ಬಂಟವಾಳದ ಬಂಟರ ಸಂಘ ಆಲ್‌ಕಾರ್ಗೊ :ಶೈಕ್ಷಣಿಕ ನೆರವು ವಿತರಣೆ


Team Udayavani, Aug 7, 2018, 2:51 PM IST

0508mum01a.jpg

ಮುಂಬಯಿ: ಬಂಟತ್ವದ ಸ್ವಾರ್ಥದೊಂದಿಗೆ ಇಡೀ ಸಮಾಜವನ್ನು ಪ್ರೋತ್ಸಾಹಿಸುವಲ್ಲಿ ಬಂಟರು ಶ್ರೇಷ್ಠರು. ಬಂಟರು ಬದುಕನ್ನು ಪ್ರೇರೇಪಿಸುವ ಬಂಧುಗಳಾಗಿದ್ದಾರೆ. ಆದ್ದರಿಂದಲೇ ಎಲ್ಲ ಕ್ಷೇತ್ರಗಳಲ್ಲೂ ಬಂಟರ ಅಬ್ಬರ ಇಂದಿಗೂ ಕಾಣಿಸುತ್ತಿದೆ. ನಾವೆಲ್ಲ ಇಷ್ಟೊಂದು ಸಾಧಕರಾಗಿದ್ದೇವೆ ಎಂದರೆ ಆದು ನಮ್ಮ ಸ್ವಸಮಾಜ ಪ್ರೇರಣೆಯಿಂದ. ಇಂತಹ ಕಾರ್ಯಕ್ರಮಗಳಿಂದ ಸಮಾಜದ ಋಣ ತೀರಿಸಲು  ಸಾಧ್ಯ. ಈ ಮೂಲಕ ಸಮಗ್ರ ಸಮಾಜ ಬೆಳಗುವುದು. ಬಂಟ್ವಾಳದ ಬಂಟರು ಎಲ್ಲರಿಗಿಂತ ಭಿನ್ನರು ಮತ್ತು ಸರ್ವ ಸಾಧಕರು. ಭವಿಷ್ಯದ ಜನತೆಗೆ ಆದರಣೀಯರೂ ಹೌದು. ಸಮಗ್ರ ಬಂಟ್ವಾಳದ ಜನತೆಯ ಸೇವೆ ಎಲ್ಲರಲ್ಲೂ ಚೈತನ್ಯ ಮೂಡಿಸುವಂತಿದೆ ಎಂದು ನಿಟ್ಟೆ  ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಂ. ಶಾಂತಾರಾಮ ಶೆಟ್ಟಿ ತಿಳಿಸಿದರು.

ಆ. 5ರಂದು  ತುಂಬೆ ವಳವೂರು ಇಲ್ಲಿನ ಬೋಳಂತೂರುಗುತ್ತು ಗಂಗಾಧರ ರೈ ಕಾಂಪ್ಲೆಕ್ಸ್‌ನ ಬಂಟ್ವಾಳದ ಬಂಟರ ಭವನದ ಬೆಳ್ಳೂರು ಪರಾರಿ ಆರ್‌. ಎನ್‌. ಶೆಟ್ಟಿ  ಸಭಾಗೃಹದಲ್ಲಿ ಮುಂಬಯಿಯ ಪ್ರತಿಷ್ಠಿತ ಆಲ್‌ಕಾರ್ಗೊ ಲಾಜಿಸ್ಟಿಕ್‌ ಲಿಮಿಟೆಡ್‌ ಸಂಸ್ಥೆಯ ಸಹಯೋಗದೊಂದಿಗೆ ಬಂಟರ ಸಂಘ ಬಂಟವಾಳ ತಾಲೂಕು ಇದರ ಶೈಕ್ಷಣಿಕ ಮತ್ತು ಸಮಾಜ ಕಲ್ಯಾಣ ಸಮಿತಿಯಿಂದ ನಡೆದ   2018 ನೇ ವಾರ್ಷಿಕ  ವಿದ್ಯಾರ್ಥಿ ವೇತನ ವಿತರಣೆ ಸಮಾರಂಭವನ್ನು  ಉದ್ಘಾಟಿಸಿ ಮಾತನಾಡಿದ ಅವರು, ಆಲ್‌ಕಾರ್ಗೋ ಇಡೀ ಸಮಾಜಕ್ಕೆ ವಿದ್ಯಾರ್ಥಿವೇತನ ವಿತರಿಸುತ್ತಿರುವುದು ಸ್ತುತ್ಯರ್ಹ. ಜಾಗತಿಕವಾಗಿ ಭವ್ಯತೆ ಸಾರುವ ಅವರ ಕನಸಿನ ಈ ಕಾರ್ಯಕ್ರಮ ಎಲ್ಲರಿಗೂ ಮಾದರಿ. ಸಮಾಜದಲ್ಲಿ ಎಲ್ಲರೂ ಸುಶಿಕ್ಷಿತರಾಗಿ ಬಾಳುವಂತಾಗಲಿ ಎನ್ನುವುದೇ ನಮ್ಮೆಲ್ಲರ  ಆಶಯವಾಗಿದೆ ಎಂದು ಶಾಂತಾರಾಮ ಶೆಟ್ಟಿ  ತಿಳಿಸಿ ಲಾಲ್‌ಬಹುದ್ದೂರು ಶಾಸ್ತ್ರೀ ಅವರು ಮುಖತಃ  ಕಂಡ ಆಕರ್ಷಣೀಯ ಸ್ಥಾನವಾದ ಬಂಟ್ವಾಳವನ್ನು ಉಲ್ಲೇಖೀಸಿ ಬಂಟ್ವಾಳದ ಸಾಧಕರನ್ನು ಪ್ರಶಂಸಿದರು. 

