ಬಂಟರ ಸಂಘದ ವಿವಾಹ ವೇದಿಕೆಯಿಂದ ಬಂಟ ವಧೂವರರ ಚಾವಡಿ ಉದ್ಘಾಟನೆ


Team Udayavani, Aug 19, 2018, 5:57 PM IST

1808mum10.jpg

ಮುಂಬಯಿ: ಮೂಲತಃ ಕೃಷಿಕರಾದ ಬಂಟರು ಕೂಡು ಕುಟುಂಬದ ಸದಸ್ಯರು ಸಂಸಾರದ ಹೆಣ್ಣು ಮಕ್ಕಳ ಮದುವೆಯ ಜವಾಬ್ದಾರಿಯನ್ನು ಮನೆಯ ಯಜಮಾನನಾದ ಸೋದರ ಮಾವನು ವಹಿಸಿಕೊಂಡು ತಂದೆಯ ಸ್ಥಾನವನ್ನು ತುಂಬಿಕೊಡುತ್ತಿದ್ದರು. ವಧೂವರರು ತಮ್ಮ ಮಾವನ ಮಾತನ್ನು ಯಾವ ಕಾರಣಕ್ಕೂ ಮೀರುತ್ತಿರಲಿಲ್ಲ. ಹಿಂದೆ ಅದೆಷ್ಟೋ ಮಂದಿ ಮದುಮಗ-ಮದುಮಗಳ ಮುಖವನ್ನು ಮದುವೆ ಮಂಟಪದಲ್ಲಿಯೇ ನೋಡುತ್ತಿದ್ದರು. ಹಾಗೆ ನಡೆದ ಮದುವೆ ಸುದೀರ್ಘ‌ವಾಗಿ ಬಾಳಿ ಬದುಕಿ ಬೆಳಗುತ್ತಿದ್ದವು. ಪರಿವರ್ತನಾಶೀಲ ಪ್ರಪಂಚದಲ್ಲಿ ಈಗ ಪರಿಸ್ಥಿತಿ ಬದಲಾಗಿದೆ. ನಾವೂ ಬದಲಾಗಿದ್ದೇವೆ ಎಂದು ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ನುಡಿದರು.

