ಅರಸಿನ ಕುಂಕುಮ ಸೌಭಾಗ್ಯದ ಸಂಕೇತ: ಕಲ್ಯಾಣಿ ಪುತ್ರನ್‌


Team Udayavani, Mar 20, 2020, 6:26 PM IST

mumbai-tdy-1

ಮುಂಬಯಿ, ಮಾ. 19: ಹಿಂದೂ ಧರ್ಮದಲ್ಲಿ ಕುಂಕುಮ ಮತ್ತು ಅರಸಿನಕ್ಕೆ ಪವಿತ್ರ ಸ್ಥಾನವಿದ್ದು, ಯಾವುದೇ ಪೂಜೆ ಅಥವಾ ಇನ್ನಿತರ ಶುಭ ಸಂದರ್ಭಗಳಲ್ಲಿ ಇವುಗಳನ್ನು ವಿಶೇಷವಾಗಿ ಬಳಸಿಕೊಂಡು ಪೂಜ್ಯನೀಯ ಸ್ಥಾನವನ್ನು ನೀಡುತ್ತಾರೆ. ವಿವಾಹಿತ ಮಹಿಳೆಯರು ತಮ್ಮ ಕೆನ್ನೆಗೆ ಅರಸಿನವನ್ನು ಮತ್ತು ಹಣೆಗೆ ಕುಂಕುಮದ ಸಿಂಧೂರವನ್ನಿಟ್ಟು ತಮ್ಮ ಮುತ್ತೈದೆತನವನ್ನು ಸಂಕೇತಿಸುತ್ತಾರೆ. ಇದಿಷ್ಟೇ ಅಲ್ಲದೆ ಕುಂಕುಮ ಮತ್ತು ಅರಸಿನ ತನ್ನದೇ ಆದ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು, ಮಹಿಳೆಯರ ಸೌಭಾಗ್ಯದ ಸಂಕೇತವಾಗಿದೆ. ಮಾತ್ರವಲ್ಲದೆ ಆರೋಗ್ಯ ಕ್ಷೇತ್ರದಲ್ಲೂ ಕೂಡಾ ಅರಸಿನ ಗಣನೀಯ ಸ್ಥಾನವನ್ನು ಪಡೆದುಕೊಂಡಿದೆ ಎಂದು ಸ್ಥಳೀಯ ಸಮಾಜ ಸೇವಕಿ ಕಲ್ಯಾಣಿ ಪುತ್ರನ್‌ ಅವರು ನುಡಿದರು.

ಭಾಯಂದರ್‌ ಪಶ್ಚಿಮದ ಶ್ರೀ ಭದ್ರಕಾಳಿ ಮಂದಿರದಲ್ಲಿ ಜಗನ್ನಾಥ ಪುತ್ರನ್‌ ಅವರ ಪ್ರಾಯೋಜಕತ್ವದಲ್ಲಿ ಇತ್ತೀಚೆಗೆ ನಡೆದ ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಮನೆ ಮದ್ದಾಗಿ ಎಲ್ಲರ ಮನೆಯಲ್ಲೂ ಸ್ಥಾನವನ್ನು ಪಡೆದುಕೊಂಡಿರುವ ಅರಸಿನ ಒಂದು ರೀತಿಯಲ್ಲಿ ಸಂಜೀವಿನಿಯಾಗಿದೆ. ಅನಾದಿ ಕಾಲದಿಂದಲೂ ವಿವಾಹಿತ ಮಹಿಳೆಯರು ಕುಂಕುಮವನ್ನು ಸಿಂಧೂರ ಮತ್ತು ತಿಲಕದಂತೆ ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಪತಿಯ ದೀರ್ಘಾಯುಷ್ಯದ ಸಂಕೇತವಾಗಿ ಇವರು ಕುಂಕುಮದಿಂದ ಬೈತಲೆಯ ನಡುವೆ ಸಿಂಧೂರವನ್ನು ಹಚ್ಚಿಕೊಳ್ಳುತ್ತಾರೆ. ಆದ್ದರಿಂದ ಕುಂಕುಮವು ಮಹಿಳೆಯ ಶಕ್ತಿಯ ಸಂಕೇತವಾಗಿದೆ ಎಂದು ನುಡಿದು ಉಪಸ್ಥಿತರಿದ್ದ ಮಹಿಳೆಯರಿಗೆ ಶುಭಹಾರೈಸಿದರು.

ಪ್ರಾರಂಭದಲ್ಲಿ ಶ್ರೀ ಭದ್ರಕಾಳಿ ಭಜನಾ ಮಂಡಳಿ ಮತ್ತು ಸ್ಥಳೀಯ ಭಜನಾ ಮಂಡಳಿಗಳ ಮಹಿಳೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಶುಭ ಹಾರೈಸಿಕೊಂಡರು. ಮಂದಿರದ ಪ್ರಧಾನ ಅರ್ಚಕ ಚಂದ್ರಶೇಖರ್‌ ಭಟ್‌ ಇವರ ಪೌರೋಹಿತ್ಯದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.

ಅರಸಿನ ಕುಂಕುಮ ಕಾರ್ಯಕ್ರಮದ ಪ್ರಾಯೋಜಕರಾದ ಜಗನ್ನಾಥ ಪುತ್ರನ್‌ ಅವರು ಸ್ವಾಗತಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಂದಿರದ ಟ್ರಸ್ಟಿ ಎ. ವಿ. ಪ್ರಮೋದ್‌, ಸ್ಥಳೀಯ ಸಮಾಜ ಸೇವಕರಾದ ರಾಮಚಂದ್ರ ಉಚ್ಚಿಲ್‌, ವಿಶ್ವನಾಥ್‌ ಮೆಂಡನ್‌, ಜಯರಾಮ, ಭಾಯಂದರ್‌ ಶ್ರೀ ಸ್ವಾಮಿ ಶರಣಂ ಅಯ್ಯಪ್ಪ ಭಕ್ತವೃಂದದ ಕಾರ್ಯದರ್ಶಿ ಸುಧೀರ್‌ ಪುತ್ರನ್‌, ಮೀರಾರೋಡ್‌ ರಾಯರ ಬಳಗ ಭಜನ ಮಂಡಳಿಯ ಗಿರೀಶ್‌ ಕರ್ಕೇರ ಅವರನ್ನು ಶಾಲು ಹೊದೆಸಿ, ಫಲಪುಷ್ಪವನ್ನಿತ್ತು ಗೌರವಿಸಲಾಯಿತು. ಸ್ಥಳೀಯರಾದ ಮುಕುಂದ್‌ ಪುತ್ರನ್‌, ಚಿತ್ರಾನಂದ ಪುತ್ರನ್‌, ಬಾಲಕೃಷ್ಣ ಕಾಂಚನ್‌ ಮತ್ತು ಸರ್ವ ಸದಸ್ಯರು ಪಾಲ್ಗೊಂಡು ಸಹಕರಿಸಿದರು. ಕಾರ್ಯಕ್ರಮದ ಪ್ರಾಯೋಜಕ ಜಗನ್ನಾಥ ಪುತ್ರನ್‌ ಅವರು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.