ಬಿಲ್ಲವರ ಅಸೋಸಿಯೇಶನ್‌ ಡೊಂಬಿವಲಿ : ಗುರು ಜಯಂತಿ ಆಚರಣೆ


Team Udayavani, Sep 18, 2018, 12:58 PM IST

1609mum01.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 164ನೇ ಜಯಂತಿ ಆಚರಣೆಯು ಸೆ. 2 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸ್ಥಳೀಯ ಸಮಿತಿಯ ಕಚೇರಿಯಲ್ಲಿ ಅದ್ದೂರಿ ಯಾಗಿ ನಡೆಯಿತು.

ಪುರೋಹಿತ ಐತಪ್ಪ ಸುವರ್ಣ, ವಿ. ಎನ್‌. ಅಮೀನ್‌, ಸಿ. ಕೆ. ಪೂಜಾರಿ ಮತ್ತು ಧರ್ಮರಾಜ್‌ ಪೂಜಾರಿಯವರು ಗುರು ಮಂಟಪದ ಅಲಂಕಾರಗೈದು ಪೂಜಾ ವಿಧಾನ ಗಳನ್ನು ನೆರವೇರಿಸಿದರು. ಗುರು ಭಕ್ತರು ಬೆಳಗ್ಗೆ 10 ರಿಂದ ಮಧ್ಯಾಹ್ನ 12.30 ರ ತನಕ ಭಜನೆ, ಭಕ್ತಿಗೀತೆಗಳನ್ನು ಹಾಡಿ ನಂತರ ಕುಣಿತದೊಂದಿಗೆ ಭಜನಾ ಕಾರ್ಯಕ್ರಮವನ್ನು ನೆರವೀರಿಸಿದರು.

ತದನಂತರ ಕರ್ಪೂರದಾರತಿ, ವಿಶೇಷ ಗುರೂಪೂಜೆ,ಮಹಾ ಮಂಗಳಾರತಿ ಹಾಗೂ  ಉದ್ಯಮಿಗಳಾದ  ರವಿ ಎಸ್‌.  ಪೂಜಾರಿ, ಗಿರಿಜಾ ಸಂಜೀವ ಪಾಲನ್‌, ಕುಶ ರವಿ ಸನಿಲ್‌, ಟಿ. ಕೆ. ಕೋಟ್ಯಾನ್‌ ಹಾಗೂ  ಹೇಮಾ ದೇವರಾಜ್‌ ಪೂಜಾರಿ ದಂಪತಿಗಳ  ವತಿಯಿಂದ ಅನ್ನದಾನ ಸೇವೆ ಜರಗಿತು. ಹಿರಿಯರಾದ ಬಿ. ವೈ. ಸುವರ್ಣರವರು ಬ್ರಹ್ಮಶ್ರೀ  ನಾರಾಯಣ ಗುರುವರ್ಯರ ಚರಿತ್ರೆಯನ್ನು ವಿವರಿಸಿ, ಎÇÉಾ ಗುರುಭಕ್ತರ ಪರವಾಗಿ ಗುರುವಂದನೆ ಸಲ್ಲಿಸಿ ಪ್ರಾರ್ಥನೆಗೈದರು.

ಈ ಸಂದರ್ಭದಲ್ಲಿ ಕೇಂದ್ರ ಕಾರ್ಯಾಲಯದಿಂದ ಉಪ ಕಾರ್ಯಾಧ್ಯಕ್ಷ ದಯಾನಂದ ಆರ್‌. ಪೂಜಾರಿ, ಅಶೋಕ್‌ ಕೆ. ಕುಕ್ಯಾನ್‌, ಮಹಿಳಾ ವಿಭಾಗ ಉಪಕಾರ್ಯಾದ್ಯಕ್ಷೆ ಪ್ರಭಾ ಕೆ. ಬಂಗೇರ, ಕಲ್ವಾ ಸ್ಥಳೀಯ ಸಮಿತಿಯ  ನಾರಾಯಣ ಸುವರ್ಣ,  ಹರೀಶ್‌ ಸಾಲ್ಯಾನ್‌ ಹಾಗೂ ಇತರ ಪದಾದಿಕಾರಿಗಳು, ಕಲ್ಯಾಣ ಸ್ಥಳೀಯ ಸಮಿತಿಯ ಗೌರವ ಕಾರ್ಯಾಧ್ಯಕ್ಷ,  ಉಪ ಕಾರ್ಯದಕ್ಷ, ಗೌರವ ಕಾರ್ಯದರ್ಶಿ ಹಾಗೂ ಇತರ ಪದಾಧಿಕಾರಿಗಳು  ಹಾಗೂ ವಿವಿಧ ಸ್ಥಳೀಯ ಕಚೇರಿಯ ಪದಾಧಿಕಾರಿಗಳು, ಭಾರತ್‌ ಬ್ಯಾಂಕಿನ  ಅಧಿಕಾರಿಗಳು, ಡೊಂಬಿವಲಿ ಪರಿಸರದ ತುಳು ಕನ್ನಡ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮಾಜ ಭಾಂಧವರು, ಹಿತೈಷಿಗಳು ಹಾಗೂ ಗುರುಭಕ್ತರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.

