಯಕ್ರಮದಲ್ಲಿ  ಕನ್ನಡ ವಿಭಾಗದ ಅತಿಥಿ ಉಪನ್ಯಾಸಕರಾದ ಡಾ| ಉಮಾ ರಾವ್‌, ಕಲಾ ಭಾಗÌತ್‌, ಶೈಲಜಾ ಹೆಗಡೆ, ಪ್ರತಿಭಾ ರಾವ್‌, ಕನ್ನಡ ವಿಭಾಗದ ಕಚೇರಿ ಸಹಾಯಕರಾದ ರೇಷ್ಮಾ ಮಾನೆ ಮೊದಲಾದವರು ಉಪಸ್ಥಿತರಿದ್ದು, ಶುಭ ಹಾರೈಸಿದರು.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.