ಡೊಂಬಿವಲಿ ಶ್ರೀ ವರದ ಸಿದ್ಧಿವಿನಾಯಕ ಸೇವಾ ಮಂಡಲದ ವಾರ್ಷಿಕೋತ್ಸವ


Team Udayavani, Jan 12, 2019, 11:42 AM IST

1101mum14.jpg

ಡೊಂಬಿವಲಿ: ಕಠಿನ ಪರಿಶ್ರಮದ ಜತೆಗೆ ಸಮಯ ನಿಶ್ಚಿತಗೊಳಿಸಿ ಗುರಿ ಸಾಧನೆ ಯತ್ತ ಲಕ್ಷ್ಯ ವಹಿಸುವುದರಿಂದ ಯಶಸ್ಸು ಹತ್ತಿರವಾಗುತ್ತದೆ. ಆಧುನಿಕ ತಂತ್ರಜ್ಞಾನವನ್ನು ಕಲಿಯುವುದರ ಜತೆಗೆ ನಮ್ಮ ನಿಜಜೀವನದಲ್ಲೂ ಶಿಸ್ತು, ಮೌಲ್ಯ ಗಳನ್ನು ಅಳವಡಿಸಿಕೊಂಡು  ಯುವ ಪೀಳಿಗೆ ಇತರರಿಗೆ ಮಾದರಿಯಾಗುವಂತಹ ಸಾಧನೆಗಳನ್ನು ಮಾಡಬೇಕು ಎಂದು ಪುಣೆಯ ವೀನಸ್‌ ಗ್ರೂಪ್‌ ಆಫ್‌ ಇಂಡಸ್ಟ್ರಿಯ ಮುಖ್ಯ ಆಡಳಿತ ನಿರ್ದೇಶಕ ಮಾಳ ಸದಾನಂದ ನಾಯಕ್‌ ಅವರು ನುಡಿದರು.

ಡೊಂಬಿವಲಿ ಪೂರ್ವದ ಶ್ರೀ ವರದ ಸಿದ್ಧಿ ವಿನಾಯಕ ಸೇವಾ ಮಂಡಲದ ಸಭಾಗೃಹದಲ್ಲಿ ಡಿ. 23ರಂದು  ನಡೆದ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಮಕ್ಕಳ ಅಭಿರುಚಿಯನ್ನು ಅರಿತುಕೊಂಡು ಅವರನ್ನು ಬೆಳೆಸಿದಾಗ ಅವರು ಪ್ರತಿಭಾವಂತರಾಗಿ ಮೂಡಿ ಬರಲು ಸಾಧ್ಯವಿದೆ ಎಂದರು.

ಆಮಂತ್ರಿತ ಅತಿಥಿಯಾಗಿ ಪಾಲ್ಗೊಂಡ ದಹಿಸರ್‌ನ ಶ್ರೀ ವಿಘ್ನಹರ್ತಾ ಶ್ರೀ ಮಹಾಗಣಪತಿ ಸೇವಾ ಮಂಡಳದ ಗೌರವಾಧ್ಯಕ್ಷ ಗೋಪಾಲಕೃಷ್ಣ ನಾವೆಲ್ಕರ್‌ ಮಾತನಾಡಿ, ಸಂಸ್ಥೆಯ ಚಟುವಟಿಕೆಗಳನ್ನು ಕಂಡಾಗ ಸಂತೋಷವಾಗುತ್ತಿದೆ. ಸಂಸ್ಥೆಯ ಮುಂದಿನ ನೂತನ ಯೋಜನೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿ ಎಂದು ಹಾರೈಸಿದರು.

ಅತಿಥಿಯಾಗಿ ಪಾಲ್ಗೊಂಡ ಉದ್ಯಮಿ ಸದಾಶಿವ ಎನ್‌. ನಾಯಕ್‌ ಅವರು ಮಾತನಾಡಿ, ನಾವು ಕೈಗೊಳ್ಳುತ್ತಿರುವ ಪ್ರತಿಯೊಂದು ಕೆಲಸಗಳ ಬಗ್ಗೆ ಭಕ್ತಿ, ಶ್ರದ್ಧೆ ಹಾಗೂ ಪೂರ್ಣಗೊಳಿಸುವ ಛಲ ಇರಬೇಕು. ವಿದ್ಯಾರ್ಥಿಗಳನ್ನು ಈ ದಿಸೆಯಿಂದಲೇ ಬೆಳೆಸಬೇಕು ಎಂದರು.

