ಬಿಲ್ಲವರ ಅಸೋಸಿಯೇಶನ್‌: ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಭೆ


Team Udayavani, Feb 27, 2019, 3:32 PM IST

2602mum03.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಕೇಂದ್ರ ಕಚೇರಿಯ ಮಹಿಳಾ ವಿಭಾಗ ಹಾಗೂ ಎಲ್ಲ ಸ್ಥಳೀಯ ಕಚೇರಿಯ ಮಹಿಳಾ  ಸಮಿತಿಯ ಜಂಟಿ ಸಭೆ ಫೆ.  19ರಂದು ಅಪರಾಹ್ನ 3ರಿಂದ ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ಜರಗಿತು.

ಈ ಸಂದರ್ಭ ಕೇಂದ್ರ ಕಚೇರಿಯ ಕಾರ್ಯಕಾರಿ ಸಮಿತಿಯ ಸದಸ್ಯೆ ಯರೊಂದಿಗೆ ಎಲ್ಲ ಸ್ಥಳೀಯ ಕಚೇರಿಯ ಉಪಸ್ಥಿತ ಮಹಿಳೆ ಯರು ಪುಲ್ವಾಮದಲ್ಲಿ ಇತ್ತೀಚೆಗೆ ಆತಂಕವಾದಿಗಳ ದಾಳಿಗೆ ಹುತಾತ್ಮ ರಾದ ಸಿಆರ್‌ಪಿಎಫ್‌ನ  ಯೋಧ
ರಿಗೆ ಕ್ಯಾಂಡಲ್‌ ಹೊತ್ತಿಸಿ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಯನ್ನು ಅರ್ಪಿಸಿದರು.

ಅಸೋಸಿಯೇಶನ್‌ನ ಮಹಿಳಾ ವಿಭಾಗದಕಾರ್ಯಾಧ್ಯಕ್ಷೆ  ಜಯಂತಿ  ವಿ. ಉಳ್ಳಾಲ್‌ ಸಭೆಯಲ್ಲಿ ಮಾತನಾಡಿ, ಗಡಿ ಕಾಯುವ ಯೋಧರು ನಿಜವಾಗಿಯೂ  ನಮ್ಮ ದೇಶದ ಹೆಮ್ಮೆಯ ಸುಪುತ್ರರು. ಅವರನ್ನು ನಾವು ಎಂದೂ ಮರೆಯಬಾರದು. ಮಹಿಳೆ ಯರು ಮನಸ್ಸು ಮಾಡಿದರೆ ಏನನ್ನೂ ಸಾಧಿಸಬಹುದು. ನಮ್ಮ ಎಲ್ಲ ಸ್ಥಳೀಯ ಕಚೇರಿಯ ಮಹಿಳೆಯರು ಹುಮ್ಮಸ್ಸಿನಿಂದ ತಮ್ಮ ತಮ್ಮ ಸ್ಥಳೀಯ ಕಚೇರಿಗಳಲ್ಲಿ ಒಳ್ಳೆಯ ಕೆಲಸವನ್ನು ಮಾಡಿ ಸಂಸ್ಥೆಯ ಬೆಳವಣಿಗೆಯಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಎಂದು ನುಡಿದು ಸಂತೋಷವನ್ನು ವ್ಯಕ್ತ
ಪಡಿಸಿದರು. ಎಲ್ಲರೂ ತಮ್ಮ ಸಂಸ್ಥೆಯ ಉನ್ನತಿಯನ್ನು ಬಯಸಬೇಕು. ವಯಸ್ಕ ಬಡ ಮಹಿಳೆಯರಿಗೆ ಸಹಾಯ ಮಾಡುವಲ್ಲಿ ತಮ್ಮಿಂದಾದಷ್ಟು ನೆರವಾಗುವಂತೆ ಮನವಿ ಮಾಡಿದರು.

ಅಸೋಸಿಯೇಶನ್‌ನ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ್‌ ಎಸ್‌. ಕೋಟ್ಯಾನ್‌ ಇವರ ಮಾತನ್ನು ಸಮರ್ಥಿಸುತ್ತಾ ಮಹಿಳೆಯರು ತಮ್ಮ
ಸಂಸ್ಥೆಯ ವಿವಿಧ ಕಾರ್ಯಕಲಾಪಗಳಲ್ಲಿ ಭಾಗಿಗಳಾಗಿ ತಮ್ಮ ಪ್ರತಿಭೆ
ಯನ್ನು ಮೆರೆಯಬೇಕು. ತಮಗೆ ಯಾವುದೇ ಸಲಹೆ ಸೂಚನೆಗಳ ಅಗತ್ಯವಿದ್ದಲ್ಲಿ  ಕೇಂದ್ರ ಕಚೇರಿಯ ಸದಸ್ಯರು ಯಾವಾಗಲೂ ಸಹಾಯ ಮಾಡುತ್ತಾರೆ ಎಂದು ಭರವಸೆಯನ್ನು ನೀಡಿ ವಿಧವಾ ವೇತನ ಮಾಸಾಶನ ಫಂಡ್‌ಗೆ ತಮ್ಮ ಧರ್ಮಪತ್ನಿಯ ಹೆಸರಲ್ಲಿ ಒಂದು ವರ್ಷದ ಒಬ್ಬರ ದೇಣಿಗೆಯನ್ನು ಘೋಷಿಸಿದರು. ಅವರೊಂದಿಗೆ ಉಪಸ್ಥಿತರಿದ್ದ ಹೆಚ್ಚಿನ ಮಂದಿ ತಾವು ಕೂಡ ಇದಕ್ಕೆ ನೆರವಾಗುವುದಾಗಿ  ತಿಳಿಸಿದರು.

ಈ ಸಭೆಯಲ್ಲಿ ಎಲ್ಲ ಸ್ಥಳೀಯ ಕಚೇರಿಯ ಸದಸ್ಯೆಯರು ತಮ್ಮ ವಾರ್ಷಿಕ ಚಟುವಟಿಕೆಗಳನ್ನು ವಿವರಿಸಿದರು.  ಸ್ಥಳೀಯ ಕಚೇರಿಗಳ ಹೆಚ್ಚಿನ ಸದಸ್ಯೆಯರು ಉಪಸ್ಥಿತರಿದ್ದರು. ಉಪ ಕಾರ್ಯಾಧ್ಯಕ್ಷೆ ಪ್ರಭಾ ಬಂಗೇರ ಹಾಗೂ ಗಿರಿಜಾ ಚಂದ್ರಶೇಖರ್‌, ಗೌರವ  ಕಾರ್ಯದರ್ಶಿ ಸುಮಿತ್ರಾ ಎಸ್‌. ಬಂಗೇರ  ಹಾಗೂ ಮಹಿಳಾ ವಿಭಾಗದ ಇತರ ಸದಸ್ಯೆಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗೌರವ ಪ್ರಧಾನ  ಕಾರ್ಯದರ್ಶಿ ಸುಮಿತ್ರಾ  ಎಸ್‌. ಬಂಗೇರ ನಿರೂಪಿಸಿದರು. ಜತೆ ಕಾರ್ಯದರ್ಶಿ ಕುಸುಮಾ ಸಿ. ಅಮೀನ್‌ ವಂದಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.