ಬಂಟರ ಭವನದಲ್ಲಿ ಬಿಲ್ಲವ ಶಿರೋಮಣಿ ಸೂರು ಸಿ. ಕರ್ಕೇರರಿಗೆ ಶ್ರದ್ಧಾಂಜಲಿ


Team Udayavani, Nov 15, 2018, 5:07 PM IST

1311mum13.jpg

ಮುಂಬಯಿ: ಬಿಲ್ಲವ ಸಮುದಾಯ ಹಿರಿಯ ಧುರೀಣ, ಮುಂಬಯಿ ಮಹಾನಗರದ ಹಿರಿಯ ಹೊಟೇಲ್‌ ಉದ್ಯಮಿಯಾಗಿ ಭಾರತ್‌ ಬ್ಯಾಂಕ್‌ನ ಮಾಜಿ ಕಾರ್ಯಾಧ್ಯಕ್ಷರಾಗಿ ಬಹು ಎತ್ತರದ ವ್ಯಕ್ತಿತ್ವ ಹೊಂದಿ,  ಬಿಲ್ಲವ ಕುಲರತ್ನ ಹಾಗೂ ತುಳುನಾಡ ಮಾಣಿಕ್ಯ ಬಿರುದಾಂಕಿತರಾಗಿ ಜೇಷ್ಠ ಸಮಾಜ ಸೇವೆಗೈದು ಇತ್ತೀಚೆಗೆ ಸ್ವರ್ಗಸ್ಥರಾದ ಬಿಲ್ಲವ ಶಿರೋಮಣಿ ಸೂರು ಸಿ. ಕರ್ಕೇರ ಅವರಿಗೆ ನ. 13 ರಂದು  ಶ್ರದ್ಧಾಂಜಲಿ ಸಭೆಯನ್ನು  ಆಯೋಜಿಸಲಾಗಿತ್ತು.

ಕುರ್ಲಾ ಪೂರ್ವದ ಭಂಡಾರಿ ಎಸ್ಟೇಟ್‌ನ ಬಂಟರ ಭವನದ ಶ್ರೀಮತಿ ರಾಧಾಭಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನೆರೆದಿದ್ದ ಮಹಾನಗರದ ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು, ಸ್ವರ್ಗಸ್ಥರ ಬಂಧು-ಮಿತ್ರರು, ಹಿತೈಷಿಗಳು, ಸೂರು ಕರ್ಕೇರ ಅವರ‌ ಭಾವಚಿತ್ರಕ್ಕೆ ಪುಷ್ಪಗವೃಷ್ಠಿಗೈದು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.

