ಭವಾನಿ ಫೌಂಡೇಶನ್‌ ಟ್ರಸ್ಟ್‌ಗೆ ‘ಅತ್ಯುತ್ತಮ ಸೇವಾ ಪ್ರಶಸ್ತಿ’


Team Udayavani, Sep 2, 2019, 1:15 PM IST

mumbai-tdy-2

ಮುಂಬಯಿ, ಸೆ. 1: ನಗರದ ಪ್ರಸಿದ್ಧ ಸಮಾಜ ಸೇವಾ ಸಂಸ್ಥೆ ಭವಾನಿ ಫೌಂಡೇಶನ್‌ಗೆ 2019ನೇ ಸಾಲಿನ ‘ಅತ್ಯುತ್ತಮ ಸೇವಾ ಪ್ರಶಸ್ತಿ’ ಲಭಿಸಿದೆ. ಶಿಕ್ಷಣ, ಆರೋಗ್ಯ, ವಿವಾಹ, ರಕ್ತಸಂಗ್ರಹ, ಆದಿವಾಸಿಗಳ ಕಲ್ಯಾಣ, ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ಮೊದಲಾದ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು, ಸಮಾಜಮುಖೀ ಕಾರ್ಯದಲ್ಲಿ ಮಾನವೀಯ ಅನುಕಂಪದಿಂದ ಸ್ಪಂದಿಸುತ್ತಿರುವ ‘ಭವಾನಿ ಫೌಂಡೇಶನ್‌’ಗೆ ಆ. 30ರಂದು ದಕ್ಷಿಣ ಗೋವಾದ ಹೋಲಿಡೇ ಇನ್‌ ಹೊಟೇಲ್ನಲ್ಲಿ ನಡೆದ ಐಬೀಚ್ ಫಿಲ್ಮ್ ಫೆಸ್ಟಿವಲ್ನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.

ಭವಾನಿ ಫೌಂಡೇಷನ್‌ ಟ್ರಸ್ಟ್‌ ಇದರ ಅಧ್ಯಕ್ಷ ಕುಸುಮೋದರ ಡಿ. ಶೆಟ್ಟಿ (ಕೆ. ಡಿ. ಶೆಟ್ಟಿ) ಅವರಿಗೆ ಗೋವಾದ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌, ಕೇಂದ್ರ ಆಯುಷ್‌ ಹಾಗೂ ಉಪ ರಕ್ಷಣ ಸಚಿವ ಶ್ರೀಪಾದ್‌ ನಾಯ್ಕ, ಉಡುಪಿ ಶಾಸಕ ರಘುಪತಿ ಭಟ್ ಅವರು ಅತ್ಯುತ್ತಮ ಸೇವಾ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಿ ಶುಭಹಾರೈಸಿದರು. ಅಖೀಲ ಭಾರತ ನೇತ್ರ ಚಿಕಿತ್ಸಾ ಸೊಸೈಟಿ, ಕರ್ನಾಟಕ ನೇತ್ರ ಚಿಕಿತ್ರಾ ಸೊಸೈಟಿ ಹಾಗೂ ಪ್ರಸಾದ್‌ ನೇತ್ರಾಲಯದ ಜಂಟಿ ಆಯೋಜನೆಯಲ್ಲಿ ಜರಗಿದ ಈ ಸಮಾರಂಭದಲ್ಲಿ ನೇತ್ರದಾನ ಕಾರ್ಯಕ್ಕೆ ವಿಶಿಷ್ಟ ಕೊಡುಗೆ ಸಲ್ಲಿಸಿರುವ ಭವಾನಿ ಫೌಂಡೇಷನ್‌ ಟ್ರಸ್ಟ್‌ ಸಂಸ್ಥೆಯನ್ನು ಅಭಿನಂದಿಸಲಾಯಿತು. ಅಖೀಲ ಭಾರತ ನೇತ್ರ ಚಿಕಿತ್ಸಾ ವೈಜ್ಞಾನಿಕ ಸಮಿತಿಯ ಡಾ| ಕೃಷ್ಣ ಪ್ರಸಾದ್‌ ಕುಡ್ಲು, ಡಾ| ಚಿನ್ನಪ್ಪ ಎ. ಜಿ., ಮುಂಬಯಿ ಸಕಾಲ್ ಪತ್ರಿಕೆಯ ಮಹಾಪ್ರಬಂಧಕ ಹಾಗೂ ಭವಾನಿ ಫೌಂಡೇಶ‌ನ್‌ನ ವಿಶ್ವಸ್ತ ದಿನೇಶ್‌ ಶೆಟ್ಟಿ, ಇನ್‌ಸ್ಪೆಕ್ಟರ್‌ ಗೊಪಾಲ್ ಕುಂದರ್‌, ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.

