ಭಾರತ್‌ ಬ್ಯಾಂಕ್‌ ಭಾಂಡೂಪ್‌ ಪಶ್ಚಿಮ ಸ್ಥಳಾಂತರಿತ ಶಾಖೆ ಶುಭಾರಂಭ


Team Udayavani, Jan 27, 2019, 3:49 PM IST

2501mum09a.jpg

ಮುಂಬಯಿ: ಭಾರತ್‌ ಬ್ಯಾಂಕ್‌ ಆಧುನಿಕ ಮತ್ತು ವೈಜ್ಞಾನಿಕವಾಗಿ ಹಣಕಾಸು ಸ್ಪಂದನೆಗೆ ಶೀಘ್ರಗತಿಯಲ್ಲಿ ಸ್ಪಂದಿಸುತ್ತಿರುವ ಕಾರಣ ಇಷ್ಟೊಂದು ಸೇವಾ ಪ್ರಸಿದ್ಧಿಗೆ ಪಾತ್ರವಾಗಿದೆ. ನನ್ನ ಹಣಕಾಸು ವ್ಯವಹಾರದ ಪಾಲುದಾರ ಭಾರತ್‌ ಬ್ಯಾಂಕ್‌ ಎನ್ನಲು ಹೆಮ್ಮೆಯೆನಿಸುತ್ತದೆ. ನನ್ನನ್ನು ಧನಾತ್ಮಕವಾಗಿ ಬಲಪಡಿಸಿದ ಈ ಬ್ಯಾಂಕ್‌ ಒಂದು ಸಮರ್ಥ ಗ್ರಾಹಕಸ್ನೇಹಿ ಪಥಸಂಸ್ಥೆಯಾಗಿದೆ.  ಗ್ರಾಹಕರ ಸೇವಾತೃಪ್ತಿಯೇ ಇದರ ಉತ್ಕೃಷ್ಟತೆಯಾಗಿದ್ದು,  ಇದಕ್ಕೆ ಸಾಮರ್ಥ್ಯಶಾಲಿ ಜಯ ಸುವರ್ಣರ ಸಾರಥ್ಯವೇ ಕಾರಣ ಎಂದು ಸೆಂಟ್ರಲ್‌ ಹೆಲ್ತ್‌ ಹೋಮ್‌ ಭಾಂಡೂಪ್‌ ಇದರ ಮುಖ್ಯಸ್ಥ ಡಾ| ಕೆ.ರತ್ನಾಕರ್‌ ಶೆಟ್ಟಿ ನುಡಿದರು.

ಜ. 25 ರಂದು ಭಾರತ್‌ ಕೋ. ಆಪರೇಟಿವ್‌ ಬ್ಯಾಂಕ್‌ ಇದರ ಭಾಂಡೂಪ್‌ ಪಶ್ಚಿಮದ ಸ್ಥಳಾಂತರಿತ ಶಾಖೆಯನ್ನು ಸ್ಥಳೀಯ ಸುಭಾಷ್‌ ನಗರದಲ್ಲಿನ ಸ್ಕಾಯ್‌ಲೈನ್‌ ಸ್ಪಾರ್ಕಲ್‌ ಕಟ್ಟಡದಲ್ಲಿ  ಉದ್ಘಾಟಿಸಲಾಗಿದ್ದು, ಈ ಸಂದರ್ಭಧಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿ ಶುಭಹಾರೈಸಿದರು.

ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷ  ಹಾಗೂ ಭಾರತ್‌ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ ರಿಬ್ಬನ್‌ ಬಿಡಿಸಿ ಶಾಖೆಯನ್ನು ಸೇವಾರ್ಪಣೆಗೊಳಿಸಿದರು. ಬ್ಯಾಂಕಿನ ಮಾತೃಸಂಸ್ಥೆ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ ದೀಪ ಬೆಳಗಿಸಿ ಶಾಖೆಗೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಬ್ಯಾಂಕಿನ ಉಪ ಕಾರ್ಯಾಧ್ಯಕ್ಷೆ ನ್ಯಾಯವಾದಿ ರೋಹಿಣಿ ಜೆ. ಸಾಲ್ಯಾನ್‌ ಎಟಿಎಂ ಸೇವೆಯನ್ನೂ  ಹಾಗೂ ನಿರ್ದೇಶಕಿ ಶಾರದಾ ಸೂರು ಕರ್ಕೇರ ಭದ್ರತಾ ಕೇಂದ್ರವನ್ನು ಉದ್ಘಾಟಿಸಿದರು.

