ಬಿಲ್ಲವ ಸಂಘ ಪಿಂಪ್ರಿ : ವಾರ್ಷಿಕ  ಕ್ರೀಡೋತ್ಸವ


Team Udayavani, Feb 8, 2018, 11:49 AM IST

0602mum04a.jpg

ಪುಣೆ: ನಮ್ಮ ದೈನಂದಿನ  ಜೀವನದಲ್ಲಿ  ಅರೋಗ್ಯವಂತರಾಗಿರಲು ವ್ಯಾಯಾಮ ಕೂಡಾ ಒಂದು ಪ್ರಮುಖ ಅಂಶ. ದಿನದ ಕೆಲವು ಸಮಯವನ್ನು ಇದಕ್ಕಾಗಿ ಮಿಸಲಿಟ್ಟರೆ ಒಳ್ಳೆಯದು. ಯಾವುದೇ ಒಂದು ಅಥವಾ ಹೆಚ್ಚು  ಕ್ರೀಡೆಯನ್ನು ಪ್ರತಿನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ನಮಗೆ ದೇಹಕ್ಕೆ ಬೇಕಾದ ಅರೋಗ್ಯ ಸಿಗಲು ಸಾಧ್ಯ. ಇಂದಿನ ದಿನಗಳ ಆಹಾರ ಪದ್ಧತಿ, ಕಲ್ಮಷಯುಕ್ತ  ಗಾಳಿ, ನೀರು ನಮ್ಮ ದೇಹವನ್ನು ಸೇರಿದಾಗ ಆರೋಗ್ಯದಲ್ಲಿ ಏರುಪೇರು ಆಗುವಂತಹ ಸಂಭವ ಇರುತ್ತದೆ. ಇಂತಹ ಸಂದರ್ಭದಲ್ಲಿ ನಿಯಮಿತವಾಗಿ ವ್ಯಾಯಾಮ ಮತ್ತು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಅಟೋಟ ಸ್ಪರ್ದೆಗಳನ್ನೂ ಅಯೋಜಿಸುವುದರಿಂದ ಜನರಿಗೆ ಇದರ ಮಹತ್ವ ತಿಳಿಯುತ್ತದೆ. ಮಕ್ಕಳಲ್ಲಿ ಮಹಿಳೆಯರಲ್ಲಿ ಅರೋಗ್ಯ ರಕ್ಷಣೆಯ ಬಗ್ಗೆ ಕಾಳಜಿ ಮೂಡಿಸುವ ಕಾರ್ಯಗಳು ಆಗಬೇಕು. ದೇಹದ ಸಮತೋಲನವನ್ನು ಕಾಪಾಡಿಕೊಳ್ಳಲು ಇಂಥಹ ಕ್ರೀಡೆಗಳು ಸಹಕಾರಿಯಗಬಹುದು  ಎಂದು ಪಿಂಪ್ರಿ ಬಿಲ್ಲವ ಸಂಘದ ಅಧ್ಯಕ್ಷರಾದ  ಸೋಮಪ್ಪ  ಸಾಲ್ಯಾನ್‌ ಅವರು ಅಭಿಪ್ರಾಯಿಸಿದರು.

ಪಿಂಪ್ರಿ ಬಿಲ್ಲವ ಸಂಘದ ವತಿಯಿಂದ ವಲ್ಲಭ ನಗರದ ಅಂಬೇಡ್ಕರ್‌  ಮೈದಾನದಲ್ಲಿ   ದ್ವೆ„ವಾರ್ಷಿಕವಾಗಿ  ಜರಗಿದ ಸಮಾಜ ಭಾಂದವರ ಕ್ರೀಡಾಕೂಟವನ್ನು ಉದ್ಘಾಟಿಸಿದ  ಅವರು ಸಮಾಜ ಬಾಂಧವರ ಇದೆ ರೀತಿಯ ಸಹಕಾರ ದೊರೆತರೆ   ಪ್ರತಿ ವರ್ಷವೂ ಅದ್ದೂರಿಯಾಗಿ ಕ್ರೀಡೋತ್ಸವವನ್ನು ನಡೆಸಬಹುದು.  ಸಂಘದ ಸಮಾಜ ಸೇವಾ ಕಾರ್ಯಗಳಿಗೆ ಎಲ್ಲರ ಸಹಕಾರ ಮುಖ್ಯ. ಅದರಲ್ಲೂ ಯುವಕರು ಇಂತಹ ಕಾರ್ಯಗಳಿಗೆ ಮುಂದೆ ಬಂದು ಸಹಕರಿಸಬೇಕು ಎಂದರು.

ಕ್ರೀಡಾಕೂಟವು ಬೆಳಗ್ಗೆ   ಕ್ರಿಕೆಟ್‌ ಪಂದ್ಯಾಟದ ಮೂಲಕ ಪ್ರಾರಂಭಗೊಂಡಿತು. ಸಮಾಜ ಬಾಂಧವರ ವಯೋಮಿತಿಗೆ ಅನುಗುಣವಾಗಿ ಮಕ್ಕಳಿಂದ ಹಿಡಿದು ಮಹಿಳೆಯರು, ಪುರುಷರು,  ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ತ್ರೋಬಾಲ್‌, ಬ್ಯಾಟ್‌ ಮಿಂಟನ್‌, ಕ್ಯಾರಂ, ಚೆಸ್‌, ಹಗ್ಗ ಜಗ್ಗಾಟ, ಸಂಗೀತ ಕುರ್ಚಿ ಮೊದಲಾದ ಸ್ಪರ್ಧೆಗಳು ಜರಗಿತು.

