ವಾರ್ಷಿಕ ಪ್ರತಿಷ್ಠಾಮಹೋತ್ಸವ
Team Udayavani, Jan 23, 2021, 7:03 PM IST
ಮುಂಬಯಿ: ಬೊರಿವಲಿ ಪೂರ್ವದ ಸಾವರಾಡಾದ ಶ್ರೀ ಶನಿಮಹಾತ್ಮ ಪೂಜಾ ಮಿತ್ರ ಮಂಡಳಿಯ 18ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಮತ್ತು 46ನೇ ವಾರ್ಷಿಕ ಶ್ರೀ ಶನಿಗ್ರಂಥ ಪಾರಾಯಣವು ಜ. 26ರಂದು ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಜರಗಲಿದೆ.
ಶ್ರೀ ಶನಿಮಂದಿರದ ಪ್ರಧಾನ ಅರ್ಚಕ ವಿಜಯ ಉಪಾಧ್ಯಾಯ ಅವರ ಪೌರೋಹಿತ್ಯದಲ್ಲಿ ಶನಿ ಮಂದಿರದ ವಠಾರದಲ್ಲಿ ಬೆಳಗ್ಗೆ 8ರಿಂದ ದೇವತಾ ಪ್ರಾರ್ಥನೆ, ಗಣಪತಿ ಹೋಮ, ಶನಿಶಾಂತಿ, ನವಕ ಕಲಶ ಪ್ರಧಾನ ಹೋಮ, ಆಶ್ಲೇಷಾ ಬಲಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಅಪರಾಹ್ನ 2ರಿಂದ ಶನಿದೇವರ ಕಲಶ ಪ್ರತಿಷ್ಠಾಪನೆ, ಅಪರಾಹ್ನ 2.30ರಿಂದ ರಾತ್ರಿ 7ರ ವರೆಗೆ ಮಂದಿರದ ಸದಸ್ಯರಿಂದ ಶ್ರೀ ಶನಿಗ್ರಂಥ ಪಾರಾಯಣ, ಭಜನೆ, ಸಂಕೀರ್ತನೆ, ರಾತ್ರಿ 8ರಿಂದ ರಂಗಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ:ಹವಾಮಾನ ವೈಪರೀತ್ಯ ಕೃಷಿಗೆ ತೊಂದರೆ
ಕೋವಿಡ್ ಲಾಕ್ಡೌನ್ ಮಾರ್ಗಸೂಚಿ ಗಳಿಗೆ ಅನುಗುಣವಾಗಿ ಕಾರ್ಯಕ್ರಮವು ಸರಳ ರೀತಿಯಲ್ಲಿ ಜರಗಲಿರುವುದು. ಆದ್ದರಿಂದ ಯಾವುದೇ ರೀತಿಯ ಸಾರ್ವಜನಿಕ ಸೇವೆ ಮತ್ತು ಅನ್ನದಾನ ಕಾರ್ಯಕ್ರಮಗಳು ಇರುವುದಿಲ್ಲ. ಭಕ್ತರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ತೀರ್ಥ ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ಮಂಡಳಿಯ ಪ್ರಕಟನೆ ತಿಳಿಸಿದೆ.