ವಿಸ್ತೃತ ಜಾಗಕ್ಕೆ ಸ್ಥಳಾಂತರ ಅಂದರೆ ಸಂಸ್ಥೆಯ ಸಮೃದ್ಧಿಯ ಸಂಕೇತ ಎಂದರ್ಥ. ಸದ್ಯ 102 ಶಾಖೆಗಳುಳ್ಳ ಈ ಬ್ಯಾಂಕ್‌ ಶೀಘ್ರವೇ 150 ಶಾಖೆಗಳನ್ನು ಹೊಂದುವಂತಾಗಲಿ. ಗ್ರಾಹಕರ ಆಶಯುತ ಸೇವೆಗೆ ಪಾತ್ರವಾಗಿ ಜನಮನ್ನಣೆಗೆ ಪಾತ್ರವಾಗಿ ಮೆರೆಯಲಿ ಎಂದು ಚಂದ್ರಶೇಖರ ಪೂಜಾರಿ ಅವರು ಆಶಯ ವ್ಯಕ್ತಪಡಿಸಿದರು. ಬ್ಯಾಂಕ್‌ನ ಪ್ರತಿಷ್ಠಿತ ಗ್ರಾಹಕ,  ಉದ್ಯಮಿ ಜನಾರ್ದನ ಕದಂ  ಮಾತನಾಡಿ, ನನ್ನ ಬದುಕಿಗೆ ಪ್ರೇರಣೆ ನೀಡಿದ ಬ್ಯಾಂಕ್‌ ಇದಾಗಿದೆ. ಎಂದಿಗೂ ಹಣಕಾಸು ವ್ಯವಹಾರಕ್ಕೆ ವಿಶ್ವಾಸರ್ಹ ಬ್ಯಾಂಕ್‌. ಈ ಸಂಸ್ಥೆಯಲ್ಲಿ ಎಂದಿಗೂ ರಾಜಕಾರಣ ಕಂಡಿಲ್ಲ ಎಂದರು.