ಬಂಟರ ಸಂಘ ಬಂಟವಾಳ ಅಧ್ಯಕ್ಷ ನಗ್ರಿಗುತ್ತು ವಿವೇಕ್‌ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಮೈಟ್‌ ಶಿಕ್ಷಣ ಸಂಸ್ಥೆ ಮೂಡಬಿದಿರೆಯ ಅಧ್ಯಕ್ಷ ರಾಜೇಶ್‌ ಚೌಟ, ನವಿಮುಂಬಯಿ ನಿವೃತ್ತ ಪೊಲೀಸ್‌ ಅಧಿಕಾರಿ ಮತ್ತು  ಆಲ್‌ಕಾರ್ಗೋ ಸಂಸ್ಥೆಯ ಸಿಎಸ್‌ಆರ್‌ ಸಲಹೆಗಾರ ಕೆ. ಎಲ್‌. ಪ್ರಸಾದ್‌ ಹಾಗೂ ಆಲ್‌ಕಾರ್ಗೊ ಸಿಎಸ್‌ಆರ್‌ ಮುಖ್ಯಸ್ಥ ಡಾ| ನೀಲ್‌ರತ್ನ ಆರ್‌. ಶೆಂಡೆ ವೇದಿಕೆಯಲ್ಲಿ ಉಪಸ್ಥಿತರಿದ್ದು, ಸ್ಥಳಿಯ ಬಹುತೇಕ ಸಮುದಾಯ, ಜಾತಿಗಳ ಸುಮಾರು 1,500 ವಿದ್ಯಾರ್ಥಿಗಳಿಗೆ 40 ಲಕ್ಷ ರೂ.ಮೊತ್ತಕ್ಕೂ ಅಧಿಕ ಶೈಕ್ಷಣಿಕ ದೇಣಿಗೆ ವಿತರಿಸಿದರು.

ಸಮಾಜಮುಖೀ ಕಾರ್ಯಕ್ರಮಕ್ಕೆ ಈ ಸಂಸ್ಥೆ ಮಾದರಿ. ಸಮಾಜದಲ್ಲಿನ ಸಂಪನ್ಮೂಲ  ಬಳಸಿ ಸಮಾಜದ ಉನ್ನತಿಗೆ ಶ್ರಮಿಸಬೇಕು.  ಕೇವಲ  ಭವನಗಳನ್ನು ರಚಿಸುವುದಕ್ಕಿಂತ ಆ ಭವನದ ಮೂಲಕ ಸಮಾಜದ ಜನತೆಯ ಭವಿಷ್ಯ ರೂಪಿಸಲು ಪ್ರೇರಕರಾದಾಗ ಸಂಸ್ಥೆಗಳ ಅಸ್ತಿತ್ವ ಫಲಪ್ರದವಾಗುವುದು. ವಿದ್ಯಾರ್ಥಿಗಳೇ ತಾವು ಸರ್ವೋತ್ಕೃಷ್ಟ  ಶಿಕ್ಷಣ ಪಡೆದು  ಶಶಿಕಿರಣ್‌ ಅವರಂತಹ ಕನಸುಕಂಡು ಜೀವನ ಪಾವನವಾಗಿಸಿರಿ. ಶಿಕ್ಷಣ ಕೇವಲ ಸ್ವಂತಿಕೆಗೆ ಮಾತ್ರವಲ್ಲ ಅದರೊಂದಿಗೆ ಜೀವನ ರೂಪಿಸುವ ಜತೆಗೆ ಸಮಾಜಕ್ಕೂ ಪೂರಕವಾಗಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಪ್ರೀತಿಗೆ ಭಾಜನರಾಗಿ ಸಾಂಘಿಕವಾಗಿ ಮುನ್ನಡೆಯಲು ಇಂತಹ ಕಾರ್ಯಕ್ರಮ ಮಾದರಿ ಎಂದು ರಾಜೇಶ್‌ ಚೌಟ ಅವರು ಅಭಿಪ್ರಾಯಪಟ್ಟರು.