‘ಭವಾನಿ ಫೌಂಡೇಶನ್‌ ಟ್ರಸ್ಟ್‌’ ಮುಂಬಯಿ: ನಗರದ ಪ್ರಸಿದ್ಧ ಸಮಾಜ ಸೇವಕ, ಉದ್ಯಮಿ ಕೆ. ಡಿ. ಶೆಟ್ಟಿ ಅವರು ತನ್ನ ತಾಯಿಯ ಹೆಸರಿನಲ್ಲಿ ಸ್ಥಾಪಿಸಿದ ಭವಾನಿ ಫೌಂಡೇಶನ್‌ ಟ್ರಸ್ಟ್‌ ಪ್ರಸ್ತುತ ಮಹಾರಾಷ್ಟ್ರ ಸೇರಿದಂತೆ ಊರಿನಲ್ಲೂ ಸಮಾಜಪರ ಕಾರ್ಯಗಳೊಂದಿಗೆ ಚಿರ ಪರಿಚಿತವಾಗಿದೆ. ಸಂಸ್ಥೆಯು ಜಾತಿ, ಮತ, ಧರ್ಮವನ್ನು ಮರೆತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಶಿಕ್ಷಣ, ವೈದ್ಯಕೀಯ ಸಹಾಯ, ಬಡ ಹೆಣ್ಮಕ್ಕಳ ಮದುವೆಗೆ ನೆರವು, ಬಡವರಿಗೆ ಮನೆ ನಿರ್ಮಾಣ, ಆದಿವಾಸಿ ಶಾಲೆಗಳ ಜೀರ್ಣೋದ್ಧಾರ ಇನ್ನಿತರ ಸಮಾಜಪರ ಕಾರ್ಯಕ್ರಮಗಳನ್ನು ಸದ್ದಿಲ್ಲದೆ ಮಾಡುತ್ತಿದೆ. ಕೆ. ಡಿ. ಶೆಟ್ಟಿ ಅವರ ನೇತೃತ್ವದಲ್ಲಿ ಸಂಸ್ಥೆಯು ನೊಂದವರ ಪಾಲಿಗೆ ಅಪತ್ಬ್ಪಾಂಧವ ರೀತಿಯಲ್ಲಿ, ದೀನದಲಿತರ ಕಣ್ಣೀರೊರೆಸುವ ಕಾರ್ಯದಲ್ಲೂ ತೊಡಗಿದೆ.

ಪ್ರತೀ ವರ್ಷ ಲಕ್ಷಾಂತರ ರೂ. ಗಳನ್ನು ಶಿಕ್ಷಣ, ಆರೋಗ್ಯ ಇನ್ನಿತರ ಸಮಾಜಪರ ಕಾರ್ಯಗಳಿಗೆ ವ್ಯಯಿಸುತ್ತಿದೆ. ಊರಿನ ಹೆಚ್ಚಿನ ದೈವ-ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯದಲ್ಲಿ ದೈವ-ದೇವರ ಬಗ್ಗೆ ಅಪಾರ ನಂಬಿಕೆಯನ್ನು ಹೊಂದಿರುವ ಕೆ. ಡಿ. ಶೆಟ್ಟಿ ಅವರ ಪಾಲು ಮಹತ್ತರವಾಗಿದೆ. ಫೌಂಡೇಶನ್‌ನ ಸಾಧನೆಗಳಿಗೆ ಹಲವಾರು ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ. ಎಲೆಮರೆಯ ಕಾಯಿಯಂತೆ ಸಮಾಜ ಸೇವೆಯಲ್ಲಿ ತೊಡಗಿರುವ ಕೆ. ಡಿ. ಶೆಟ್ಟಿ ಅವರು ತಮ್ಮ ‘ಭವಾನಿ ಸಮೂಹ’ ಸಂಸ್ಥೆಯಲ್ಲಿ ತುಳು-ಕನ್ನಡಿಗರು ಸೇರಿದಂತೆ ಸಾವಿರಾರು ಮಂದಿಗೆ ಉದ್ಯೋಗವನ್ನು ನೀಡಿದ್ದಾರೆ. ದೇಶದ ಪ್ರಮುಖ ಕಂಪೆನಿಗಳಲ್ಲಿ ‘ಭವಾನಿ ಸಮೂಹ ಸಂಸ್ಥೆ’ಯು ಗುರುತಿಸಿಕೊಂಡಿದ್ದು, ಕಳೆದ ಮೂರು-ನಾಲ್ಕು ವರ್ಷಗಳಿಂದ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ.

 

ಚಿತ್ರ-ವರದಿ : ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.