ನಗರದ ರಂಗಕರ್ಮಿ ಅನಿಲ್‌ ಕುಮಾರ್‌ ಹೆಗ್ಡೆ ಅವರಿಗೆ ಸಮ್ಮಾನ


Team Udayavani, Mar 22, 2020, 6:54 PM IST

ನಗರದ ರಂಗಕರ್ಮಿ ಅನಿಲ್‌ ಕುಮಾರ್‌ ಹೆಗ್ಡೆ ಅವರಿಗೆ ಸಮ್ಮಾನ

ಮುಂಬಯಿ, ಮಾ. 21: ಸಿರಿಬೈಲು ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಸಿರಿಬೈಲು ಕಡ್ತಲ ಇದರ ಸಾಂಸ್ಕೃತಿಕ ಸಂಭ್ರಮ 2020 ಸಮಾರಂಭವು ಇತ್ತೀಚೆಗೆ ಶ್ರೀ ಭರ್ಬರೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನ ಸಿರಿಬೈಲು ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪ್ರಶಸ್ತಿ ಪ್ರದಾನಿಸಿ ಅಭಿನಂದಿಸಿ ಸಮ್ಮಾನಿಸಲಾಯಿತು. ಕಲಾ ಸಾಧಕ ಪ್ರಶಸ್ತಿಯನ್ನು ಮುಂಬಯಿ ರಂಗಭೂಮಿಯ ರಂಗನಟ, ಲೇಖಕ, ನಿರ್ದೇಶಕ ಅನಿಲ್‌ ಕುಮಾರ್‌ ಹೆಗ್ಡೆ ಪೆರ್ಡೂರು ಇವರಿಗೆ ನೀಡಿ ಸಮ್ಮಾನಿಸಲಾಯಿತು. ಯುವ ಉದ್ಯಮಿ ಪ್ರಶಸ್ತಿಯನ್ನೂ ಎನರ್ಜಿ ಗ್ರೀನ್‌ ಬಯೋಟೆಕ್‌ ಇದರ ಮಾಲಕ ಯುವ ಪ್ರತಿಭೆ ಅಶ್ವತ್ಥ್ ಹೆಗ್ಡೆಯವರಿಗೆ ನೀಡಲಾಯಿತು.

ವಸಂತ್‌ ಮುನಿಯಾಲ್‌, ಉಪೇಂದ್ರ ವಾಗ್ಲೆ, ಅಶ್ವಥ್‌ ಕುಮಾರ್‌ ಹೆಗ್ಡೆ, ಪುರುಷೋತ್ತಮ್‌ ನಾಯ್ಕ, ಸಚಿನ್‌ ರಾಜ್‌ ಶೆಟ್ಟಿ ಇವರುಗಳನ್ನು ಲೆಕ್ಕ ಪರಿಶೋಧಕರು ಎಂಬ ಸಾಧನೆಗೆ ಸಮ್ಮಾನಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧನೆಗೈದ ಕು| ಅನಿಷಾ ಪೂಜಾರಿ ಮತ್ತು ವಾದ್ಯ ಸಂಗೀತ ಕಲಾವಿದೆ ಡಾ| ಸುಧಾಕರ್‌ ಶೇರಿಗಾರ್‌ ಇವರುಗಳನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದೇವಸ್ಥಾನದ ಆಡಳಿತ ಮೋಕ್ತೇಸರ ವಸಂತ ಬೆಳಿರಾಯ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸದಾಶಿವ ಪ್ರಭು ಉಡುಪಿ ಜಿಲ್ಲಾ ಅಪಾರ ಜಿಲ್ಲಾಧಿಕಾರಿ ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಧರ್ಮರಾಜ ಕುದ್ರೆ, ರಾಷ್ಟ್ರೀಯ ರೈಲ್ವೇ ಚಿತ್ರ ಪುರಸ್ಕೃತ ಪೃಥ್ವಿ ಕೊಣ್ಣನೂರು, ಹೆಗ್ಗಡೆ ಸೇವಾ ಸಂಘ ಮುಂಬಯಿ ಅಧ್ಯಕ್ಷ ಶಂಕರ್‌ ಹೆಗ್ಡೆ, ಸಂತೋಷ್‌ ಹೆಗ್ಡೆ, ಸಾಹಿತಿ ಮೊಹಮದ್‌ ಬಡ್ಡೂರು, ಜಿಯಾನಂದ ಹೆಗ್ಡೆ ಬೈರಂಪಳ್ಳಿ ಮತ್ತು ಡಾ| ಪ್ರಮೋದ್‌ ಕುಮಾರ್‌ ಹೆಗ್ಡೆ ಕಡ್ತಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಸಿರಿಬೈಲು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳ್ನಾಡಿದರು. ಕಾರ್ಯದರ್ಶಿ ಮನೋಹರ್‌ ಪೂಜಾರಿ ವಂದಿಸಿದರು.

ಅಂಗನವಾಡಿ ಮಕ್ಕಳಿಂದ ನೃತ್ಯ ಮತ್ತು ಮುಂಬಯಿ ಹೆಸರಾಂತ ನಾಟಕ ತಂಡ ರಂಗಮಿಲನ ಇವರಿಂದ ನಯನಾ ಸಚಿನ್‌ ಇವರು ರಚಿಸಿ, ಮನೋಹರ್‌ ಶೆಟ್ಟಿ ನಂದಳಿಕೆ ನಿರ್ದೇಶನದ ಕುತೂಹಲ ಬರಿತ ತುಳು ಹಾಸ್ಯ ನಾಟಕ ದಾದನ ಉಂಡುಗೆ ಪ್ರದರ್ಶನಗೊಂಡಿತು. ಕಾರ್ಯಕ್ರಮ ಸಂಯೋಜನೆಯನ್ನು ಹೆಸರಾಂತ ಕಲಾವಿದ ಉಮೇಶ್‌ ಹೆಗ್ಡೆ ಕಡ್ತಲ ಮತ್ತು ಹರೀಶ್‌ ಪೂಜಾರಿ ಸಿರಿಬೈಲು ಮಾಡಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.