ಚರಿತ್ರೆ ನಿರ್ಮಿಸಿದ ಅಪೂರ್ವ ಸಾಧಕ ಜಾರ್ಜ್‌: ಡಾ| ಜಿ. ಎನ್‌. ಉಪಾಧ್ಯ


Team Udayavani, Jul 22, 2021, 1:41 PM IST

anivasi kannadiga

ಮುಂಬಯಿ: ಘನ ವ್ಯಕ್ತಿತ್ವದ ಜಾರ್ಜ್‌ ಅವರು ಮುಂಬಯಿಯಲ್ಲಿ  ಅರಳಿದ ಮಹಾನ್‌ ಪ್ರತಿಭೆ. ಮುಂಬಯಿಯ ಕಾರ್ಮಿಕರ ಆಂದೋಲನದಲ್ಲಿ ಮಿಂಚಿ ಸಂಚಲನ ಉಂಟು ಮಾಡಿ ಲಕ್ಷಾಂತರ ಬಡ ಕಾರ್ಮಿಕರ ಬಾಳಿಗೆ ಬೆಳಕಾದ ಕ್ರಾಂತಿಯ ಕಿಡಿ  ಅವರು. ಲೋಹಿಯಾವಾದಿ, ಛಲದಂಕಮಲ್ಲ, ದಣಿವರಿಯದ ನಿಷ್ಠಾವಂತ ರಾಜಕಾರಣಿ, ಕಾರ್ಮಿಕ ನೇತಾರ ಹೀಗೆ ವಿವಿಧ ನೆಲೆಗಳಲ್ಲಿ ಲೋಕಮಾನ್ಯರಾದ ಶ್ರೇಯಸ್ಸು ಫೆರ್ನಾಂಡಿಸ್‌ ಅವರಿಗೆ ಸಲ್ಲುತ್ತದೆ.

ಲೋಕೋಪಯೋಗಿಯಾದ ಅಸಾಧಾರಣವಾದ ಕಾರ್ಯ ಸಾಹಸಗಳನ್ನು ಮಾಡಿ ಸಫಲರಾದವರು ಜಾರ್ಜ್‌ ಎಂಬುದು ಉಲ್ಲೇಖನೀಯ. ಪ್ರತಿಯೊಬ್ಬ ವ್ಯಕ್ತಿಯೂ ಚರಿತ್ರೆಗೆ ತನ್ನ ಪಾಲಿನ ಕೊಡುಗೆಯನ್ನು ಸಂದಾಯ ಮಾಡುತ್ತಾನೆ. ಆದರೆ ಚರಿತ್ರೆ ನಿರ್ಮಿಸುವವರ ಸಂಖ್ಯೆ ವಿರಳ. ನಿಜವಾದ ಅರ್ಥದಲ್ಲಿ  ಚರಿತ್ರೆಯನ್ನು ನಿರ್ಮಿಸಿದ ಅಪೂರ್ವ ಸಾಧಕ ನಮ್ಮ ಜಾರ್ಜ್‌ ಎಂದು ಮುಂಬಯಿ ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯ ಅಭಿಪ್ರಾಯಪಟ್ಟರು.

ಸಾಂತಕ್ರೂಜ್‌ ಪೂರ್ವದ ವಿದ್ಯಾನಗರಿಯ ಕಲೀನಾ ಕ್ಯಾಂಪಸ್‌ನ ರಾನಡೆ ಭವನದಲ್ಲಿ ಜು. 13ರಂದು ಸುರೇಖಾ ಹೇಮನಾಥ ದೇವಾಡಿಗ ಅವರ “ಹೋರಾಟದ ಮೂಲಕ ಕ್ರಾಂತಿಯ ಕನಸು ಕಂಡ ಪದ್ಮವಿಭೂಷಣ ಜಾರ್ಜ್‌ ಫೆರ್ನಾಂಡಿಸ್‌’ ಕೃತಿ ಸಮರ್ಪಣ ಕಾರ್ಯಕ್ರಮದಲ್ಲಿ  ಕೃತಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ಜಾರ್ಜ್‌ ಅವರು ಮಾನವತಾವಾದಿ. ಜಾತಿ, ಮತ, ಪಂಥ, ಪಂಗಡಗಳನ್ನು ಮೀರಿ ಬೆಳೆದ ದೂರದೃಷ್ಟಿ ಹೊಂದಿದ್ದ ಪ್ರಗತಿಶೀಲ ಚಿಂತಕರೂ ಆಗಿದ್ದರು.

