ಮೊಗವೀರ ವ್ಯವಸ್ಥಾಪಕ ಮಂಡಳಿ: ಉಪಾಧ್ಯಕರಾಗಿ ಅಶೋಕ್‌ ಸುವರ್ಣ ಆಯ್ಕೆ


Team Udayavani, Jan 15, 2021, 4:24 PM IST

Ashok’s golden choice as vice president

ಮುಂಬಯಿ: ನಗರದ ಹಿರಿಯ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಸಂಘಟನೆಯಾದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಉಪಾಧ್ಯಕ್ಷರಾಗಿ ಅಶೋಕ್‌ ಸುವರ್ಣ ಆಯ್ಕೆಯಾಗಿದ್ದಾರೆ. ಜ. 7ರಂದು ನಡೆದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಸಮಿತಿಯ ಸಭೆಯಲ್ಲಿ ಅವರನ್ನು ಉಪಾಧ್ಯಕ್ಷರನ್ನಾಗಿ ನಿಯುಕ್ತಿಗೊಳಿಸಲಾಯಿತು. ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಅಶೋಕ್‌ ಸುವರ್ಣ ಅವರನ್ನು ಮೊಗವೀರ ಮಂಡಳಿಯ ವತಿಯಿಂದ ಮಹಿಳಾ ವಿಭಾಗದ ಅಧ್ಯಕ್ಷೆ ಪ್ರೇಮಲತಾ ಪುತ್ರನ್‌ ಅವರು ಅಭಿನಂದಿಸಿದರು.

ಈ ಸಂದರ್ಭ ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಕೆ. ಎಲ್‌. ಬಂಗೇರ, ಟ್ರಸ್ಟಿಗಳಾದ ದೇವರಾಜ್‌ ಬಂಗೇರ, ಹರೀಶ್‌ ಪುತ್ರನ್‌, ಲಕ್ಷ್ಮಣ್‌ ಶ್ರೀಯಾನ್‌, ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಸಾಲ್ಯಾನ್‌, ಸಂಜೀವ ಸಾಲ್ಯಾನ್‌, ಬಿ. ಕೆ. ಪ್ರಕಾಶ್‌, ಕೋಶಾಧಿಕಾರಿ ಹೇಮಾನಂದ್‌ ಕುಂದರ್‌, ದಯಾನಂದ್‌ ಬಂಗೇರ, ದಿಲೀಪ್‌ ಮೂಲ್ಕಿ, ಮಹಿಳಾ ವಿಭಾಗದ ಜತೆ ಕಾರ್ಯದರ್ಶಿ ಪ್ರೀತಿ ಶ್ರೀಯಾನ್‌ ಮೊದಲಾದವರು ಉಪಸ್ಥಿತರಿದ್ದರು.

ಮೊಗವೀರ ವ್ಯವಸ್ಥಾಪಕ ಮಂಡಳಿ ಯ ಆಡಳಿತ ಸಮಿತಿಯಲ್ಲಿ 1985ರಿಂದ ಸುದೀರ್ಘ‌ ಕಾಲದಿಂದ ಕಾರ್ಯನಿರ್ವ ಹಿಸುತ್ತಿರುವ ಅಶೋಕ್‌ ಸುವರ್ಣ ಅವರು ಮೊಗವೀರ ಪತ್ರಿಕೆಯ ಗೌರವ ಸಂಪಾದಕರಾಗಿಯೂ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸುದೀರ್ಘ‌ ಕಾಲದ ಅನುಭವ, ಸಂಘಟನಾತ್ಮಕ ಶಕ್ತಿಯನ್ನು ಹಾಗೂ ಪತ್ರಿಕೆಯ ಪ್ರಗತಿಗಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅವರನ್ನು ಮಂಡಳಿಯ ಉಪಾಧ್ಯಕ್ಷರ ನ್ನಾಗಿ ನೇಮಿಸಲಾಗಿದೆ ಎಂದು ಮೂಲ ಗಳು ತಿಳಿಸಿವೆ.

ಅಶೋಕ್‌ ಸುವರ್ಣ ಅವರನ್ನು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ವತಿಯಿಂದಲೂ ಸಮಿತಿಯ ಅಧ್ಯಕ್ಷ ಸದಾನಂದ ಕೋಟ್ಯಾನ್‌ ಅವರುಅಭಿನಂದಿಸಿ ಶುಭ ಹಾರೈಸಿದರು.

ಇದನ್ನೂ ಓದಿ: ಸಿದ್ಧರಾಮೇಶ್ವರ ತತ್ವಾದರ್ಶ ಪಾಲಿಸಿ; ಸುಭಾಷ ಗುತ್ತೇದಾರ

ಈ  ಸಂದರ್ಭದಲ್ಲಿ ಶ್ರೀನಿವಾಸ್‌ ಕಾಂಚನ್‌,  ಮೊಗವೀರ ಮಂಡಳಿಯ ಪದಾಧಿಕಾರಿ ಗಳು, ಮಂಡಳಿಯ ಟ್ರಸ್ಟಿಗಳಾದ ಹರೀಶ್‌ ಪುತ್ರನ್‌, ಲಕ್ಷ್ಮಣ್‌ ಶ್ರೀಯಾನ್‌ ಮೊದಲಾದವರು ಉಪಸ್ಥಿತರಿದ್ದರು.

