ಅಪ್ಪಾಜಿ ಬೀಡು ಫೌಂಡೇಶನ್ :ದಿನೇಶ್ ಕುಲಾಲ್ ಕಾರ್ಯಾಧ್ಯಕ್ಷ
Team Udayavani, Mar 22, 2018, 3:36 PM IST
ಮುಂಬಯಿ: ಕಳೆದ 25 ವರ್ಷಗಳಿಂದ ನಗರದ ವರ್ಲಿ ಪರಿಸರದಲ್ಲಿ ಧಾರ್ಮಿಕ ಹಾಗೂ ಸಮಾಜ ಸೇವಾ ನಿರತವಾಗಿರುವ ಅಪ್ಪಾಜಿ ಬೀಡು ಫೌಂಡೇಶನ್ ಈಗಾಗಲೇ ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದು, ಇದರ ಬಗ್ಗೆ ವಿಶೇಷ ಸಭೆಯು ಮಾ. 18 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಿತು.
ಅಪ್ಪಾಜಿ ಬೀಡು ಫೌಂಡೇಶನ್ ರಮೇಶ್ ಗುರುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ನಗರದ ಪತ್ರಕರ್ತ, ಸಂಘಟಕ ಬಿ, ದಿನೇಶ್ ಕುಲಾಲ್ ಇವರನ್ನು ಬೆಳ್ಳಿ ಹಬ್ಬ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ಅವಿರೋಧವಾಗಿ ನೇಮಿಸಲಾಯಿತು. ಅಪ್ಪಾಜಿ ಬೀಡು ಫೌಂಡೇಶನ್ನ 25 ನೇ ವಾರ್ಷಿಕ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸ ಲಿದ್ದು ಇದಕ್ಕೆ ಸರ್ವರ ಸಹಕಾರ ಅಗತ್ಯ ಎಂದು ರಮೇಶ್ ಗುರುಸ್ವಾಮಿ ಅವರು ಇದೇ ಸಂದರ್ಭದಲ್ಲಿ ನುಡಿದರು.
ಸಭೆಯಲ್ಲಿ ಅಪ್ಪಾಜಿ ಬೀಡು ಫೌಂಡೇಶನ್ನ ಆಡಳಿತ ಟ್ರಸ್ಟಿ ಶಾಂಭವಿ ಶೆಟ್ಟಿ, ಟ್ರಷ್ಟಿಗಳಾದ ರತ್ನಾಕರ ಶೆಟ್ಟಿ, ರಘುನಾಥ ಶೆಟ್ಟಿ, ಅಧ್ಯಕ್ಷರಾದ ಕೇದಗೆ ಸುರೇಶ್ ಶೆಟ್ಟಿ, ಉಪಾಧ್ಯಕ್ಷ ಸಂತೋಶ್ ಶೆಟ್ಟಿ, ಕಾರ್ಯದರ್ಶಿ ವಸಂತ್ ಪೂಜಾರಿ ಹಾಗೂ ಇತರ ಸದಸ್ಯರುಗಳು ಉಪಸ್ಥಿತರಿದ್ದರು.
ಬೆಳ್ಳಿಹಬ್ಬ ಸಂಭ್ರಮಾಚರಣೆಯು ಡಿ. 30 ರಂದು ದಿನೇಶ್ ಕುಲಾಲ್ ಅವರ ಸಾರಥ್ಯದಲ್ಲಿ ನಗರದಲ್ಲಿ ಹೃದಯಭಾಗದಲ್ಲಿ ಆಯೋಜಿಸುವುದಾಗಿ ಸಭೆಯಲ್ಲಿ ನಿರ್ಧರಿಸಲಾಯಿತು. ಶ್ರೀಕ್ಷೇತ್ರದ ಭಕ್ತಾದಿಗಳು, ಮಹಿಳಾ ವಿಭಾಗದ ಸದಸ್ಯೆಯರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