ಭಾರತ್‌ ಬ್ಯಾಂಕಿನ ಮ್ಯಾನೇಜರ್‌ ದಿನೇಶ್‌ ಕರ್ಕೇರ,  ರಾಮಚಂದ್ರ ಬಂಗೇರ ಮತ್ತು ಪರಿವಾರ, ಉದ್ಯಮಿ ರಾಜೇಶ್‌ ಕೋಟ್ಯಾನ್‌, ಭವಾನಿ ಕುಕ್ಯಾನ್‌, ಗುಲಾಬಿ ಬಾಬು ಪೂಜಾರಿ ಮತ್ತು ಪರಿವಾರ,  ವಸಂತ್‌ ಕುಮಾರ್‌, ಎಮ…. ಎನ್‌.  ಕೋಟ್ಯಾನ್‌ ಮತ್ತು ಪರಿವಾರ, ಸಚಿನ್‌ ಧರ್ಮರಾಜ್‌ ಪೂಜಾರಿ,  ಹರೀಶ್‌ ಶೆಟ್ಟಿ, ವಿಮಲಾ ಕೆ. ಅಂಚನ್‌,  ಚಂದ್ರಶೇಖರ್‌ ಸಾಲ್ಯಾನ್‌, ಭೋಜರಾಜ್‌ ಪೂಜಾರಿ, ರಾಜು ಜಿ. ಪೂಜಾರಿ ಅವರ ಸೇವಾರ್ಥಕವಾಗಿ ವಿವಿಧ ಸೇವೆಗಳು ನಡೆಯಿತು. ಕಾಯಕರ್ತರಿಗೆ ಬೆಳಿಗ್ಗೆಯ ಉಪಹಾರ ಹಾಗೂ ಚಹಾವನ್ನು ಉದ್ಯಮಿ ನಿತ್ಯಾನಂದ ಜತ್ತನ್‌  ಅವರು ನೀಡಿ ಸಹಕರಿಸಿದರು. 

ಅಪಾರ ಸಂಖ್ಯೆಯಲ್ಲಿ ಭಕ್ತರು ದೇಣಿಗೆ, ವಿಶೇಷ ಗುರು ಪೂಜೆ, ಕರ್ಪೂರದಾರತಿ, ಹೂ, ಹಣ್ಣು, ದೀಪದ ಎಣ್ಣೆ ಇತ್ಯಾದಿ ನೀಡಿ ಸಹಕರಿಸಿದರು. ಗೌರವ ಕಾರ್ಯಾಧ್ಯಕ್ಷ ಸಿ. ಎನ್‌. ಕರ್ಕೇರ, ಕಾರ್ಯಾಧ್ಯಕ್ಷ ದೇವರಾಜ್‌ ಪೂಜಾರಿ, ಮಾಜಿ ಕಾರ್ಯಾಧ್ಯಕ್ಷ ರವಿ ಎಸ್‌. ಸನಿಲ…, ಉಪ ಕಾರ್ಯಾಧ್ಯಕ್ಷರುಗಳಾದ ಚಂದ್ರಹಾಸ್‌ ಎಸ್‌. ಪಾಲನ್‌ ಹಾಗೂ ಶ್ರೀಧರ ಬಿ. ಆಮೀನ್‌ , ಗೌರವ  ಕಾರ್ಯದರ್ಶಿ ಪುರಂದರ ಪೂಜಾರಿ, ಗೌರವ  ಕೋಶಾಧಿಕಾರಿ ಸುನಿಲ್‌ ಸಿ. ಸಾಲ್ಯಾನ್‌, ಮಂಜಪ್ಪ ಪೂಜಾರಿ, ಜಗನ್ನಾಥ್‌ ಸನಿಲ…, ಮತ್ತು ಸಮಿತಿ ಸದಸ್ಯರು, ಸದಸ್ಯರು, ಮಹಿಳಾ ವಿಭಾಗ ಮತ್ತು ಯುವ ಶಕ್ತಿ ಸದಸ್ಯರು ಕಾರ್ಯಕ್ರಮದ ಯಶಸ್ವಿಗಾಗಿ ಶ್ರಮಿಸಿದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.