ಕಲಾಜಗತ್ತು ಕೂಡು ಕುಟುಂಬದ ರಂಗಭೂಮಿ: ಡಾ| ತೋನ್ಸೆ ವಿಜಯ ಕುಮಾರ್‌ ಶೆಟ್ಟಿ


Team Udayavani, Nov 27, 2021, 11:31 AM IST

ಕಲಾಜಗತ್ತು ಕೂಡು ಕುಟುಂಬದ ರಂಗಭೂಮಿ: ಡಾ| ತೋನ್ಸೆ ವಿಜಯ ಕುಮಾರ್‌ ಶೆಟ್ಟಿ

ಮುಂಬಯಿ: ಏಳು-ಬೀಳುಗಳ ಮಧ್ಯೆ ತೃಪ್ತಿಯಿಂದ ಬಾಳುವುದೇ ಜೀವನ. ಕೋಪ, ದ್ವೇಷಗಳನ್ನು ಬಿಟ್ಟು ಹಸನ್ಮುಖದ ನಡುವೆ ಸಂಸಾರ ಸಾಗಿಸುವ ಸಣ್ಣ ಪ್ರಯತ್ನ ನಮ್ಮ ಮೋಕೆದ ಜೋಕುಲು ನಾಟಕದ ಉದ್ದೇಶ. ಮುಂಬಯಿ ಮಹಾನಗರದ ಕಲಾಜಗತ್ತು ಸಂಸ್ಥೆ ಕೂಡು ಕುಟುಂಬದ ರಂಗ ಭೂಮಿಯಾಗಿದೆ. ಕಲಾವಿದರು, ಕಲಾಪೋಷಕರು, ಕಲಾ ಪ್ರೇಕ್ಷಕರು ಇದರ ಸದಸ್ಯರು. ಇದರಲ್ಲಿ ಅಭಿನಯಿಸುವ ಯುವ ಪ್ರತಿಭೆಗಳಿಗೆ ಮುಕ್ತ ಅವಕಾಶವಿದೆ. ಹಳೇ ಬೇರಿನೊಂದಿಗೆ ಹೊಸ ಚಿಗುರನ್ನು ಪಸರಿಸಿ ನಟನ ಸಾಮರ್ಥ್ಯದಲ್ಲಿ ಕಿರಿಯರನ್ನು ಪರಿಪಕ್ವಗೊಳಿಸುವ ಪ್ರಾಮಾಣಿಕ ಸಾಧನೆ ನಮ್ಮದಾಗಿದೆ ಎಂದು ಕಲಾಜಗತ್ತು ಸಂಸ್ಥೆಯ ಸ್ಥಾಪಕ, ಖ್ಯಾತ ನಟ, ನಿರ್ದೇಶಕ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ತೋನ್ಸೆ ವಿಜಯ ಕುಮಾರ್‌ ಶೆಟ್ಟಿ ತಿಳಿಸಿದರು.