ಬಂಟರ ಸಂಘದ ಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ಡಾ| ಪ್ರಶಾಂತ್‌ ಮಾರ್ಲ, ಸಂಘದ ಉಪಾಧ್ಯಕ್ಷ ಕಿರಣ್‌ ಹೆಗ್ಡೆ ಅನಂತಾಡಿ, ಜತೆ ಕಾರ್ಯದರ್ಶಿ ನವೀನ್‌ಚಂದ್ರ ಶೆಟ್ಟಿ ಮುಂಡಜೆಗುತ್ತು, ಮಹಿಳಾ ವಿಭಾಗಧ್ಯಕ್ಷೆ ಆಶಾ ಪ್ರಸಾದ್‌ ರೈ ಅತಿಥಿಗಳನ್ನು ಪರಿಚಯಿಸಿದರು. ಅಧ್ಯಕ್ಷರು ಮತ್ತಿತರ‌ ಪದಾಧಿಕಾರಿಗಳು ಉಪಸ್ಥಿತರಿದ್ದು ಅತಿಥಿಗಳನ್ನು  ಶಾಲು ಹೊದೆಸಿ, ಸ್ಮರಣಿಕೆಯನ್ನಿತ್ತು ಗೌರವಿಸಿದರು. 

ಕಾರ್ಯಕ್ರಮದಲ್ಲಿ ಶಾಸಕ ಉಳೆಪಾಡಿಗುತ್ತು ರಾಜೇಶ್‌ ನಾೖಕ್‌,  ಸಂಧ್ಯಾ ವಿವೇಕ್‌ ಶೆಟ್ಟಿ, ನಕ್ರೆ ಸುರೇಂದ್ರ ಶೆಟ್ಟಿ, ಸವಿಸ್ತಾರ್‌ ಶೆಟ್ಟಿ ಉಪಸ್ಥಿತರಿದ್ದರು.  ಕು| ತೃಪ್ತಿ ರೈ,  ಖುಷಿ ಶೆಟ್ಟಿ, ರಿಷಾ ಎಲ್‌. ಶೆಟ್ಟಿ ಮತ್ತು ಶ್ರೀûಾ ಶೆಟ್ಟಿ ಪ್ರಾರ್ಥನೆಗೈದರು. ಶೈಕ್ಷಣಿಕ, ಸಾಮಾಜಿಕ ಸಮಿತಿಯ ಕಾರ್ಯಾಧ್ಯಕ್ಷ ಎಚ್‌. ಸಂಕಪ್ಪ ಶೆಟ್ಟಿ ಫಲಾನುಭವಿಗಳ ಪಟ್ಟಿ ವಾಚಿಸಿದರು.  ಕೋಶಾಧಿಕಾರಿ ಜಗದೀಶ್‌ ಶೆಟ್ಟಿ ಇರಾಗುತ್ತು  ಫಲಾನುಭವಿಗಳ ಯಾದಿ ವಾಚಿಸಿದರು. ಬಾಲಕೃಷ್ಣ ಆಳ್ವ ಕೋಡಾಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಚಂದ್ರÅಹಾಸ ಡಿ. ಶೆಟ್ಟಿ ವಂದಿಸಿದರು. 

ಭಾರತೀಯರಾಗಿ ಬಾಳಿದಾಗ ಶ್ರೇಯಸ್ಸು
ಸಮಾಜ ಸೇವೆ ನನ್ನ ಅತಿ ಪ್ರಿಯ  ವಿಚಾರವಾಗಿದೆ. ಸಮಾಜ ಸೇವೆಗೆ ಹೃದಯಶೀಲತ ಮನೋಭಾವ‌ ಅಗತ್ಯವಿದೆ. ಇದು ಶಶಿಕಿರಣ್‌ ಮತ್ತು ಆರತಿ ಶೆಟ್ಟಿ  ದಂಪತಿಯ ರಕ್ತದಲ್ಲೇ ಅಡಗಿದೆ.  ನಾವೆಲ್ಲರೂ ಜಾತಿ ಧರ್ಮದ ಸ್ವಾರ್ಥ ಕಾಣದೆ ಮೊದಲಾಗಿ ಭಾರತೀಯರಾಗಿ ಬಾಳಿದಾಗ ಎಲ್ಲರ ಶ್ರೇಯಸ್ಸು ಸಾಧ್ಯವಾಗುವುದು. ಎಲ್ಲರೂ ಸುಖೀಯಾಗಿ ಬಾಳಬೇಕು. ನಾವೆಲ್ಲ ಮಾನವತಾ ಮನೋಭಾವ ಬೆಳೆಸಿಕೊಳ್ಳಬೇಕು. ಮಾತಾ ಪಿತರಿಗೆ ಆದರಣೀಯರಾಗಿ ಬದುಕು ಬಂಗಾರವಾಗಿಸಬೇಕು  ಎಂದು  ಕೆ. ಎಲ್‌. ಪ್ರಸಾದ್‌ (ಸಲಹೆಗಾರರು : ಸಿಎಸ್‌ಆರ್‌ ಆಲ್‌ಕಾರ್ಗೋ) ಹೇಳಿದರು.

