ಬಿಲ್ಲವರ ಅಸೋಸಿಯೇಶನ್ ಡೊಂಬಿವಲಿ: ನಾರಾಯಣ ಗುರು ಜಯಂತಿ
ಸಂಘದ ಅರ್ಚಕ ಐತಪ್ಪ ಪೂಜಾರಿ ಮತ್ತು ವಿಶ್ವನಾಥ್ ಅಮೀನ್ ಅವರು ಪೂಜಾ ಕಾರ್ಯ ನೆರವೇರಿಸಿದರು.
Team Udayavani, Sep 10, 2020, 10:36 AM IST
ಮುಂಬಯಿ, ಸೆ. 9: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಕಚೇರಿಯ ಆಶ್ರಯದಲ್ಲಿ ಸೆ. 2 ರಂದು ಶ್ರೀ ನಾರಾಯಣ ಗುರುಗಳ 166 ನೇ ಜಯಂತೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಮೊದಲಿಗೆ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಘದ ಅರ್ಚಕ ಐತಪ್ಪ ಪೂಜಾರಿ ಮತ್ತು ವಿಶ್ವನಾಥ್ ಅಮೀನ್ ಅವರು ಪೂಜಾ ಕಾರ್ಯ ನೆರವೇರಿಸಿದರು.
ಸಂಘದ ಕಾರ್ಯಾಧ್ಯಕ್ಷ ದೇವರಾಜ ಪೂಜಾರಿ ಅವರು, ಮನುಕುಲಕ್ಕೆ ಬಂದ ಕೊರೊನಾದ ಸಂಕಟ ಬೇಗನೆ ದೂರವಾಗಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಸಿ. ಎನ್. ಕರ್ಕೇರ, ಮಾಜಿ ಕಾರ್ಯಾಧ್ಯಕ್ಷ ರವಿ ಸನಿಲ್, ಉಪಾಧ್ಯಕ್ಷರುಗಳಾದ ಚಂದ್ರಹಾಸ್ ಎಸ್. ಪಾಲನ್, ಶ್ರೀಧರ್ ಅಮೀನ್, ಕಾರ್ಯದರ್ಶಿ ಪುರಂದರ ಪೂಜಾರಿ, ಕೋಶಾ ಕಾರಿ ಸುನಿಲ್ ಸಾಲ್ಯಾನ್ ಮತ್ತು ಸಂಘದ ಪದಾಕಾರಿಗಳು ಮಹಿಳಾ ವಿಭಾಗದ ಪದಾಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಅನ್ನದಾನ ನೀಡಿದ ಮಂಜುನಾಥ್ ಕ್ಯಾಟರರ್ಸ್ನ ಟಿ. ಕೆ. ಕೋಟ್ಯಾನ್ ದಂಪತಿ, ದಾನಿಗಳದ ಗಿರಿಜಾ ಎಸ್. ಪಾಲನ್, ರಾಜು ಜಿ. ಪೂಜಾರಿ, ವಿಮಲಾ ಕೆ. ಅಂಚನ್, ಸತೀಶ್ ಕೋಟ್ಯಾನ್, ಹೇಮಾ ದೇವರಾಜ, ಕುಶ ರವಿ ಸನಿಲ್, ಶ್ರೀಧರ್ ಅಮೀನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದು ಗುರುಜಯಂತಿ ಯಶಸ್ವಿಯಾಗಿ ಆಚರಿಸುವಲ್ಲಿ ಸಹಕರಿಸಿದರು. ಸರಕಾರದ ನಿರ್ದೇಶನದ ಅನುಸಾರ ಸಾಮಾಜಿಕ ಅಂತರವನ್ನು ಪಾಲಿಸಿ 166 ನೇ ಗುರುಜಯಂತಿಯನ್ನು ಅರ್ಥಪೂರ್ಣವಾಗಿ ಭಕ್ತಿ ಶ್ರದ್ಧೆಯಿಂದ ಸರಳವಾಗಿ ಆಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್