ಆ. 4: ಬಂಟರ ಭವನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ
Team Udayavani, Jul 29, 2018, 1:33 PM IST
ಮುಂಬಯಿ: ಅಳಿಯ ಕಟ್ಟು ಸಂಸ್ಕೃತಿಯ ಉಗಮ ಸಾœನವಾದ ತೌಳವ ಸಾಮ್ರಾಜ್ಯ, ದೇಗುಲಗಳ ಮೂಲ ನೆಲೆಬೀಡಾದ ಶ್ರೀ ಬಾಕೂìರು ಮೂಲಸ್ಥಾನವು ಶ್ರೀ ಬಾರ್ಕೂರು ಮಹಾಸಂಸ್ಥಾನಮ್ ಎಂಬ ಹೆಸರಿನಲ್ಲಿ ಪುನರುತ್ಥಾನಗೊಂಡು ವರ್ಷ ಕಳೆದಿದೆ. ಪರಮಪೂಜ್ಯ ಶ್ರೀ ವಿದ್ಯಾವಾಚಸ್ಪತಿ ಡಾ| ಶ್ರೀ ವಿಶ್ವ ಸಂತೋಷ ಭಾರತಿ ಶ್ರೀ ಪಾದಂಗಳವರ ದಿವ್ಯ ಮಾರ್ಗದರ್ಶನದಲ್ಲಿ ಬಂಟರ ಮಹಾಸಂಸ್ಥಾನವು 9 ಮಂದಿ ವಿಶ್ವಸ್ತರನ್ನು ಒಳಗೊಂಡಿರುವುದಲ್ಲದೆ 29 ಮಂದಿ ನಿರ್ದೇಶಕರುಗಳ ನಾಯಕತ್ವದಲ್ಲಿ ಭವನ ನಿರ್ಮಾಣ ಕಾರ್ಯಯೋಜನೆಯಲ್ಲಿ ತೊಡಗಿದೆ. ಶ್ರೀ ಬಾರ್ಕೂರು ಮಹಾ ಸಂಸ್ಥಾನದ ಮುಂಬಯಿ ಘಟಕ ಆನಂಭ ವಾದಂದಿನಿಂದ ಪ್ರತೀ ವರ್ಷ ತಿರುಪತಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ವಿಜೃಂ ಭಣೆಯಿಂದ ಆಚರಿಸಲಾಗುತ್ತಿದೆ.
ಈ ಬಾರಿ ಆ. 4 ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 7.30 ರಿಂದ ಮಧ್ಯಾಹ್ನ 1.30 ರವರೆಗೆ ಶ್ರೀನಿವಾಸ ಕಲ್ಯಾಣೋತ್ಸವ ನೆರವೇರಲಿದ್ದು, ಅಪರಾಹ್ನ 2.30 ರಿಂದ ಗುರುವಂದನೆ ನಡೆಯಲಿದೆ. ಬಾಕೂìರು ಮಹಾಸಂಸ್ಥಾನದ ಶ್ರೀ ವಿದ್ಯಾವಾಚಸ್ಪತಿ ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರು ಅಂದು ಆಶೀರ್ವಚನ ನೀಡಲಿದ್ದಾರೆ.
ಮಧ್ಯಾಹ್ನ ಅನ್ನಪ್ರಸಾದದ ಬಳಿಕ ಬೆಂಗಳೂರಿನ ರಾಜೀವ್ ಬಿಜಾಡಿ ಬಳಗದವರಿಂದ ಗಾನ ಲಹರಿ ಹಾಗೂ ಶ್ರೀಪಾದರಿಂದ ಗಾನ ವಿಶ್ಲೇಷಣೆ ನಡೆಯಲಿದೆ. ಅಪರಾಹ್ನ 3 ರಿಂದ ಸಂಜೆ 4.30 ರವರೆಗೆ ಬಾಕೂìರು ಮಹಾಸಂಸ್ಥಾನಮ್ ಇದರ ವಿಶ್ವಸ್ಥ ಹಾಗೂ ಸಂಸ್ಥಾನದ ಮುಂಬಯಿ ಘಟಕದ ಅಧ್ಯಕ್ಷ ಡಾ| ಸತ್ಯಪ್ರಕಾಶ್ ಎಸ್. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಅತಿಥಿ-ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಭಗವದ್ಭಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವಂತೆ ಶ್ರೀ ಬಾರ್ಕೂರು ಮಹಾಸಂಸ್ಥಾನಮ್ ಮುಂಬಯಿ ಘಟಕದ ಸಮಿತಿಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