ಹಿರಿಯ ನಾಗರಿಕರಿಗೆ ಥಾಣೆಯ “ವಿ ಆರ್ ಫಾರ್ ಯು’ ನೆರವು
Team Udayavani, May 26, 2021, 12:06 PM IST
ಥಾಣೆ: ಕಳೆದ ಕೆಲವು ದಿನಗಳಿಂದ ಥಾಣೆಯಲ್ಲಿ ಲಸಿಕೆಗಳ ಕೊರತೆಯಿಂದ ಹಿರಿಯ ನಾಗರಿಕರು ಸಮಸ್ಯೆ ಅನುಭವಿಸುತ್ತಿದ್ದು, ಲಸಿಕೆ ಪಡೆಯಲು ಹಿರಿಯ ನಾಗರಿಕರು ಮುಂಜಾನೆ 3ರಿಂದ ಕೇಂದ್ರದಲ್ಲಿ ಸರತಿ ಸಾಲಿನಲ್ಲಿ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ.
ಲಸಿಕೆ ಕೇಂದ್ರದಲ್ಲಿ ಲಸಿಕೆ ಲಭ್ಯವಿಲ್ಲದ ಕಾರಣ ಮನೆಗೆ ಮರಳಬೇಕಾಗುತ್ತದೆ. ಕಳೆದ ಕೆಲವು ದಿನಗಳಿಂದ ಎಲ್ಲೆಡೆ ಲಸಿಕೆಗಳ ಕೊರತೆ ಇದೆ ಮತ್ತು ಲಸಿಕೆ ಅಭಿಯಾನದಲ್ಲಿ ಗೊಂದಲಗಳಿವೆ. ಅಲ್ಲದೆ ಎರಡನೇ ಡೋಸ್ ತೆಗೆದುಕೊಳ್ಳುವ ಗಡುವು ಮುಕ್ತಾಯಗೊಂಡಿರುವುದರಿಂದ ಹಿರಿಯ ನಾಗರಿಕರು ಆತಂಕಕ್ಕೊಳಗಾಗಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿರುವ “ವಿ ಆರ್ ಫಾರ್ ಯು’ ಸಂಸ್ಥೆ ಹಿರಿಯ ನಾಗರಿಕರ ನೆರವಿಗೆ ಬಂದಿದೆ.
ಸಂಸ್ಥೆಯ ಸ್ವಯಂಸೇವಕರು ಬೆಳಗ್ಗೆ ಕೇಂದ್ರಗಳಿಗೆ ತೆರಳಿ ಹಿರಿಯ ನಾಗರಿಕರಿಗಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ. ಆದ್ದರಿಂದ ಹಿರಿಯ ನಾಗರಿಕರು ಮುಂಜಾನೆಯಿಂದ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ. ಲಸಿಕೆಗಾಗಿ ಅವರು ಹಿರಿಯ ನಾಗರಿಕರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
40 ಮಂದಿ ಸ್ವಯಂಸೇವಕರು
ಸಹಾಯವಾಣಿಗೆ ಪ್ರತೀದಿನ 150ರಿಂದ 200 ಕರೆಗಳು ಬರುತ್ತವೆ. ವ್ಯಾಕ್ಸಿನೇಷನ್ಗಾಗಿ ಅವರ ಸಂಖ್ಯೆ ಹತ್ತಿರದಲ್ಲಿದ್ದರೆ ಸ್ವಯಂಸೇವಕರು ಹಿರಿಯರನ್ನು ಕೇಂದ್ರಕ್ಕೆ ಕರೆತರುತ್ತಾರೆ. ಈ ಸಂಘಟನೆಯ ಒಟ್ಟು 40 ಮಂದಿ ಸ್ವಯಂಸೇವಕರು ನಗರದ ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ.
ವಿವಿಧ ನಗರಗಳಲ್ಲಿ ಸೇವೆ
ನಗರದ ವಿವಿಧ ಭಾಗಗಳಾದ ನೌಪಾಡಾ, ಘೋಡ್ ಬಂದರ್, ಯಶೋದನಗರ, ಸಾವರ್ಕರ್ ನಗರದ ಹಿರಿಯ ನಾಗರಿಕರ ಮಕ್ಕಳು ವಿದೇಶದಲ್ಲಿ ನೆಲೆಸಿರುವುದರಿಂದ ಹಿರಿಯ ನಾಗರಿಕರು ಏಕಾಂಗಿಯಾಗಿ ಬದುಕಬೇಕಾಗಿದೆ. ವ್ಯಾಕ್ಸಿನೇಶನ್ ಅವಧಿಯಲ್ಲಿ ಈ ಹಿರಿಯ ನಾಗರಿಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅಂತಹ ಹಿರಿಯ ನಾಗರಿಕರನ್ನು ಥಾಣೆ ಯಲ್ಲಿರುವ ವಿ ಆರ್ ಫಾರ್ ಯು ನೋಡಿಕೊಳ್ಳುತ್ತಿದೆ. ಕಳೆದ ಒಂದೂವರೆ ವರ್ಷಗಳಿಂದ ಅವರಿಗೆ ಸಹಾಯ ಮಾಡುತ್ತಿದ್ದೇವೆ. ಸಹಾಯ ಮಾಡುವುದರ ಜತೆಗೆ ಈ ಸ್ವಯಂಸೇವಕರು ಲಸಿಕೆ ನೀಡುವ ಬಗ್ಗೆ ಸಮಾಲೋಚನೆ ಮತ್ತು ಸೂಕ್ತ ಮಾರ್ಗದರ್ಶನವನ್ನೂ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