“ಕೋವಿಡ್ ದಿಂದ ಬಹ್ರೈನ್‌ ಕನ್ನಡಿಗರು ಸುರಕ್ಷಿತ’


Team Udayavani, May 14, 2020, 10:53 AM IST

“ಕೋವಿಡ್ ದಿಂದ ಬಹ್ರೈನ್‌ ಕನ್ನಡಿಗರು ಸುರಕ್ಷಿತ’

ಮುಂಬಯಿ: ವಿಶ್ವದೆಲ್ಲೆಡೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಾ ಮಾನವ ಕುಲದ ಮಾರಣ ಹೋಮ ನಡೆಸುತ್ತಿರುವ ಮಹಾಮಾರಿ ಕೋವಿಡ್ ದಿಂದ ಬಹ್ರೈನ್‌ ಮೂಲದ ಕನ್ನಡಿಗರು ಈವರೆಗೆ ಸುರಕ್ಷಿತರಾಗಿದ್ದಾರೆ ಎಂದು ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ, ಬಹ್ರೈನ್‌ ಇದರ ಅಧ್ಯಕ್ಷ ಲೀಲಾಧರ್‌ ಬೈಕಂಪಾಡಿಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

ಸ್ಥಳೀಯ ಸರಕಾರ ಆರಂಭದಿಂದಲೇ ಕೋವಿಡ್ ಪಿಡುಗಿನ ವಿಷಯದಲ್ಲಿ ಎಲ್ಲ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಂಡಿರುವ ಕಾರಣದಿಂದಾಗಿ ಈ ದ್ವೀಪರಾಷ್ಟ್ರದಲ್ಲಿ ಕೋವಿಡ್ ಹರಡುವಿಕೆಯು ಹೆಚ್ಚು ನಿಯಂತ್ರಣದಲ್ಲಿದ್ದು, ಅದು ವಿಶ್ವಸಂಸ್ಥೆಯ ಪ್ರಶಂಸೆಗೂ ಪಾತ್ರವಾಗುವಂತಾಗಿದೆ. ಇಲ್ಲಿ ಈತನಕ ಸಾಧಾರಣ ಸಂಖ್ಯೆಯ ಕೋವಿಡ್ ಸೋಂಕಿತರಷ್ಟೇ ಕಂಡುಬಂದಿದ್ದು, ಮೃತರ ಸಂಖ್ಯೆಯೂ ಕೇವಲ

ಬೆರಳೆಣಿಕೆಯಷ್ಟಿದೆ. ಹೆಚ್ಚಿನ ಸೋಂಕಿತರು ಈಗಾಗಲೇ ಗುಣಮುಖರಾಗಿರುತ್ತಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಕೆಲವು ಭಾರತೀಯರೂ ಇದ್ದು, ಈ ಪೈಕಿ ಯಾವುದೇ ಕನ್ನಡಿಗರು ಇಲ್ಲವೆಂಬುದೂ ಸ್ಪಷ್ಟವಾಗಿ ತಿಳಿದು ಬಂದಿರುತ್ತದೆ. ಹಾಗೆಯೇ ಈ ಪರಿಸ್ಥಿತಿಯಲ್ಲಿ ಅದೇನೇ ಸಮಸ್ಯೆಗಳು ಕಂಡುಬಂದರೂ ಸ್ಥಳೀಯ ಸರಕಾರದವರು, ಭಾರತೀಯ ರಾಯಭಾರಿ ಕಚೇರಿಯವರು ಅವನ್ನು ಕ್ಲಪ್ತ ಸಮಯದಲ್ಲಿ ಪರಿಹರಿಸುತ್ತಿದ್ದಾರೆ.

