ಬಿಲ್ಲವರ ಅಸೋಸಿಯೇಶನ್‌ ಭಿವಂಡಿ : ಶಾಲಾ ಪರಿಕರಗಳ ವಿತರಣೆ

ಋಣ ತೀರಿಸಲು ಮುಂದಾಗಿ: ದಯಾನಂದ ಪೂಜಾರಿ

Team Udayavani, Jun 14, 2019, 11:59 AM IST

1306MUM11

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಭಿವಂಡಿ ಸ್ಥಳೀಯ ಕಚೇರಿಯ ವತಿಯಿಂದ ಶೈಕ್ಷಣಿಕ ಸಾಲಿನ ವಾರ್ಷಿಕ ಶಾಲಾ ಪರಿಕರಗಳ ವಿತರಣೆ ಕಾರ್ಯಕ್ರಮವು ಜೂ. 9 ರಂದು ಬಿಲ್ಲರ ಅಸೋಸಿಯೇಶನ್‌ ಭಿವಂಡಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ರತ್ನಾಕರ ಜಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸಮಿತಿಯ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಉಪಾಧ್ಯಕ್ಷ ದಯಾನಂದ ಆರ್‌. ಪೂಜಾರಿ, ಅಶೋಕ್‌ ಕುಕ್ಯಾನ್‌ ಹಾಗೂ ಪೂಜಾರಿ ಟ್ರಾವೆಲ್ಸ್‌ನ ಮಾಲಕ ರಾಜೇಶ್‌ ಎಸ್‌. ಪೂಜಾರಿ, ಪಯನಿಯರ್‌ ಕ್ಲಾಸೆಸ್‌ನ ಮಾಲಕ ಅಜಯ್‌ ಬಿಲ್ಲವ, ಭಾರತ್‌ ಬ್ಯಾಂಕಿನ ನಿರ್ದೇಶಕ ಮೋಹನ್‌ದಾಸ್‌ ಪೂಜಾರಿ ಅವರು ಆಗಮಿಸಿ ಆರ್ಥಿಕವಾಗಿ ಸಹಕರಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಮಕ್ಕಳಿಗೆ ಶುಭಹಾರೈಸಿದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಉಪಾಧ್ಯಕ್ಷ ದಯಾನಂದ ಆರ್‌. ಪೂಜಾರಿ ಅವರು ಮಾತನಾಡಿ, ಬಿಲ್ಲವರ ಅಸೋಸಿಯೇಶನ್‌ ನಾರಾಯಣ ಗುರುಗಳ ತತ್ವ ಸಂದೇಶದಂತೆ ವಿದ್ಯಾರ್ಜನೆಗೆ ಮಹತ್ವವನ್ನು ನೀಡುತ್ತಿದ್ದು, ಸಮಾಜದ ಮಕ್ಕಳು ಇದರ ಪ್ರಯೋಜನವನ್ನು ಪಡೆದು ಉನ್ನತ ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಋಣವನ್ನು ತೀರಿಸಬೇಕು. ಭಿವಂಡಿ ಸ್ಥಳೀಯ ಸಮಿತಿಯು ಈ ನಿಟ್ಟಿನಲ್ಲಿ ಉತ್ತಮವಾದ ಕೆಲಸಗಳನ್ನು ಮಾಡುತ್ತಿದ್ದು, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ನೀಡುತ್ತಾ ಗುರುದೇವರ ಆಶಯದಂತೆ ಕಾರ್ಯ ನಿರ್ವಹಿಸುತ್ತಿದೆ. ಸುಮಾರು 70 ಮಕ್ಕಳಿಗೆ ಪಠ್ಯ ಪುಸ್ತಕ, ನೋಟ್‌ಬುಕ್‌, ಪೆನ್‌ ಇನ್ನಿತರ ಶಾಲಾ ಪರಿಕರಗಳನ್ನು ನೀಡಿ ಸಹಕರಿಸುತ್ತಿರುವುದು ಅಭಿನಂದನೀಯವಾಗಿದೆ. ಸಮಿತಿಯು ಸಮಾಜಪರ ಕಾರ್ಯಕ್ರಮಗಳಿಂದ ಸಮಾಜ ಬಾಂಧವರ ಮನೆ-ಮನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಲಿ ಎಂದರು.

ಕೊಡುಗೆಯನ್ನು ನೀಡಬೇಕು
ಬಿಲ್ಲವರ ಅಸೋಸಿಯೇಶನ್‌ ಭಿವಂಡಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ರತ್ನಾಕರ ಪೂಜಾರಿ ಇವರು ಮಾತನಾಡಿ, ಇಂದು ಸಮಾಜದಿಂದ ಪ್ರಯೋಜನವನ್ನು ಪಡೆದ ಮಕ್ಕಳು ಮುಂದೆ ಉನ್ನತ ಸ್ಥಾನವನ್ನು ಪಡೆದು ಸಮಾಜಕ್ಕೆ ತಮ್ಮಿಂದಾದ ಕೊಡುಗೆಯನ್ನು ನೀಡಬೇಕು. ಕಳೆದ ಹಲವಾರು ವರ್ಷಗಳಿಂದ ಸಮಿತಿಯ ಎಲ್ಲಾ ರೀತಿಯ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರು, ದಾನಿಗಳು ಸ್ಪಂದಿಸುತ್ತಿದ್ದಾರೆ. ಅವರೆಲ್ಲೂರಿಗೂ ಅಭಾರಿಯಾಗಿದ್ದೇವೆ. ಭವಿಷ್ಯದಲ್ಲೂ ಸಮಿತಿಯ ಎಲ್ಲಾ ಸಮಾಜಪರ ಕಾರ್ಯಕ್ರಮಗಳಿಗೆ ದಾನಿಗಳ ಪ್ರೋತ್ಸಾಹ, ಸಹಕಾರ ಸದಾಯಿರಲಿ ಎಂದು ನುಡಿದರು.

ಸಮಿತಿಯ ಗೌರವ ಕಾರ್ಯದರ್ಶಿ ಉಮೇಶ್‌ ಆರ್‌. ಸುವರ್ಣ ವಂದಿಸಿದರು. ಸಚಿನ್‌ ಎಸ್‌. ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ನೂರಾರು ಮಕ್ಕಳಿಗೆ ಗಣ್ಯರು ಶಾಲಾ ಪರಿಕರಗಳನ್ನು ವಿತರಿಸಿ ಶುಭಹಾರೈಸಿದರು. ಭಿವಂಡಿ ಸ್ಥಳೀಯ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ಸದಸ್ಯೆಯರು, ಯುವ ವಿಭಾಗದ ಸದಸ್ಯರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.