ಸಹಜವಾದ ಪ್ರತಿಭೆ ಸಮಾಜವನ್ನು ಮೀರಿ ಬೆಳೆಯಬಲ್ಲದು ಎಂಬುದಕ್ಕೆ ಜಾರ್ಜ್‌ ಅವರು ಉತ್ತಮ ನಿದರ್ಶನ. ಜಾರ್ಜ್‌ ಅವರ ಕುರಿತು ಅಮ್ಮೆಂಬಳ ಆನಂದ ಅವರು ಕನ್ನಡದಲ್ಲಿ ಕೃತಿಯನ್ನು ರಚಿಸಿದ್ದಾರೆ. ಇದೀಗ ದೊಡ್ಡ ಪ್ರಮಾಣದಲ್ಲಿ ಜಾರ್ಜ್‌ ಫೆರ್ನಾಂಡಿಸ್‌ ಅವರ ಧೀಮಂತ ವ್ಯಕ್ತಿತ್ವದ ಸಮಗ್ರ ದರ್ಶನ ಪ್ರಸ್ತುತ ಕೃತಿಯಲ್ಲಿ ದಾಖಲಾಗಿದೆ. ಈ ಕೃತಿಯನ್ನು ಅಭಿಜಿತ್‌ ಪ್ರಕಾಶನವು ಪ್ರಕಟಿಸಿದೆ. ಇದೊಂದು ಒಳ್ಳೆಯ ಕೃತಿ. ಬಹು ಶ್ರಮವಹಿಸಿ ಈ ಕೃತಿಯನ್ನು ರಚಿಸಿದ ನಮ್ಮ ವಿಭಾಗದ ಸುರೇಖಾ ದೇವಾಡಿಗ ಅವರ ಶ್ರಮ ಸಾರ್ಥಕವಾಗಿದೆ ಎಂದು ಈ ಮೌಲಿಕ ಕೃತಿಗಾಗಿ ಸುರೇಖಾ ದೇವಾಡಿಗ ಅವರಿಗೆ ಅಭಿನಂದನೆ ಸಲ್ಲಿಸಿದರು.

ಮುಂಬಯಿ ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ  ಮಾತನಾಡಿ, ಕಾರ್ಮಿಕ ನೇತಾರರಾಗಿ, ರಾಜಕೀಯ ಮುಖಂಡರಾಗಿ ಅನೇಕ ಜನಪರ ಕಾರ್ಯಗಳನ್ನು ಮಾಡಿದ ಜಾರ್ಜ್‌ ಫೆರ್ನಾಂಡಿಸ್‌ ಅವರ ಜೀವನದ ವಿವಿಧ ಮುಖಗಳು, ಏಳುಬೀಳುಗಳನ್ನು ಈ ಕೃತಿಯಲ್ಲಿ ಅವರ ನಿಕಟವರ್ತಿಗಳು, ಆತ್ಮೀಯರು ಹಂಚಿಕೊಂಡಿದ್ದಾರೆ. ಇಷ್ಟೆಲ್ಲ ಮಾಹಿತಿಗಳನ್ನು ಕಲೆ ಹಾಕುವುದು ಅಷ್ಟು ಸುಲಭದ ಸಂಗತಿಯಲ್ಲ. ಸುರೇಖಾ ದೇವಾಡಿಗ ಅವರು ಬಹಳ ಪರಿಶ್ರಮಪಟ್ಟು ಸಮಯೋಚಿತ ವಿಷಯಗಳನ್ನು ಸಂಗ್ರಹಿಸಿ ದಾಖಲಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಿದ್ದಾರೆ. ಜಾರ್ಜ್‌ ಫೆರ್ನಾಂಡಿಸ್‌ ಅವರ ಜೀವನದ ಯಶೋಗಾಥೆ ಬಿಂಬಿಸುವ ಈ ಕೃತಿ ಕನ್ನಡ ವಿಭಾಗದ ಸಂಶೋಧನ ಸಹಾಯಕಿ ಆಗಿರುವ ಸುರೇಖಾ ಅವರು ಸಂಪಾದಿಸಿರುವುದು ಅಭಿಮಾನದ ಸಂಗತಿ ಎಂದರು.

ಕೃತಿ ಸಮರ್ಪಣ ಕಾರ್ಯಕ್ರಮದಲ್ಲಿ  ಕನ್ನಡ ವಿಭಾಗದ ಅತಿಥಿ ಉಪನ್ಯಾಸಕರಾದ ಡಾ| ಉಮಾ ರಾವ್‌, ಕಲಾ ಭಾಗÌತ್‌, ಶೈಲಜಾ ಹೆಗಡೆ, ಪ್ರತಿಭಾ ರಾವ್‌, ಕನ್ನಡ ವಿಭಾಗದ ಕಚೇರಿ ಸಹಾಯಕರಾದ ರೇಷ್ಮಾ ಮಾನೆ ಮೊದಲಾದವರು ಉಪಸ್ಥಿತರಿದ್ದು, ಶುಭ ಹಾರೈಸಿದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.