ಉದ್ಯಮಿಗಳಾದ ಧನ್‌ಬದ್ಧೂರ್‌ ಸಿಂಗ್‌, ರಾಜೇಶ್‌ ಅಗರ್ವಾಲ್‌, ಸಿಎ ಕಪಾಡಿಯಾ, ಸಂಗೀತಾ ಪಂಕಜ್‌ ಅಗರ್ವಾಲ್‌,  ರವೀಂದ್ರ ಪೂಜಾರಿ, ಹಿರಿಯ ನಾಗರಿಕ ಪ್ರಭಾಕರ್‌ ವಿನಾಯಕ್‌ ಪ್ರಧಾನ್‌ ಮಾತನಾಡಿ ಭಾರತ್‌ ಬ್ಯಾಂಕ್‌ನಲ್ಲಿ ತಮ್ಮ ವ್ಯವಹಾರ ಅನುಭವಗಳನ್ನು ಹಂಚಿ ಸಿಬಂದಿಗಳ ಸೇವಾವೈಖರಿಯನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ  ಬ್ಯಾಂಕ್‌ನ ಸಿಇಒ ಮತ್ತು ಆಡಳಿತ ನಿರ್ದೇಶಕ ಸಿ. ಆರ್‌. ಮೂಲ್ಕಿ, ನಿರ್ದೇಶಕರಾದ ಎಲ್‌. ವಿ. ಅಮೀನ್‌, ಎನ್‌. ಟಿ. ಪೂಜಾರಿ, ಗಂಗಾಧರ್‌ ಜೆ. ಪೂಜಾರಿ, ಜ್ಯೋತಿ ಕೆ. ಸುವರ್ಣ, ಭಾಸ್ಕರ್‌ ಎಂ. ಸಾಲ್ಯಾನ್‌, ಎಂ. ಎನ್‌. ಕರ್ಕೇರ, ಪ್ರೇಮನಾಥ್‌ ಪಿ. ಕೋಟ್ಯಾನ್‌, ಮೋಹನ್‌ದಾಸ್‌ ಎ. ಪೂಜಾರಿ, ಪುರುಷೋತ್ತಮ ಎಸ್‌. ಕೋಟ್ಯಾನ್‌, ಮಾಜಿ ನಿರ್ದೇಶಕರಾದ ಎನ್‌. ಎಂ. ಸನಿಲ್‌, ಎಂ. ಬಿ. ಸನಿಲ್‌, ಬಿಲ್ಲವರ ಧುರೀಣರುಗಳಾದ  ರಾಘವ ಕೆ.ಕುಂದರ್‌, ಶಂಕರ್‌ ಪೂಜಾರಿ, ನಿವೃತ್ತ ಉನ್ನತಾಧಿಕಾರಿಗಳಾದ ಶೋಭಾ ದಯಾನಂದ್‌, ಸದಾನಂದ ಪೂಜಾರಿ, ನವೀನ್‌ಚಂದ್ರ ಬಂಗೇರ, ಬಿಲ್ಲವರ ಅಸೋಸಿಯೇಶನ್‌ನ ಉಪಾಧ್ಯಕ್ಷ ಹರೀಶ್‌ ಜಿ. ಅಮೀನ್‌, ಬ್ಯಾಂಕ್‌ನ ಪ್ರಧಾನ ಪ್ರಬಂಧಕ ವಿದ್ಯಾನಂದ ಎಸ್‌. ಕರ್ಕೇರ,  ಉಪ ಪ್ರಧಾನ ಪ್ರಬಂಧಕ ಪ್ರಭಾಕರ್‌ ಜಿ. ಸುವರ್ಣ, ಸತೀಶ್‌ ಎಂ. ಬಂಗೇರ, ಪ್ರಭಾಕರ ಜಿ. ಪೂಜಾರಿ, ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಸುನೀಲ್‌ ಎ.ಗುಜರನ್‌, ವಿಜಯ್‌ ಪಾಲನ್‌, ಭಾರತ್‌ ಬ್ಯಾಂಕ್‌ ಎಂಪ್ಲಾಯಿಸ್‌ ಯೂನಿಯನ್‌ ಕಾರ್ಯದರ್ಶಿ ದಿನೇಶ್‌ ಕೆ. ಸನಿಲ್‌, ವಿವಿಧ ಶಾಖೆಗಳ ಮುಖ್ಯಸ್ಥರು  ಸೇರಿದಂತೆ ಬ್ಯಾಂಕ್‌ನ ನೂರಾರು ಗ್ರಾಹಕರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಶೇಖರ ಶಾಂತಿ ಉಳ್ಳೂರು ಅವರ ಪೌರೋಹಿತ್ಯದಲ್ಲಿ ಗಣಹೋಮ, ಸತ್ಯನಾರಾಯಣ ಮಹಾಪೂಜೆ, ವಾಸ್ತು ಪೂಜೆ, ನೆರವೇರಿಸಿ ತೀರ್ಥಪ್ರಸಾದ ವಿತರಿಸಿ ಅನುಗ್ರಹಿಸಿದರು. ಗೋಪಿನಾಥ್‌ ಜಿ. ಅಮೀನ್‌ ಪೂಜಾದಿಗಳಿಗೆ ಸಹಕರಿಸಿದ್ದು, ಜಯಂತ್‌ ಎನ್‌. ಪೂಜಾರಿ ಹಾಗೂ ವಿನಯ್‌ ಸನಿಲ್‌ ಮತ್ತು ಕವಿತಾ ವಿನಯ್‌ ದಂಪತಿ ಪೂಜೆಯ ಯಜಮಾನತ್ವ ವಹಿಸಿದ್ದರು. ಬ್ಯಾಂಕ್‌ನ ಪ್ರಧಾನ ಪ್ರಬಂಧಕರೂ ಅಭಿವೃದ್ಧಿ ಇಲಾಖಾ ಮುಖ್ಯಸ್ಥ ದಿನೇಶ್‌ ಬಿ. ಸಾಲ್ಯಾನ್‌ ಸ್ವಾಗತಿಸಿ ಪ್ರಸ್ತಾವನೆಗೈದರು. ಕು| ದೀಪಾಲಿ ಹೆಜ್ಮಾಡಿ ಅತಿಥಿಗಳನ್ನು ಪರಿಚಯಿಸಿದರು. ಕು| ನೇಹಾ ಅಮೀನ್‌ ಕಾರ್ಯಕ್ರಮ ನಿರೂಪಿಸಿದರು. ಶಾಖೆಯ ಮುಖ್ಯಸ್ಥ ಜಯಂತ್‌ ಎನ್‌.ಪೂಜಾರಿ ವಂದಿಸಿದರು.  

ಚಿತ್ರ – ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.