ನ. 25ರಂದು ಸಂಜೆ ಮೀರಾರೋಡ್‌ ಪೂರ್ವ, ಶೀತಲ್‌ ನಗರದ ಸೈಂಟ್‌ ಜೋಸೆಫ್‌ ಚರ್ಚ್‌ ಸಭಾಗೃಹದಲ್ಲಿ ಕಲಾಜಗತ್ತು ಸಂಸ್ಥೆಯ ಹಿರಿಯ ನಟರ ಸ್ಮರಣಾರ್ಥ ಕೊಡ ಮಾಡುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ಮಾತನಾಡಿದ ಅವರು, 42 ವರ್ಷಗಳಿಂದ ವಿಭಿನ್ನ ಸಂದೇಶಗಳೊಂದಿಗೆ ಹಾಸ್ಯಮಯ ನಾಟಕಗಳನ್ನು ಧರ್ಮಾರ್ಥವಾಗಿ ಪ್ರದರ್ಶಿಸಿದ್ದೇವೆ. ಕಲಾಸಕ್ತ ದಾನಿಗಳ ನೆರವಿಂದ ನಮ್ಮ ಕಾರ್ಯಕ್ರಮಗಳು ಯಶಸ್ಸಿನೊಂದಿಗೆ ಮುನ್ನಡೆ ಸಾಧಿಸಿದೆ. ಆದರೆ ಇಂದು ಕೊರೊನಾ ಸಾಂಕ್ರಾಮಿಕದಿಂದ ವ್ಯವಹಾರವೇ ಸ್ಥಗಿತಗೊಂಡಿದೆ. ಕಲಾವಿದರ ಜೀವನ ಶೋಚನೀಯವಾಗಿದೆ. ಸಹೃದಯಿಗಳಾದ ತಾವೆಲ್ಲರೂ ಆರ್ಥಿಕ ನೆರವು ನೀಡಿ ತುಳು ರಂಗಭೂಮಿಯನ್ನು ಉಳಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭ ಕಲಾಜಗತ್ತಿನ ಹೆಸರಾಂತ ನಟರಾದ ದಿ| ವಾಮನ್‌ ರಾಜ್‌, ದಿ| ಸದಾಶಿವ ಸಾಲ್ಯಾನ್‌, ದಿ| ಭಾರತೀ ಕೊಡ್ಲೆಕರ್‌ ಮತ್ತು ದಿ| ರಮೇಶ್‌ ಕರ್ಕೇರ ಅವರ ಸ್ಮರಣಾರ್ಥ ಅನುಕ್ರಮವಾಗಿ ಕಲಾವಿದರಾದ ಜಿ. ಕೆ. ಕೆಂಚನಕೆರೆ, ಪ್ರತಿಭಾ ಬಂಗೇರ, ಶ್ರೀನಿಧಿ ಶೆಟ್ಟಿ  ಮತ್ತು ಸುಜಾತಾ ಕೋಟ್ಯಾನ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಮೀರಾ ಭಾಯಂದರ್‌ ಹೊಟೇಲ್‌ ಅಸೋಸಿ ಯೇಶನ್‌ ಅಧ್ಯಕ್ಷ ಮಧುಕರ ಶೆಟ್ಟಿ, ತುಳುನಾಡ ಸೇವಾ ಸಮಾಜದ ಅಧ್ಯಕ್ಷ ಡಾ| ರವಿರಾಜ ಸುವರ್ಣ, ಬಂಟ್ಸ್‌ ಫೋರಂ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ನವತರುಣ ಮಿತ್ರಮಂಡಳದ ಅಧ್ಯಕ್ಷ ಬಳ್ಕುಂಜೆಗುತ್ತು ಗುತ್ತಿನಾರ್‌ ರವೀಂದ್ರ ಶೆಟ್ಟಿ, ರಾಜಕೀಯ ಯುವ ಮುಖಂಡ ಸಚ್ಚಿದಾನಂದ ಶೆಟ್ಟಿ  ಮುನ್ನಾಲಾಯಿಗುತ್ತು, ಶನಿ ಮಂದಿರದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಸಂತಿ ಶೆಟ್ಟಿ, ಸುರೇಶ್‌ ಶೆಟ್ಟಿ ಗಂದರ್ವ, ಅರುಣ್‌ ಪಕ್ಕಳ, ಪತ್ರಕರ್ತ ವೈ. ಟಿ. ಶೆಟ್ಟಿ ಹೆಜ್ಮಾಡಿ, ವೀಣಾ ಶೆಟ್ಟಿ, ಸುಕುಮಾರ್‌ ಮುದ್ರಾಡಿ, ದಿವಾಕರ ಶೆಟ್ಟಿ  ಮೊದಲಾದವರು ಉಪಸ್ಥಿತರಿದ್ದರು.

ಮೋಕೆದ ಜೋಕುಲು ನಾಲ್ಕನೇ ಪ್ರದರ್ಶನದ ನಾಟಕದಲ್ಲಿ ಡಾ| ತೋನ್ಸೆ ವಿಜಯ್‌ ಕುಮಾರ್‌ ಶೆಟ್ಟಿ, ಡಾ| ಸುರೇಂದ್ರ ಕುಮಾರ್‌ ಹೆಗ್ಡೆ, ಜಿ. ಕೆ. ಕೆಂಚನಕೆರೆ, ವೀರಜ್‌ ಶೆಟ್ಟಿ, ಶ್ರೀನಿಧಿ ಶೆಟ್ಟಿ, ಪ್ರತಿಮಾ ಬಂಗೇರ, ಸುಜಾತಾ ಕೋಟ್ಯಾನ್‌, ಹೇಮಂತ್‌ ಶೆಟ್ಟಿ,  ಸುರೇಶ್‌ ಕೆ. ಶೆಟ್ಟಿ, ಅಪೇûಾ ಶೆಟ್ಟಿ, ಶೈಲಜಾ ಶೆಟ್ಟಿ, ಶಿಲ್ಪಾ, ನಿತೇಶ್‌ ಪೂಜಾರಿ, ನಿಖೀಲ್‌ ಶೆಟ್ಟಿ, ಕೃತೇಶ್‌ ಅಮೀನ್‌, ಅಮಿತ್‌ ಶೆಟ್ಟಿ, ಗಣೇಶ್‌ ಬಂಗೇರ ಅವರು ಕಲಾವಿದರಾಗಿ ಅಭಿನಯಿಸಿದರು. ಸಂಗೀತದಲ್ಲಿ ರಾಜೇಶ್‌ ಹೆಗ್ಡೆ ಹೆರ್ಮುಂಡೆ, ಬೆಳಕು ಮತ್ತು ಧ್ವನಿಯಲ್ಲಿ  ವೆಂಕಟೇಶ್‌, ಮೇಕಪ್‌ನಲ್ಲಿ  ಮಂಜುನಾಥ್‌ ಶೆಟ್ಟಿಗಾರ್‌ ಸಹಕರಿಸಿದರು. ರಂಗ ಸಂಯೋಜನೆಯಲ್ಲಿ ಲೀಲಾ ಗಣೇಶ್‌, ಗಣೇಶ್‌ ಬಂಗೇರ, ಕೃಷ್ಣರಾಜ್‌ ಸುವರ್ಣ, ಕುಶಲ್‌ ಶೆಟ್ಟಿ  ಪಾಲ್ಗೊಂಡರು.  ಕಲಾಜಗತ್ತಿನ ಉಪಾಧ್ಯಕ್ಷ ಜಿ. ಕೆ. ಕೆಂಚನಕೆರೆ ವಂದಿಸಿದರು.

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.