ಆ. 17ರಂದು ಬೆಳಗ್ಗೆ ಕುರ್ಲಾ ಪೂರ್ವದ ಬಂಟರ ಭವನದ ಮುಂಭಾಗದ ಶಶಿ ಮನಮೋಹನ್‌ ಶೆಟ್ಟಿ ಉನ್ನತ ಶಿಕ್ಷಣ ಸಂಕೀರ್ಣದ ರಮಾನಾಥ ಪಯ್ಯಡೆ ಕಾಲೇಜ್‌ ಆಫ್‌ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌ ಕೆಪಿಟೇರಿಯಾದಲ್ಲಿ ಸಂಘದ ವಿವಾಹ ವೇದಿಕೆ ಸಮಿತಿಯ ಕಾರ್ಯಾಧ್ಯಕ್ಷ ಸುರೆಶ್‌ ಎನ್‌. ಶೆಟ್ಟಿ ಅವರ ನೇತೃತ್ವದಲ್ಲಿ ಜರಗಿದ ವಧೂವರರ ಚಾವಡಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ಸಂಘದ ವಿವಾಹ ವೇದಿಕೆ ವಧೂವರರ ಚಾವಡಿ ಎಂಬ ಪರಿಕಲ್ಪನೆಯಲ್ಲಿ ಹೆಣ್ಣು-ಗಂಡು ಹಾಗೂ ಅವರ ಪರಿವಾರದ ಸದಸ್ಯರನ್ನು ಒಂದೇ ಚಾವಡಿಯಲ್ಲಿ ಸೇರಿಸಿಕೊಂಡು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು  ಹಂಚಿಕೊಂಡು ದಾಂಪತ್ಯ ಎಂಬ ನಂಟಿಗೆ ಭದ್ರಬುನಾದಿಯನ್ನು  ಹಾಕಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿರುವುದು ನಿಜಕ್ಕೂ ಅಭಿಂದನಾರ್ಹ ವಿಚಾರವಾಗಿದೆ. ಕಾರ್ಯಾಧ್ಯಕ್ಷ ಸುರೇಶ್‌ ಶೆಟ್ಟಿ ಅವರ ದೂರ ದೃಷ್ಟಿತ್ವಕ್ಕೆ ಇಂದಿನ ಕಾರ್ಯಕ್ರಮದ ಯಶಸ್ವಿ ಸಾಕ್ಷಿಯಾಗಿದೆ. ಸಂಘದ ಸಾಧನಾ ಪುಟದಲ್ಲಿ ಈ ಕಾರ್ಯಕ್ರಮ ಸ್ಥಾಯಿಯಾಗಿ ಶೋಭಿಸುತ್ತದೆ. ಸಂಘದ ಇತಿಹಾಸದಲ್ಲೇ ಪ್ರಪ್ರಥಮವಾಗಿ ಬಾರಿ ಕಂಕಣಕ್ಕೆ ಹೊಸ ಅಂಕಣ ಬರೆದ ಸಮಾಗಮ ಇದಾಗಿದೆ. ನಮ್ಮ ಯುವ ಪೀಳಿಗೆಗೆ ಬಂಟರ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಿ, ಅಂತರ್‌ಜಾತಿ, ವಿವಾಹವನ್ನು ತಡೆಯುವ ಪ್ರಯತ್ನವನ್ನು ನಾವಿಂದು ಮಾಡಬೇಕಾಗಿದೆ. ಸ್ವಾಭಿಮಾನಿಗಳಾದ ಬಂಟರು ತಮ್ಮ ಆರ್ಥಿಕ ದುಸ್ಥಿತಿಯನ್ನು ಮತ್ತೂಬ್ಬರಿಗೆ ತಿಳಿಸುವುದಕ್ಕೆ ಹಿಂಜರಿಯುತ್ತಿದ್ದು, ಇದರಿಂದಾಗಿ ಅನೇಕ ಹೆಣ್ಣು ಮಕ್ಕಳಿಗೆ ಮದುವೆಯಾಗುವಲ್ಲಿ ಅಡಚಣೆ ಉಂಟಾಗುತ್ತಿದೆ. ಇದಕ್ಕಾಗಿ ಇಂದಿನ ಈ ವಧೂವರರ ಚಾವಡಿಯ ಮೂಲಕ ಹೊಂದಾಣಿಕೆಯಾದ ಜೋಡಿಗಳು ಬಯಸಿದರೆ, ಮದುವೆಯ ಸಂಪೂರ್ಣ ವೆಚ್ಚವನ್ನು ಭರಿಸಿ ಗೌರವಯುತವಾಗಿ ವಿಜೃಂಭ ಣೆಯಿಂದ ವಿವಾಹ ನಡೆಸಲು ಸಂಘವು ತಯಾರಾಗಿದೆ ಎಂದು ನುಡಿದು,  ಜಾತಕದ ಸೂತಕದಿಂದ ಹೊರ ಬರುವಂತೆ ಹಾಗೂ ಅಂತಹ ನಂಬಿಕೆಯಿಂದ ದೂರವಿರುವಂತೆ ಸಮುದಾಯಕ್ಕೆ ಮನವಿ ಮಾಡಿದರು.

ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ ಮಾತನಾಡಿ, ಶ್ರಾವಣ ತಿಂಗಳ ಮೊದಲ ಶುಕ್ರವಾರ ಸಂಕ್ರಾಂತಿಯ ಪವಿತ್ರ ದಿನದಂದು ವಧೂವರರ ಚಾವಡಿಯ ಪ್ರಪ್ರಥಮ ಕಾರ್ಯಕ್ರಮ ಜರಗುತ್ತಿರುವುದು ಶುಭದ ಸಂಕೇತವಾಗಿದೆ. ಸಂಘದ ಮಹಿಳಾ ವಿಭಾಗ ಇಂದಿನ ದಿನ 40 ವರ್ಷ ಪೂರೈಸುತ್ತಿದೆ ಎನ್ನಲು ಸಂತೋಷವಾಗುತ್ತಿದೆ. ಮಹಿಳಾ ವಿಭಾಗದ ಈ ಸಮಿತಿಯ ಎಲ್ಲಾ ಕಾರ್ಯಕ್ರಮಗಳಿಗೂ ಸಹಕಾರ ನೀಡುತ್ತದೆ. ದಾಂಪತ್ಯ ಜೀವನವೆಂದರೆ ಸಾಮರಸ್ಯದ ಬದುಕು ಹೊಂದಾಣಿಕೆಯ ಕಾಯಕ ಎಂದರು.ಇದೇ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ಮನೋಹರ್‌ ಶೆಟ್ಟಿ, ಮಮತಾ ಎಂ. ಶೆಟ್ಟಿ ದಂಪತಿಯನ್ನು ವಿವಾಹ ವೇದಿಕೆಗೆ ಅವರು ನೀಡಿದ ಅವಿರತ ಸೇವೆ ಯನ್ನು ಗುರುತಿಸಿ ಸಮ್ಮಾನಿಸಲಾಯಿತು. ನಲ್ವತ್ತು ವರ್ಷಕ್ಕಿಂತಲೂ ಹೆಚ್ಚಿನ ಅವಧಿಯ ದಾಂಪತ್ಯ ಜೀವನವನ್ನು ಪೂರೈಸಿದ ರಂಜನಿ ಸುಧಾಕರ ಹೆಗಡೆ, ಆನಂದ ಶೆಟ್ಟಿ ಇನ್ನ ದಂಪತಿ, ಪ್ರಭಾ ಕೋಡು ಭೋಜ ಶೆಟ್ಟಿ, ವಿನೋದಾ ಆರ್‌. ಕೆ. ಚೌಟ ಮೊದಲಾದವರನ್ನು ಗೌರವಿಸಲಾಯಿತು.