ಇದು ಕಲ್ಲು ಸಿಮೆಂಟಿನ ಭವನವಲ್ಲ. ಸಮಾಜದ ಜನತೆಯ ಪ್ರೀತಿಯ ದ್ಯೋತಕವಾಗಿದ್ದು, ಸಾಮಾಜಿಕ ಶ್ರೇಯೋಭಿವೃದ್ಧಿಯ ಹಣತೆ ಇದಾಗಿದೆ. ಜಾತಿ ಮತ ಧರ್ಮದ ಅಂತರವಿಲ್ಲದೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎನ್ನುವ ಶಶಿಕಿರಣ್‌ ಶೆಟ್ಟಿ ಆಶಯದಂತೆ ಈ ವಿದ್ಯಾರ್ಥಿವೇತನ ವಿತರಿಸಲಾಗುತ್ತಿದೆ.  ವಿದ್ಯಾರ್ಥಿ ವೇತನ ಕೊಂಡುಕೊಳ್ಳುವುದರ ಬಗ್ಗೆ ಮಾಹಿತಿ ಮತ್ತು ಅದರ ಬಗ್ಗೆ ಜವಾಬ್ದಾರಿ ಇರುವುದು ತಮ್ಮ ತಮ್ಮ ಕರ್ತವ್ಯ. ಮುಂದಿನ ದಿನಗಳಲ್ಲಿ ಸಮಾಜದ ಮಕ್ಕಳಿಗೆ ಬಡ್ಡಿ ರಹಿತ ಸಾಲವನ್ನು ನೀಡಿ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮತ್ತು ಸಂಪೂರ್ಣ ಶಿಕ್ಷಣಕ್ಕಾಗಿ ಕನಿಷ್ಠ 100 ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸುವ ಉದ್ದೇಶ ಈ ಸಂಸ್ಥೆಗಿದೆ. ಸರ್ವ ಬಂಧುಗಳನ್ನು ಬಂಟ ಸಂಘ ಗೌರವಿಸುತ್ತಿದೆ. ಅದನ್ನೆ ಮಕ್ಕಳು ಮತ್ತು ಪಾಲಕರು ಸಮಾಜದಲ್ಲಿ ಪ್ರದರ್ಶಿಸಿ ರಾಷ್ಟ್ರೀಯ ಭಾವೈಕ್ಯತೆಗೆ ಪ್ರೇರಕರಾಗಬೇಕು
-ನಗ್ರಿಗುತ್ತು ವಿವೇಕ್‌ ಶೆಟ್ಟಿ
(ಅಧ್ಯಕ್ಷರು : ಬಂಟವಾಳ ಬಂಟರ ಸಂಘ)

ಆಲ್‌ಕಾರ್ಗೊ ಸಂಸ್ಥೆಯ ಉದ್ದೇಶವೇ ಸದೃಢ ರಾಷ್ಟ್ರ ನಿರ್ಮಾಣ. ಸ್ವಾರ್ಥದಿಂದ ಹೊರಬಂದು ಪರಿಶ್ರಮಿಗಳಾಗಿ ಮುನ್ನಡೆದಾಗ ಜೀವನ ಸಫಲಾಗುವುದು. ಮಕ್ಕಳಲ್ಲಿ ಕನಸುಗಳೇ ಬದುಕಿಗೆ ಮಾರ್ಗದರ್ಶನ ಆಗಬೇಕು. ಇದನ್ನು ತಾವೆಲ್ಲರೂ ಪೂರ್ಣ ಗೊಳಿಸಬೇಕು. ತಮ್ಮಲ್ಲಿನ ಪ್ರತಿಭೆಗಳನ್ನು ಪ್ರಾಮಾಣಿಕವಾಗಿ ಪ್ರದರ್ಶಿಸಿ ಮುನ್ನಡೆದಾಗ ತಾವೆಲ್ಲರೂ ಸಾಧಕರಾಗುತ್ತೀರಿ
-ಡಾ| ನೀಲ್‌ರತ್ನ ಆರ್‌. ಶೆಂಡೆ (ಸಲಹೆಗಾರರು : ಸಿಎಸ್‌ಆರ್‌ ಆಲ್‌ಕಾರ್ಗೋ)

ಚಿತ್ರ-ವರದಿ : ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.