ಆಷಾಢ ವಾರ್ಕರಿ ಪಲ್ಲಕ್ಕಿ ಸಮಾರಂಭ ಮೇ 30ರ ಬಳಿಕ ನಿರ್ಣಯ: ಅಜಿತ್ ಪವಾರ್
Team Udayavani, May 18, 2020, 6:12 PM IST
ಪುಣೆ, ಮೇ 17: ಕೋವಿಡ್ ಸ್ಥಿತಿಯನ್ನು ಪರಿಗಣಿಸಿ ಮೇ 30ರ ಅನಂತರ ಡೆಹು, ಆಳಂದಿ ಮತ್ತು ಆಷಾಢ ವಾರ್ಕರಿ ಪಲ್ಲಕ್ಕಿ ಸಮಾರಂಭಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಈ ನಿರ್ಧಾರ ತೆಗೆದುಕೊಳ್ಳುವಾಗ ವಾರ್ಕರಿ ಪಂಥದಗಣ್ಯರೊಂದಿಗೆ ಸಭೆ ನಡೆಸಲಗುವುದು ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಸ್ಪಷ್ಟಪಡಿಸಿದ್ದಾರೆ.
ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಭಾಗೀಯ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಆಷಾಢ ವಾರ್ಕರಿ ಕುರಿತು ಪ್ರತಿಕ್ರಿಯಿಸಿದ್ದಾರೆ. ಸಂತ ಜ್ಞಾನೇಶ್ವರ ಮಹಾರಾಜ್ ಮತ್ತು ಸಂತ ತುಕಾರಂ ಮಹಾರಾಜರ ಪಲ್ಲಕ್ಕಿಯು ವಾರ್ಕರಿ ಪಂಥದಲ್ಲಿ ಐತಿಹಾಸಿಕ ಮಹತ್ವವನ್ನು ಹೊಂದಿದೆ. ಈ ವಾರ್ಕರಿ ಅನೇಕ ವರ್ಷಗಳ ಸಂಪ್ರದಾಯವನ್ನು ಹೊಂದಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಅಪಾಯವನ್ನು ಪರಿಗಣಿಸಿ, ಮುಂದಿನ 15 ದಿನಗಳ ಅನಂತರ ವಾರ್ಕರಿ ಪಂಥದ ಗಣ್ಯರೊಡನೆ ಚರ್ಚೆ ನಡೆಸುವ ಮತ್ತು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡ ಅನಂತರವೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.
ಆಳಂದಿ ಪಂಢರಪುರ ಮತ್ತು ಡೆಹುವಿನಿಂದ ಪಂಢರಪುರ ಪಲ್ಲಕ್ಕಿ ನಿರ್ಗಮನಕ್ಕೆ ಆಲಂಡಿ ಮತ್ತು ಡೆಹು ಸಂಸ್ಥೆಗಳ ಮುಖ್ಯಸ್ಥರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಆಷಾಢ ವಾರಿ ಪಲ್ಲಕ್ಕಿ ಸಮಾರಂಭಕ್ಕೆ ಸಂಬಂಧಿಸಿದಂತೆ ಸೊಲ್ಲಾಪುರ, ಸತಾರಾ ಮತ್ತು ಪಂಢರಪುರದ ಗಣ್ಯರ ಅಭಿಪ್ರಾಯಗಳನ್ನು ಪರಿಗಣಿಸ ಲಾಗುವುದು. ಈ ವಿಷಯವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಮತ್ತು ಆ ಬಳಿಕವೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?