ಆರಂಭದಲ್ಲಿ ವಿನೋದಾ ಆರ್‌. ಕೆ. ಚೌಟ ಪ್ರಾರ್ಥನೆಗೈದರು. ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ವಧೂವರರ ಚಾವಡಿಗೆ ಚಾಲನೆ ನೀಡಿದರು. ಬಂಟಗೀತೆಯನ್ನು ಮೊಳಗಿಸಿ, ಗಣ್ಯರು ದೀಪಪ್ರಜ್ವಲಿಸಿ ಕಾರ್ಯಕ್ರ ಮಕ್ಕೆ ಚಾಲನೆ ನೀಡಿದರು. ಆ. 16 ರಂದು ನಿಧನರಾದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ ಉಪಸ್ಥಿತರಿದ್ದರು. ಬಂಟರವಾಣಿಯ ಗೌರವ ಸಂಪಾದಕ ಅಶೋಕ್‌ ಪಕ್ಕಳ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಧೂವರರನ್ನು ಅಶೋಕ್‌ ಪಕ್ಕಳ ಹಾಗೂ ಕರ್ನೂರು ಮೋಹನ್‌ ರೈ ಅವರು ಪರಿಚಯಿಸಿದರು.

 ಇದು ನಮ್ಮ ಪ್ರಥಮ ಹೆಜ್ಜೆಯಾಗಿದೆ. ಮುಂದಿನ ದಿನಗಳಲ್ಲಿ ತಮ್ಮ ಸಹಕಾರದೊಂದಿಗೆ ಬಂಟ 
ವಧೂವರರಿಗೆ ಅನುಕೂಲವಾಗುವಂತೆ ಇನ್ನಷ್ಟು  ಪ್ರಗತಿಪರ ಕಾರ್ಯವನ್ನು ಕೈಗೊಳ್ಳುತ್ತೇವೆ. 
ಇಂದಿನ ಪ್ರತಿಕ್ರಿಯೆಯನ್ನು 
ಕಂಡಾಗ ನಮ್ಮ ಪ್ರಯತ್ನ ಫಲ 
ನೀಡುತ್ತಿದೆ ಎಂದು 
ಸಮಾಧಾನವಾಗುತ್ತಿದೆ .
ಸುರೇಶ್‌ ಎನ್‌. ಶೆಟ್ಟಿ , 
ಕಾರ್ಯಾಧ್ಯಕ್ಷರು : ವಿವಾಹ ವೇದಿಕೆ ಬಂಟರ ಸಂಘ ಮುಂಬಯಿ

ವಿವಾಹ ಸಂಬಂಧ ಕೂಡಿಸುವುದು   ಪುಣ್ಯದ ಕಾರ್ಯ ಈ ಕಾರ್ಯಕ್ಕೆ ನಾನು ಹಿಂದಿನಿಂದಲೂ ಪ್ರೋತ್ಸಾಹ ಸಹಕಾರ ನೀಡುತ್ತಾ ಬಂದಿದ್ದೇವೆ. ಮುಂದೆಯೂ ನನ್ನ ಸಂಪೂರ್ಣ ಸಹಕಾರ ನೀಡುವುದಾಗಿ  ಭರವಸೆ ನೀಡಿದರು. ಸಂಘದ ವಿವಾಹ ವೇದಿಕೆಯ ವಧೂವರರ ಚಾವಡಿ ಪ್ರತಿವರ್ಷ ನಡೆಯಲಿ. ಬಂಟ ಕುಟುಂಬದಲ್ಲಿರುವ ಮಕ್ಕಳ ಕಂಕಣ ಭಾಗ್ಯಕ್ಕೆ ಈ ವೇದಿಕೆ ಸಹಕಾರ ನೀಡಲಿ
ರವೀಂದ್ರ ಎಂ. ಅರಸ, 
ಅಧ್ಯಕ್ಷರು : ಬಂಟ್ಸ್‌ ನ್ಯಾಯಮಂಡಳಿ ಮುಂಬಯಿ

ಚಿತ್ರ-ವರದಿ:ಪ್ರೇಮನಾಥ್‌ ಶೆಟ್ಟಿ  ಮುಂಡ್ಕೂರು

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.