ಭಾಯಂದರ್‌ ಶ್ರೀ ಹನುಮಾನ್‌ ಭಜನ ಮಂಡಳಿ:ರಕ್ತದಾನ ಶಿಬಿರ


Team Udayavani, Mar 12, 2018, 5:35 PM IST

1103mum06.jpg

ಮುಂಬಯಿ: ಜೀವನ ಶೈಲಿಯ ಅಹಾರ ಪದ್ಧತಿಯಿಂದ ಶರೀರವು ದುರ್ಬಲವಾಗುತ್ತದೆ. ಯಾವುದಕ್ಕೂ ಮಣಿಯದ ಕಾಯಿಲೆಗಳು ನಮ್ಮನ್ನು ಆವರಿಸುತ್ತಿದೆ. ಇದನ್ನು ನಿವಾರಿಸಲು ಆಯಾಯ ಋತುಮಾನದ ಹಣ್ಣು, ಹಂಪಲು, ಸೊಪ್ಪು ತರಕಾರಿ, ದವಸ ಧಾನ್ಯಗಳನ್ನು ಬೆಳೆಸಬೇಕು. ಪೂರ್ವಜರ ಔಷಧೀಯ ಗುಣಗಳುಳ್ಳ ವ್ಯವಸಾಯಕ್ಕೆ ಕೈಗೂಡಿಸಿ ಸ್ವಾಸ್ಥÂ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಮಾಜರತ್ನ ವಸಾಯಿ ಲಯನ್ಸ್‌ ಕ್ಲಬ್‌ನ ಸಂಚಾಲಕ ಲಯನ್‌ ಡಾ| ಶಂಕರ ಕೆ. ಟಿ. ಇವರು ನುಡಿದರು.

ಮಾ. 11ರಂದು ಭಾಯಂದರ್‌ ಪೂರ್ವದ ಹನುಮಾನ್‌ ಭಜನ ಮಂಡಳಿಯ ಆವರಣದಲ್ಲಿ ಇಂಟರ್‌ ನ್ಯಾಷನಲ್‌ ಅಸೋಸಿಯೇಶನ್‌ ಲಯನ್ಸ್‌ ಕ್ಲಬ್‌ ಇದರ ವಸಾಯಿ ಲಯನ್ಸ್‌ ಕ್ಲಬ್‌ ಮತ್ತು ಹನುಮಾನ್‌ ಭಜನ ಮಂಡಳಿ ಜಂಟಿಯಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಇವರು, ರಕ್ತ ಪರ್ಯಾಯ ಇಲ್ಲದ ವಸ್ತುವಾಗಿದೆ. ಇದನ್ನು ಯಾವುದೇ ಆಸ್ಪತ್ರೆ ಅಥವಾ ಕಂಪೆನಿಗಳಲ್ಲಿ ನಿರ್ಮಿಸಲು ಅಸಾಧ್ಯ. ನೀವು ಮಾಡುವ ರಕ್ತದಾನಕ್ಕೆ ಜೀವನ ದಾನದ ಶಕ್ತಿಯಿದೆ. ಇನ್ನೊಬ್ಬರ ಬದುಕಿನ ರಕ್ಷಣೆಯ ಉಡುಗೊರೆ ನಿಮ್ಮ ರಕ್ತದಾನದ ಉದ್ಧೇಶವಾಗಲಿ ಎಂದರು.

ಹನುಮಾನ್‌ ಭಜನ ಮಂಡಳಿಯ ಅಧ್ಯಕ್ಷ ಜಯರಾಮ ಶೆಟ್ಟಿ ಇವರು ಮಾತನಾಡಿ, ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪರಿಸರದ ಜನತೆಗೆ ಆರ್ಥಿಕ ನೆರವನ್ನು ಇಪ್ಪತ್ತೈದು ವರ್ಷಗಳಿಂದ ನೀಡುತ್ತಿದ್ದೇವೆ. ದುಬಾರಿ ವೆಚ್ಚಗಳ ಕಾಯಿಲೆಗಳ ಪ್ರಾರಂಭಿಕ ಹಂತದ ಪತ್ತೆಗಾಗಿ ಆರೋಗ್ಯ ತಪಾಸಣೆ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಿದ್ದೇವೆ. ನಿರೀಕ್ಷೆಗೂ ಮೀರಿ ಜನರು ಸಹಕರಿಸಿದ್ದಾರೆ ಎನ್ನಲು ಹೆಮ್ಮೆಯಾಗುತ್ತಿದೆ ಎಂದು ನುಡಿದರು.

ವಸಾಯಿ ಮೆಡಿಕಲ್‌ ಕ್ಯಾಂಪ್‌ನ ಕಾರ್ಯಾಧ್ಯಕ್ಷ ಲಯನ್‌ ಡಾ| ಅನಿರುಧ್‌ ಚವಾಣ್‌, ಆ್ಯಕ್ಷನ್‌ ಕ್ಲಬ್‌ನ ಲಯನ್‌ ರಾಜೇಶ್‌, ಲಯನ್‌ ಸಂಜಯ್‌,  ಸಮಾಜ ಸೇವಕ ಅರುಣೋದಯ ರೈ, ಹನುಮಾನ್‌ ಭಜನ ಸಮಿತಿಯ ಉಪಾಧ್ಯಕ್ಷ ಸುರೇಶ್‌ ಶೆಟ್ಟಿ, ಜತೆ ಕಾರ್ಯದರ್ಶಿ ಜಯ ಆರ್‌. ಪೂಜಾರಿ, ಕೋಶಾಧಿಕಾರಿ ಸುಕುಮಾರ್‌ ಶೆಟ್ಟಿ, ಜತೆ ಕೋಶಾಧಿಕಾರಿ ಅಶೋಕ್‌ ಆರ್‌. ಕೋಟ್ಯಾನ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನೀತಾ ಶೆಟ್ಟಿ, ಕಾರ್ಯದರ್ಶಿ ಲಕ್ಷಿ¾à ಸುವರ್ಣ, ಯುವ ವಿಭಾಗದವರು, ಮಹಿಳಾ ವಿಭಾಗದ ಸದಸ್ಯೆಯರು, ಅಯ್ಯಪ್ಪ ವೃಂದದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ಗೌರವ ಕಾರ್ಯದರ್ಶಿ ಅಶೋಕ್‌ ಕೆ. ಕೋಟ್ಯಾನ್‌ ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿ ವಂದಿಸಿದರು. ಸಾವಿರಾರು ಮಂದಿ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ಸುಮಾರು 75 ಕ್ಕೂ ಅಧಿಕ ಯುನಿಟ್‌ ರಕ್ತವನ್ನು ರಕ್ತದಾನ ಶಿಬಿರದಲ್ಲಿ ಸಂಗ್ರಹಿಸಲಾಯಿತು. ಸಂಸ್ಥೆಯ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು-ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

 ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.