ವಿದ್ಯಾರ್ಥಿಗಳ ಸಾಧನೆಯಿಂದ ಶಿಕ್ಷಕರ ಜೀವನ ಸಾರ್ಥಕ: ಸುಮತಿ


Team Udayavani, Apr 14, 2021, 9:50 AM IST

ವಿದ್ಯಾರ್ಥಿಗಳ ಸಾಧನೆಯಿಂದ ಶಿಕ್ಷಕರ ಜೀವನ ಸಾರ್ಥಕ: ಸುಮತಿ

ಮುಂಬಯಿ: ವಿದ್ಯಾರ್ಥಿಗಳ ಜೀವನದ ಸುವರ್ಣ ಯುಗ ಪ್ರಾರಂಭವಾಗುವುದೇ ಅಧ್ಯಯನ ಹಂತದಲ್ಲಿ. ಒಬ್ಬ ವ್ಯಕ್ತಿ ಜೀವನದಲ್ಲಿ ಆದರ್ಶಮಯವಾಗಿ ಬೆಳೆದಿದ್ದಾನೆ ಎಂದಾದರೆ ಅದಕ್ಕೆ ಪ್ರೇರಕ ಶಕ್ತಿ ಶಿಕ್ಷಣ. ಶಿಕ್ಷಣದಿಂದ ಸದ್ಗುಣಗಳು, ಜ್ಞಾನ ಭಂಡಾರ, ದಯೆ, ಅನುಕಂಪ, ಪರೋಪಕಾರ, ಧಾನ-ಧರ್ಮದ ಸಹೃದಯತೆ ಇನ್ನಿತರ ಮಾನವೀಯ ಗುಣಗಳು ಬೆಳೆಯಲು ಸಾಧ್ಯ. ಮಾತೃಭಾಷೆಯಿಂದಲೇ ಸರ್ವಾಂಗೀಣ ಅಭಿವೃದ್ಧಿ ಯಾಗು ತ್ತದೆ. ಯಾರೂ ಜಾಣರಲ್ಲ, ಯಾರೂ ದಡ್ಡರಲ್ಲ. ಸನ್ಮಾರ್ಗ ವನ್ನು ಅನುಸರಿಸಿದರೆ, ಮನಸ್ಸು ನಿರ್ಮಲವಾಗಿದ್ದರೆ,

ಏಕಾಗ್ರತೆಯ ಪ್ರವೃತ್ತಿಯನ್ನು ಹೊಂದಿದ್ದರೆ ಅದುವೇ ಅವರಿಗೆ ಶ್ರೀರಕ್ಷೆ. ಸುಪ್ತವಾಗಿರುವ ಪ್ರತಿಭೆಯನ್ನು ಅನಾವರಣ ಗೊಳಿಸಲು ಧೈರ್ಯ, ಸ್ಥೈರ್ಯ, ಆತ್ಮವಿಶ್ವಾಸವನ್ನು ಬೆಳೆಸಿ ಕೊಂಡು ಸಾಗಬೇಕು. ವಿದ್ಯಾರ್ಥಿಗಳ ಸಾಧನೆಯಿಂದ ಶಿಕ್ಷಕರ ಜೀವನ ಸಾರ್ಥಕ ಎಂದು ಸಮಾಜ ಸೇವಕಿ ಸುಮತಿ ಯಾದಪ್ಪನವರ ಹೇಳಿದರು.