ಕ್ರಿಕೆಟ್‌ ಪಂದ್ಯಾಟದಲ್ಲಿ ಸಪ್ತಗಿರಿ ತಂಡವು ಪ್ರಥಮ ಟ್ರೋಪಿ ಪಡೆದರೆ, ಎಸ್‌. ಕೆ. ಗೆಳೆಯರು ದ್ವಿತೀಯ ಸ್ಥಾನಿಯಾದರು. ಥ್ರೋಬಾಲ್‌ನಲ್ಲಿ ಶ್ರೀ ದುರ್ಗಾ ಪ್ರಥಮ, ಅಯ್ಯಪ್ಪ ಬಳಗ ದ್ವಿತಿಯ ಸ್ಥಾನಿಯಾಯಿತು. ವಿಜೇತ ತಂಡಗಳಿಗೆ ಸಂಘದ ಉಪಾಧ್ಯಕ್ಷ ಉದ್ಯಮಿ ಸತೀಶ್‌ ಸಾಲ್ಯಾನ್‌ ಅವರು ಬಹುಮಾನಗಳನ್ನು ಪ್ರಾಯೋಜಿಸಿದ್ದರು. ವಿಜೇತರಿಗೆ   ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಪ್ರಶಸ್ತಿ ಪ್ರದಾನಿಸಿ ಅಭಿನಂದಿಸಿದರು.  ಉದ್ಯಮಿ ನವೀನ್‌ ಕೋಟ್ಯಾನ್‌ ಅವರ ಪ್ರಾಯೋಜಕತ್ವದಲ್ಲಿ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಕ್ರೀಡಾಕೂಟದ ಯಶಸ್ವಿಗೆ ಸಂಘದ ಕ್ರೀಡಾ ಕಾರ್ಯದರ್ಶಿ ಉಮೇಶ್‌ ಪೂಜಾರಿ, ಸಂಯೋಜಕರಾದ ಕಿರಣ್‌ ಸುವರ್ಣ,  ಗಣೇಶ್‌ ಅಂಚನ್‌, ಸಂತೋಷ್‌ ಪೂಜಾರಿ, ಶೇಖರ್‌ ಚಿತ್ರಾಪು, ಶೇಖರ್‌  ಜತ್ತನ್‌, ಶರತ್‌ ಕೋಟ್ಯಾನ್‌, ಸುಂದರ್‌  ಪೂಜಾರಿ, ಗಣೇಶ್‌ ಕೋಟ್ಯಾನ್‌, ಸುರೇಶ್‌ ಪೂಜಾರಿ, ವಿಜಯ ಪೂಜಾರಿ, ಸುರೇಶ ಪೂಜಾರಿ, ಶ್ರೀದರ್‌ ಪೂಜಾರಿ, ರವಿ ಜತ್ತನ್‌, ಪ್ರವೀಣ್‌ ಸಾಲ್ಯಾನ್‌ ಹಾಗು ಮಹಿಳಾ ವಿಭಾಗದ ಅಧ್ಯಕ್ಷೆ ಸಂಗೀತಾ ಸುವರ್ಣ ಮತ್ತು ಪ್ರಮುಖರಾದ ಭಾಗ್ಯ ಪೂಜಾರಿ, ತೇಜಸ್ವಿನಿ, ಪೂಜಾರಿ, ಗುಣ ಪೂಜಾರಿ, ಗೌರಿ ಸಾಲ್ಯಾನ್‌, ಕುಸುಮಾ ಸಾಲ್ಯಾನ್‌, ರಂಜಿತಾ  ಪೂಜಾರಿ, ವಿನೋದಾ ಪೂಜಾರಿ, ಶಕುಂತಲಾ ಅಂಚನ್‌, ಪ್ರೇಮಾ ಪೂಜಾರಿ, ಮಮತಾ ಅಂಚನ್‌, ಮೀನಾಕ್ಷಿ ಪೂಜಾರಿ ಅವರು ಸಹಕರಿಸಿದರು. ಸಂಘದ ಕಾರ್ಯದರ್ಶಿ ಶ್ಯಾಮ್‌ ಸುವರ್ಣ ಅವರು ಕಾರ್ಯಕ್ರಮ ನಿರೂಪಿಸಿದರು. 

ನೂತನ್‌ ಸುವರ್ಣ ವಂದಿಸಿದರು. ರಾತ್ರಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸದಸ್ಯರು, ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ  ಪಾಲ್ಗೊಂಡಿದ್ದರು. 

ಚಿತ್ರ-ವರದಿ: ಹರೀಶ್‌ ಮೂಡಬಿದ್ರೆ ಪುಣೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.