ಆದರೆ ಈ ಕೋವಿಡ್ ಅಟ್ಟಹಾಸದ ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಲವು ಅನಿವಾಸಿಯರು ಪ್ರಯಾಣಕ್ಕಾಗಿ ಹಾತೊರೆಯುವುದು ನಿಜ ವಾಗಿದ್ದು, ಸದ್ಯ ಯಾವುದೇ ವಿಮಾನ ಯಾನದ ವ್ಯವಸ್ಥೆಯಿಲ್ಲದೆ ಅವರು ಸಂಕಷ್ಟಕ್ಕೀಡಾಗಿರುತ್ತಾರೆ. ಅಂಥವರಲ್ಲಿ ಗರ್ಭಿಣಿ ಮಹಿಳೆಯರು, ತಾಯಿನಾಡಿನಲ್ಲಿ ವೈದ್ಯಕೀಯ ಸೇವೆಯ ಅಗತ್ಯವಿರುವವರು, ಹಿರಿಯ ನಾಗರಿಕರು, ಪ್ರವಾಸ ಅಥವಾ ವ್ಯವಹಾರಕ್ಕಾಗಿ ಬಂದವರು, ನೆಂಟರಿಷ್ಟರನ್ನು ಭೇಟಿಯಾಗಲು ಬಂದವರು, ಉದ್ಯೋಗದ ರಜೆಯ ಮೇಲೆ ಅಥವಾ ಉದ್ಯೋಗ ಸ್ಥಳದ ಸದ್ಯದ ತಾತ್ಕಾಲಿಕ ಪ್ರತಿಕೂಲ ಪರಿ

ಸ್ಥಿತಿಯ ಕಾರಣಕ್ಕಾಗಿ ತಾಯಿನಾಡಿಗೆ ತೆರಳಬೇಕಾದ ಅನಿವಾಸಿಯರೆಲ್ಲಾ ಸೇರಿರುತ್ತಾರೆ. ಅಷ್ಟೇ ಅಲ್ಲದೆ ಲಾಕ್‌ಡೌನ್‌ನಿಂದಾದ ಬಿಡುವಿನ ಸದ್ವಿನಿಯೋಗ ಬಯಸಿ ಪ್ರಯಾಣಿಸಬಯಸುವ ಕೆಲವು ಅನಿವಾಸಿಯರೂ ಈಗ ಪ್ರಯಾಣದ  ನಿರೀಕ್ಷೆಯಲ್ಲಿರುವುದು ಕಂಡುಬರುತ್ತಿದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಕೇಂದ್ರ  ಸರಕಾರವು ವಿಶ್ವದೆಲ್ಲೆಡೆಯಿಂದ ಅತಂತ್ರ ಸ್ಥಿತಿಯಲ್ಲಿರುವ ಅನಿವಾಸಿಯರನ್ನು ಆದ್ಯತೆಯ ಆಧಾರದ ಮೇಲೆ ತಾಯಿನಾಡಿಗೆ ಸ್ಥಳಾಂತರಿಸುವ ತುರ್ತು ವ್ಯವಸ್ಥೆಯನ್ನು ಮಾಡಿದ್ದು, ಈ ಹಿನ್ನೆಲೆಯಲ್ಲಿ ಬಹ್ರೈನ್‌ನಲ್ಲಿರುವ ಭಾರತೀಯರನ್ನೂ ಕರೆತರಲು ಕನಿಷ್ಠ ಎರಡು ವಿಮಾನಗಳ ವ್ಯವಸ್ಥೆಯನ್ನು ಮಾಡಿರುವುದು ತುಸು ಸಮಾಧಾನದ ವಿಚಾರವಾಗಿದೆ. ಇವೆಲ್ಲದರ ಮಧ್ಯೆ ಬಹ್ರೈನ್‌ ಅಥವಾ ಕೊಲ್ಲಿ ಕನ್ನಡಿಗರ ಭವಿಷ್ಯವನ್ನು ಊಹಿಸುವುದಾದರೆ ಅದು ಖಂಡಿತವಾಗಿಯೂ ಅತಂತ್ರ ವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.