ವಿದ್ಯಾ ಪ್ರಸಾರಕ ಮಂಡಳದ ಕನ್ನಡ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವದ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿ  ಮಕ್ಕಳಿಗೆ ಶುಭ ಹಾರೈಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಅರ್ಚನಾ ಬಿರಾಜದಾರ ಹಾಗೂ ಅರುಣಾ ಭಟ್‌ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುವುದರ ಮೂಲಕ ಶೈಕ್ಷಣಿಕ ವರ್ಷದ ಸಮಗ್ರ ವರದಿ ಮಂಡಿಸಿದರು. ಆರತಿ ಗೋವಿಂದ ಅವರ ಶ್ಲೋಕದೊಂದಿಗೆ ಹಾಗೂ ವಿನಾಯಕನ ನೃತ್ಯ ಸ್ಮರಣೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಡಾ| ಕೆ. ಮೋಹನ್‌, ಗೌರವ ಪ್ರಧಾನ ಕಾರ್ಯದರ್ಶಿ ಪ್ರಮೋದ್‌ ಮುಳಗುಂದ, ಕಾರ್ಯದರ್ಶಿ ಬಿ. ಎಚ್‌. ಕಟ್ಟಿ, ಸಹ ಕಾರ್ಯದರ್ಶಿಗಳಾದ ವಿಜಯ ಕುಲಕರ್ಣಿ, ಎನ್‌. ಎಂ. ಗುಡಿ, ನಿವೃತ್ತ ಪ್ರಾಂಶುಪಾಲರಾದ ನಿರುಪಾ ಜೊರಾಪುರ ಮತ್ತು ಸುವಿನಾ ಶೆಟ್ಟಿ, ಪರಿವೀಕ್ಷಕ ಡಿ. ಆರ್‌. ದೇಶಪಾಂಡೆ, ಶಿಕ್ಷಕರು, ಶಿಕ್ಷಕೇತರ ಸಿಬಂದಿ, ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶೈಕ್ಷಣಿಕ ಹಾಗೂ ದತ್ತಿ ಬಹುಮಾನ ವಿಜೇತ ವಿದ್ಯಾರ್ಥಿಗಳ ಯಾದಿಯನ್ನು ಶಿಕ್ಷಕಿ ಜ್ಯೋತಿ ಕುಲಕರ್ಣಿ ಹಾಗೂ ಗೌರಿ ದೇಶಪಾಂಡೆ ಓದಿದರು. ತಾಂತ್ರಿಕ ಸಲಹೆಗಾರರಾಗಿ ಜ್ಯೋತಿ ಕುಲಕರ್ಣಿ, ಚೇತನಾ ಬೋಸ್ಲೆ, ಡೋಮಿನಿಕ್‌, ರಜನಿ ಪೂಜಾರಾ ಸಹಕರಿಸಿದರು. ಅಧ್ಯಕ್ಷರ ಪರಿಚಯವನ್ನು ರತ್ನಾ ಕುಲಕರ್ಣಿಯವರು ಮಾಡಿದರೆ, ಸಾಂಸ್ಕೃತಿಕ ಚಟುವಟಿಕೆಗಳ ಬಹುಮಾನ ವಿಜೇತರ ಹೆಸರನ್ನು ಅಶ್ವಿ‌ನಿ ಬಂಗೇರಾ ಓದಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ರಂಜಿಸಿದರು. ಸುನೀತಾ ಮಠ ಅವರು ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ನಿರ್ವಹಿಸಿದರು. ರಮೇಶ ಚಾನಕೋಟೆ ವಂದಿಸಿದರು.

ಪ್ರೋತ್ಸಾಹ ಕೊಡುವಂತಹ ಮನಸ್ಸುಗಳು ಬೇಕು :

ವಿದ್ಯಾ ಪ್ರಸಾರಕ ಮಂಡಳದ ಅಧ್ಯಕ್ಷ ಡಾ| ಪಿ. ಎಂ. ಕಾಮತ್‌ ಅವರು ಅತಿಥಿಗಳನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ ಯನ್ನಿತ್ತು ಗೌರವಿಸಿದರು. ಸಂಸ್ಥೆಯ 33ನೇ ವಾರ್ಷಿಕ ಜ್ಞಾನಜ್ಯೋತಿ ಸಂಚಿಕೆಯನ್ನು ಅನಾವರಣಗೊಳಿಸಿ ಮಾತ ನಾಡಿದ ಅವರು, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಜ್ಞಾನದ ಕೊರತೆಯಿಲ್ಲ. ಅವರು ಜ್ಞಾನ ತುಂಬಿದ ಅಕ್ಷಯ ಪಾತ್ರೆ. ಆದರೆ ಅವರಿಗೆ ಪ್ರೋತ್ಸಾಹ ಕೊಡುವಂತಹ ಮನಸ್ಸುಗಳು ಬೇಕಾಗಿವೆ. ಅಂತಹ ಅಮೂಲ್ಯವಾದ ಮುತ್ತು-ರತ್ನಗಳನ್ನು ಹುಡುಕಿ ಜ್ಞಾನಾರ್ಜನೆ ಗೊಳಿಸುವ ಕಾರ್ಯವನ್ನು ವಿದ್ಯಾ ಪ್ರಸಾರಕ ಮಂಡಳವು ಪ್ರಾರಂಭದಿಂದಲೂ ಮಾಡಿಕೊಂಡು ಬರು ತ್ತಿದೆ. ವಿದ್ಯಾರ್ಥಿಗಳ ಅಧ್ಯಯನಕ್ಕೆ ಸಹಾಯ, ಸಹಕಾರ ಮಾಡಲು ಉದಾರ ಮತ್ತು ವಿಶಾಲ ಮನಸ್ಸುಳ್ಳವರು ಮುಂದೆ ಬರ ಬೇಕು. ಕನ್ನಡ ಮಾಧ್ಯಮದ ಮಕ್ಕಳು ಬಡವರಾಗಿರಬಹುದು, ಆದರೆ ಅವರು ಜ್ಞಾನದ ಕ್ಷೇತ್ರದಲ್ಲಿ ಅಪಾರ ಪಾಂಡಿತ್ಯ ಮತ್ತು ಪ್ರತಿಭೆ ಹೊಂದಿದ್ದಾರೆ. ಅವರ ಶ್ರೇಯೋಭಿವೃದ್ಧಿಯೇ  ವಿದ್ಯಾ ಪ್ರಸಾರಕ ಮಂಡಳದ ಶೈಕ್ಷಣಿಕ ಕಾರ್ಯಗಳಲ್ಲಿ ಒಂದಾಗಿದೆ ಎಂದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.