ಇನ್ನೋರ್ವ ಅತಿಥಿ ಕರ್ನಾಟಕ ಬ್ಯಾಂಕ್‌ನ ನಿವೃತ್ತ ಜನರಲ್‌ ಮ್ಯಾನೇಜರ್‌ ಉಪೇಂದ್ರ ನಾಯಕ್‌ ಅವರು ಮಾತನಾಡಿ, ಸಂಸ್ಥೆಯ ಏಳ್ಗೆಗೋಸ್ಕರ ಪರಿಶ್ರಮ ವಹಿಸುವ ಕಾರ್ಯಕರ್ತರಿಗೆ ಟೀಕೆಗಳೂ ಬಂದರೂ ಎದೆ ಗುಂದದೆ ಕೆಲಸವನ್ನು ಪೂರ್ಣಗೊಳಿಸುವತ್ತ ಲಕ್ಷ್ಯ ವಹಿಸಬೇಕು. ಪದಾಧಿಕಾರಿಗಳ ಕಾಲೆಳೆಯುವ ಬುದ್ಧಿ ಸಂಘ-ಸಂಸ್ಥೆಗಳ ಬೆಳವಣಿಗೆಗೆ ಪೂರಕವಾಗಿದೆ ಎಂದು ನುಡಿದು, ಪ್ರತಿಯೊಬ್ಬರು ಮಾತೃಭಾಷೆಯ ಬಗ್ಗೆ ಅಭಿಮಾನವನ್ನಿರಿಸಿಕೊಂಡು ಅದೇ ಭಾಷೆಯಲ್ಲಿ ವ್ಯವಹರಿಸಬೇಕು ಎಂದು ನುಡಿದರು.

ವೇದಿಕೆಯಲ್ಲಿ ಶ್ರೀ ವರದ ಸಿದ್ಧಿವಿನಾಯಕ ಸೇವಾ ಮಂಡಳದ ಉಪಾಧ್ಯಕ್ಷ ಎಂ. ಪಿ. ನಾಯಕ್‌, ಪದಾಧಿಕಾರಿಗಳಾದ ಸಂಜಯ್‌ ಪಾಟ್ಕರ್‌, ನಾಗರಾಜ್‌ ಪಾಟ್ಕರ್‌, ಮಹಿಳಾ ವಿಭಾಗದ ಅಧ್ಯಕ್ಷೆ ಆಶಾ ನಾಯಕ್‌, ಯುವ ವೇದಿಕೆಯ ಅಕ್ಷತಾ ನಾಯಕ್‌, ವಿರಾಜ್‌ ನಾಯಕ್‌, ಸಂಸ್ಥೆಯ ಕಾರ್ಯದರ್ಶಿ ರವೀಂದ್ರನಾಥ್‌ ಜಿ. ನಾಯಕ್‌ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಈಜುಪಟು ಅಥರ್ವ ಆರ್‌. ನಾಯಕ್‌, ಕ್ರೀಡಾಪಟು, ಯಕ್ಷಕಲಾವಿದೆ ಕು| ಕೃಪಾ ಕೃಷ್ಣ ನಾಯಕ್‌ ಕಡ್ತಲ, ಎಸ್‌. ಬಿ. ಐ. ಲೈಫ್‌ ಇನ್‌ಸ್ಯೂರೆನ್ಸ್‌ನಲ್ಲಿ ವಿಶಿಷ್ಟ ಸಾಧನೆಗೈದ ಮಹಿಳಾ ಏಜೆಂಟ್‌ ರೇಷ್ಮಾ ಆರ್‌. ಕಾಮತ್‌ ಇವರನ್ನು ಗಣ್ಯರು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು. ಕಾರ್ಯದರ್ಶಿ ರವೀಂದ್ರನಾಥ್‌ ಜಿ. ನಾಯಕ್‌ ಸಂಸ್ಥೆಯ ಸಿದ್ಧಿ ಸಾಧನೆಗಳನ್ನು ವಿವರಿಸಿ, ಸಂಸ್ಥೆಯು ಕೈಗೊಂಡಿರುವ ನೂತನ ಸೇವಾಭವನದ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು, ಅದನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ನುಡಿದರು.

ರಘುನಾಥ್‌ ಪ್ರಭು ಮತ್ತು ಸಂತೋಷ್‌ ಎ. ನಾಯಕ್‌ ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮುಂಬಯಿ, ಥಾಣೆ, ಪಾಲ^ರ್‌ ಇನ್ನಿತರೆಡೆಗಳಿಂದ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ : ಪಿ. ಆರ್‌. ರವಿಶಂಕರ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.