ಭಾರತ್‌ ಬ್ಯಾಂಕ್‌ ಸ್ಟಾಫ್‌ ವೆಲ್ಫೇರ್‌ ಕ್ಲಬ್‌:ಸ್ನೇಹ ಸಮ್ಮಿಲನ


Team Udayavani, Jan 19, 2018, 2:53 PM IST

1701mum06a.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಸಂಚಾಲಿತ ಭಾರತ್‌ ಕೋ- ಆಪರೇಟಿವ್‌ ಬ್ಯಾಂಕ್‌ ಮುಂಬಯಿ ಇದರ ಬೆಂಗಳೂರು ಸ್ಟಾಫ್‌ ವೆಲ್ಫೇರ್‌  ಕ್ಲಬ್‌ ವತಿಯಿಂದ ಜ. 13 ಮತ್ತು ಜ. 14ರಂದು ವಾರ್ಷಿಕ ಸ್ನೇಹ ಸಮ್ಮಿಲನ ಮತ್ತು ಕ್ರೀಡೋತ್ಸವವನ್ನು ಆಯೋಜಿಸಲಾಗಿತ್ತು.

ಸಿಲಿಕಾನ್‌ ಸಿಟಿಯ ಗೇಟ್‌ವೇ ರೆಸೋರ್ಟ್‌ನಲ್ಲಿ ನಡೆದ ಈ ಕಾರ್ಯಕ್ರಮವು  ಸ್ಟಾಫ್‌ ವೆಲ್ಫೆàರ್‌ ಕ್ಲಬ್‌ ಸದಸ್ಯರಾದ ಚೇತನ್‌ ಕುಮಾರ್‌, ನಾಗರಾಜ್‌ ಸುವರ್ಣ,  ಚೇತಲಿ ಸುವರ್ಣ ಇವರ ಮುಂದಾಳತ್ವದಲ್ಲಿ ಹಾಗೂ ಹಿರಿಯ ಪ್ರಬಂಧಕರಾದ ಸತೀಶ್‌ ಪಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ  ನಡೆಯಿತು. ಇದೇ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ  ಬೆಂಗಳೂರಿನ ಸುರೇಖಾ ಡಿ. ಪೂಜಾರಿ, ನಾಗರಾಜ್‌ ಸುವರ್ಣ, ರವೀಂದ್ರ ಕುಂದರ್‌, ಗೋಪಾಲ್‌ ಪೂಜಾರಿ,  ಕಿರಣ್‌ ಬಿ. ಹಾಗೂ ಶಾಖಾ  ಪ್ರಮುಖರಾದ ಎವರೆಲಾ ಅಶಿಂ ಅವರು ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಬೇಬಿ ಲಾಶಿಯಾ ನಾಗರಾಜ್‌ ಅವರು  ಪ್ರಾರ್ಥನೆಗೈದರು. ವೀಣಾ ಕಿರಣ್‌ ಕುಮಾರ್‌ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಪುಟಾಣಿಗಳಿಂನ ನೃತ್ಯ ವೈವಿಧ್ಯ, ಕ್ರಿಕೆಟ್‌, ತ್ರೋಬಾಲ್‌ ಇನ್ನಿತರ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.

ಅಧ್ಯಕ್ಷತೆ ವಹಿಸಿದ್ದ ಸತೀಶ್‌ ಪೂಜಾರಿ ಅವರು ಮಾತನಾಡಿ, ಭಾರತ್‌ ಬ್ಯಾಂಕ್‌ ನಮ್ಮಗೆಲ್ಲ ಒಂದು ರೀತಿಯಲ್ಲಿ  ಕಲ್ಪವೃಕ್ಷ ಇದ್ದಂತೆ. ನಾವೆಲ್ಲರೂ ಶ್ರಮಪಟ್ಟು ದುಡಿಯಬೇಕು.  ಇದರಿಂದ ನಮ್ಮ ಪ್ರಗತಿ ಖಂಡಿತಾ ಆಗುತ್ತದೆ.  ನಮ್ಮ ಬ್ಯಾಂಕಿನ ನಿರ್ದೇಶಕ  ಮಂಡಳಿಗೆ ನಾವೆಲ್ಲರೂ ಚಿರಋಣಿಗಳು ಎಂದು ನುಡಿದು ಎಲ್ಲರಿಗೂ ಶುಭಹಾರೈಸಿದರು. ಸತೀಶ್‌ ಎಲ್‌. ಸುವರ್ಣ, ಭಾಸ್ಕರ್‌ ಸರಪಾಡಿ, ಸದಾನಂದ ಕಾರ್ಕಳ, ಆಕಾಶ್‌ ಭಾಸ್ಕರ್‌ ಪೂಜಾರಿ,  ಚೇತನ್‌ ಕುಮಾರ್‌ ಹಾಗೂ  ಎಲ್ಲ ಸಿಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಪ್ರತೀ ವರ್ಷ ಸಹಕರಿಸುತ್ತಿರುವ  ವಜೀರ ಕುಮಾರ್‌ ಪಿ. ಜೈನ್‌ ಅವರನ್ನು ಸಮ್ಮಾನಿಸಲಾಯಿತು. ಕೊನೆಗೆ ಗೋಪಾಲ್‌  ಪೂಜಾರಿ ಅವರು ವಂದಿಸಿದರು. ಸದಸ್ಯ ಬಾಂಧವರು, ಅವರ ಪರಿವಾರದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.