ಅಶೋಕ್‌ ಸುವರ್ಣ  ಅವರ ಪರಿಚಯ: ಅಶೋಕ್‌ ಸುವರ್ಣ ಅವರು ಮುಂಬಯಿ ಕನ್ನಡಿಗರಿಗೆ ಪರಿಚಿತರು. ಪತ್ರಕರ್ತ ರಾಗಿ ತಮ್ಮ ಅಂಕಣ ಬರಹಗಳ ಮೂಲಕ ಎಲ್ಲರ ಮನಗೆದ್ದವರು. ವೃತ್ತಿಯಲ್ಲಿ ಬ್ಯಾಂಕ್‌ ಉದ್ಯೋಗಿಯಾದರೂ ಸಮಾಜ ಕಲ್ಯಾಣ ಕ್ಕಾಗಿ ಅವರು ಸತತವಾಗಿ ಶ್ರಮಿಸುತ್ತಾ ಬಂದಿದ್ದಾರೆ.

ಮೊಗವೀರ ವ್ಯವಸ್ಥಾಪಕ ಮಂಡಳಿಯ ಮುಖವಾಣಿ ಮೊಗವೀರಮಾಸಿಕದ ಗೌರವ ಸಂಪಾದಕರಾಗಿಯ  ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿದ್ದಾರೆ. ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಮುಂಬಯಿ ಶಾಖೆಯ ಪದಾಧಿಕಾರಿಯಾಗಿ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಗೌರವ ಪ್ರಧಾನಕಾರ್ಯದರ್ಶಿಯಾಗಿ, ಒಡೆಯರಬೆಟ್ಟು  ಗಳಲ್ಲೂ ತೊಡಗಿಸಿಕೊಂಡಿದ್ದಾರೆ.

ಮೊಗವೀರ ವ್ಯವಸ್ಥಾಪಕ ಮಂಡಳಿಯ ಶತಮಾನೋತ್ಸವದ ಸವಿನೆನಪಿಗಾಗಿ ಮಹತ್ವದ ಕೃತಿಗಳನ್ನು ಬೆಳಕಿಗೆ ತರುವ ಕಾರ್ಯವನ್ನು ಅವರು ಮಾಡಿದ್ದುಉಲ್ಲೇಖನೀಯ ಅಂಶ. ಮೊಗವೀರ ಬ್ಯಾಂಕ್‌ನಲ್ಲಿ ಉದ್ಯೋಗಿ ಯಾಗಿ ಮುಂಬಯಿಯಲ್ಲಿ ಕನ್ನಡದ ತೇರನ್ನು ಎಳೆಯುತ್ತಿರುವ ಅಶೋಕ್‌ ಸುವರ್ಣರು ಬಂಡಾಯ ಬರಹಗಾರರಾಗಿ ಹೆಸರಾದ ವರು. ಜಾತೀಯ ಹಾಗೂ ಇಲ್ಲಿನ ಕನ್ನಡಪರ ಸಂಘ-ಸಂಸ್ಥೆಗಳಲ್ಲಿ ದುಡಿಯುತ್ತಿರುವ ಅವರು ಹೊಸ ಹೊಸ ಪ್ರತಿಭೆಗಳನ್ನು ಮುಂಬಯಿಯಲ್ಲಿ ಮೊಗವೀರದ ಮೂಲಕ ಪರಿಚಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಳನಾಡಿನ ಜನರ ವೃತ್ತಿ ಸಮಸ್ಯೆಗಳನ್ನು ಕೂಲಂಕುಷವಾಗಿ ತಿಳಿದು ತಮ್ಮ ಬರಹಗಳಲ್ಲಿ ದಾಖಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಮುಂಬಯಿಯ ಅನೇಕ ಚಾರಿತ್ರಿಕ ಕಟ್ಟಡಗಳ ಮಾಹಿತಿ ಸಂಗ್ರಹವನ್ನೊಳಗೊಂಡ ಅವರ ಉಪಯುಕ್ತ ಲೇಖನಗಳು ಮೊಗವೀರ ಸಂಚಿಕೆಯಲ್ಲಿ ಸರಣಿಯಾಗಿ ಪ್ರಕಟಗೊಂ ಡಿವೆ. ನಿಗೂಢ ಮಾಯಾ ಜಗತ್ತು, ಮಹಾಕಾಳಿ ಕೇವ್ಸ್‌ನ ಮಹಾನುಭಾವ, ಮುಂಬಯಿ ಪರಿಕ್ರಮಣ, ಮೊಗವೀರ ವ್ಯವಸ್ಥಾಪಕ ಮಂಡಳಿಯ ಇತಿಹಾಸ ಇನ್ನಿತರ ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. ಮಹಾರಾಷ್ಟ್ರ ಸರಕಾರದ ಮಾನ್ಯತೆ ಪಡೆದ ಮೊದಲ ಕನ್ನಡಿಗ ಪತ್ರಕರ್ತರೂ ಅವರು ಆಗಿರುವುದು ವಿಶೇಷತೆಯಾಗಿದೆ.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.