ಭವಾನಿ ಫೌಂಡೇಶನ್ ವತಿಯಿಂದ ನಿರ್ಮಿತ ಸಮಾಜ ಭವನದ ಹಸ್ತಾಂತರ
Team Udayavani, Feb 6, 2019, 2:02 PM IST
ಮುಂಬಯಿ: ನೆರೆಯ ರಾಯಗಢ್ ಜಿಲ್ಲೆಯ ಪನ್ವೇಲ್ ತಾಲೂಕಿನ ಪಿರ್ಕಟ್ವಾಡಿ ಗ್ರಾಮದಲ್ಲಿ ನೆಲೆಸಿರುವ ಆದಿವಾಸಿ ಸಮಾಜದ ಜನರ ಮದುವೆ, ಮುಂಜಿ, ಸಭೆ, ಸಮಾರಂಭ ಹಾಗೂ ಇನ್ನಿತರ ಕಾರ್ಯಗಳಿಗಾಗಿ ಮುಂಬಯಿಯ ಹೆಸರಾಂತ ಸಮಾಜ ಸೇವಾ ಸಂಸ್ಥೆ ಭವಾನಿ ಫೌಂಡೇಶನ್ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಭವಾನಿ ಫೌಂಡೇಶನ್ ಸಮಾಜ ಭವನ ಯೋಜನೆಯ ಕಾರ್ಯ ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ಫೆ.9ರಂದು ಬೆಳಗ್ಗೆ ಈ ಭವನವು ಆದಿವಾಸಿಗಳ ಸೌಕರ್ಯಕ್ಕಾಗಿ ಹಸ್ತಾಂತರಗೊಳ್ಳಲಿದೆ. ಭವನದ ಕಾರ್ಯಯೋಜನೆಯನ್ನು ಪರಿಶೀಲಿಸಲು ಫೆ. 3ರಂದು ಬೆಳಗ್ಗೆ ಭವಾನಿ ಫೌಂಡೇಶನ್ ಇದರ ಅಧ್ಯಕ್ಷ ಕುಸುಮೋಧರ ಡಿ. ಶೆಟ್ಟಿ ಚೆಲ್ಲಡ್ಕ, ವಿಶ್ವಸ್ತರಾದ ಧರ್ಮಪಾಲ ದೇವಾಡಿಗ, ಸಕಾಲ್ ಪತ್ರಿಕೆಯ ದಿನೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಚೆಲ್ಲಡ್ಕ, ಪ್ರೇಮನಾಥ ಶೆಟ್ಟಿ ಮುಂಡ್ಕೂರು ಭವನದ ಸ್ಥಳಕ್ಕೆ ಭೇಟಿ ನೀಡಿದರು.
ಸುಮಾರು ಒಂದು ಸಾವಿರ ಮಂದಿ ಸೇರಬಹುದಾದ ಈ ಭವನವು ಸುಂದರವಾದ ವೇದಿಕೆ, ಎರಡು ಕೊಠಡಿಗಳು ಹಾಗೂ ಶೌಚಾಲಯದ ಸೌಲಭ್ಯವನ್ನು ಹೊಂದಿದ್ದು,ಪಿರ್ಕಟ್ವಾಡಿಯಲ್ಲದೆ ಪರಿಸರದ ಅರ್ಕತ್ವಾಡಿ, ಉಂಬರ್ನವಾಡಿ ಗ್ರಾಮಗಳ ಆದಿವಾಸಿಗಳಿಗೂ ಇದರಿಂದ ಪ್ರಯೋಜನ ಸಿಗಲಿದೆ. ಪಿರ್ಕಟ್ವಾಡಿಯ ಮಂಗಲ್ ಸಕಾರಾಮ್ ಪೋಕ್ಲ, ಸಮಾಜ ಸೇವಕ ಮುರಳೀಧರ ಪಾಲ್ವೆ ಮೇಲ್ವಿಚಾರಣೆಯಲ್ಲಿ ಈ ಭವನ ನಿರ್ಮಾಣಗೊಂಡಿದ್ದು, ಸ್ಥಳೀಯ ಗ್ರಾಮಸ್ಥರು ಭವಾನಿ
ಫೌಂಡೇಶನ್ನ ಮಾನವೀಯ ಅನುಕಂಪದ ಸೇವೆಯನ್ನು ಹೊಗಳಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಚಿತ್ರ-ವರದಿ: ಪ್ರೇಮನಾಥ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್