ಸೂರು ಸಿ. ಕರ್ಕೇರ ಅವರು ಆಪ್ತರು, ಕರ್ನಾಟಕ ರಾಜ್ಯದ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಅವರು ನುಡಿನಮನ ಸಲ್ಲಿಸಿ ಮಾತನಾಡಿ, ಸೂರು ಸಿ. ಕರ್ಕೇರರು ಸ್ನೇಹಜೀವಿ ಯಾಗಿದ್ದರು ಎಂದು ನುಡಿದು,  ತಮ್ಮಿಬ್ಬರ ನಿಕಟ ಸಂಬಂಧವನ್ನು ಮೆಲುಕು ಹಾಕಿದರು. ಜನಸಾಮಾನ್ಯರನ್ನೂ ಜನಮಾನ್ಯರಾಗಿರಿಸಿ ಸದಾ ನಗುಮೊಗದಿಂದ ಸರ್ವರನ್ನೂ ಬಂಧು ಗಳನ್ನಾಗಿಯೇ ಕಂಡುಕೊಂಡ ಅನನ್ಯ ಸದ್ಗುಣ ವಂತರಾಗಿದ್ದರು.  ಮಹಾನಗರದ ಹೊಟೇಲ್‌ ರಂಗಕ್ಕೆ ಹೊಸ ಆಯಾಮವನ್ನೇ ನೀಡಿದ ದೂರದಷ್ಟಿತ್ವದ ಚಿಂತನೆಯ ವ್ಯಕ್ತಿತ್ವದ ಕರ್ಕೇರರ ವೃತ್ತಿನಿಷ್ಠೆ, ಸೇವಾತಾತ್ಪರತೆ ಅನನ್ಯವಾಗಿತ್ತು. ಜನಪರ ಕಾಳಜಿವುಳ್ಳ ಅವ‌ರು ಹೊಟೇಲ್‌ ಉದ್ಯಮ ಮತ್ತು ಸ್ವಸಮಾಜದ ಘನತೆಯನ್ನೂ ಪ್ರತಿಷ್ಠಿತವಾಗಿರಿಸಿದರು ಇಂತಹ ಅಸಮಾನ್ಯ ಸಾರ್ಥಕ, ಪರಿಪೂರ್ಣತೆಯ ಬದುಕು ರೂಪಿಸಿದ ಕರ್ಕೇರರು ದೈಹಿಕವಾಗಿ  ನಮ್ಮನ್ನಗಲಿದರೂ ಅವರ ಸಮಾಜಮುಖೀ ಸೇವೆಗಳಿಂದ ನಮ್ಮೆಲ್ಲರಲ್ಲೂ ಸದಾ ಶಾಶ್ವತವಾಗಿ ಉಳಿಯಲಿದ್ದಾರೆ ಎಂದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ, ಪಿ. ವಿ.  ಭಾಸ್ಕರ್‌, ಲೀಲಾಧರ ಶೆಟ್ಟಿ, ಸದಾಶಿವ ಎ. ಕರ್ಕೇರ, ಮೃತರ ಮೊಮ್ಮಕ್ಕಳಾದ ಮಾ| ರಿನವ್‌ ಎಂ. ಕರ್ಕೇರ, ಕು| ರಿದ್ಧಿ ಕರ್ಕೇರ ಅವರು ಮಾತನಾಡಿ ನುಡಿನಮನ ಸಲ್ಲಿಸಿದರು. ನಿತ್ಯಾನಂದ ಡಿ.ಕೋಟ್ಯಾನ್‌  ಅವರು ಸೂರು ಸಿ. ಕರ್ಕೇರ ಅವರ ಜೀವನ ಪಯಣ, ಬದುಕು ವೈಶಿಷ್ಟ¤ತೆಯನ್ನು  ಬಣ್ಣಿಸಿ ಸಂತಾಪ ಸಭೆಯನ್ನು ನಿರ್ವಹಿಸಿದರು. ಗಾಯಕ ಗಣೇಶ್‌ ಎರ್ಮಾಳ್‌ ಮತ್ತು ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಸಭೆಯಲ್ಲಿ ಮೃತರ  ಧರ್ಮಪತ್ನಿ, ಭಾರತ್‌ ಬ್ಯಾಂಕಿನ ನಿರ್ದೇಶಕಿ ಶಾರದಾ ಎಸ್‌. ಕರ್ಕೇರ, ಸುಪುತ್ರರಾದ ಬಿಸಿಸಿಐ ನಿರ್ದೇಶಕ  ಮಹೇಶ್‌ ಎಸ್‌. ಕರ್ಕೇರ, ಚಂದ್ರಶೇಖರ್‌ ಎಸ್‌. ಕರ್ಕೇರ, ಸುಪುತ್ರಿ ಸ್ವಪ್ನಾ ಎಸ್‌. ಕರ್ಕೇರ, ರಶ್ಮೀ ಎಂ. ಕರ್ಕೇರ, ವಿಕ್ಕೀ ಅಹುಜಾ, ಸಹೋದರಿ ಕಲ್ಯಾಣಿ ಪೂಜಾರಿ, ಕೃಷ್ಣಪ್ಪ ಕರ್ಕೇರ, ಉಮೇಶ್‌ ಕರ್ಕೇರ, ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರೀ  ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ, ದೇವೇಂದ್ರ ವಿ. ಬಂಗೇರ ಖಾರ್‌ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಗರದ ವಿವಿಧ ಜಾತೀಯ, ತುಳು-ಕನ್ನಡಪರ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಕ್ಷೇತ್ರಗಳ ಗಣ್ಯರು, ಹಿತೈಷಿಗಳು, ಭಾರತ್‌ ಬ್ಯಾಂಕಿನ ನಿರ್ದೇಶಕರು, ಉನ್ನತಾಧಿಕಾರಿಗಳು, ಬಿಲ್ಲವರ ಅಸೋ¬. ಮುಂಬಯಿ ಪದಾಧಿ ಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಸ್ಥಳೀಯ ಸಮಿತಿ ಮತ್ತು ಕಚೇರಿಗಳ ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು, ಕಾರ್ಯ ಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾ ಗದವರು, ಸಮಾಜ ಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೂರು ಸಿ. ಕರ್ಕೇರ ಅವರ ಭಾವಚಿತ್ರಕ್ಕೆ ಪುಷ್ಪವೃಷ್ಟಿಗೈದು ನಮನ ಸಲ್ಲಿಸಿದರು.   

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.