ಬಿಲ್ಲವರ ಅಸೋಸಿಯೇಶನ್ ಕಾಂದಿವಲಿ: ಶೈಕ್ಷಣಿಕ ನೆರವು ವಿತರಣೆ
Team Udayavani, Aug 15, 2018, 1:34 PM IST
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾಂದಿವಲಿ ಸಮಿತಿಯ ವತಿಯಿಂದ ಸಮಾಜದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಶೈಕ್ಷಣಿಕ ನೆರವು ವಿತರಣೆ ಮತ್ತು ಮಹಿಳಾ ವಿಭಾಗದಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಆ. 12 ರಂದು ಮಹಾವೀರ ನಗರದ ಪಾಂಚೋಲಿಯಾ ಶಾಲಾ ಸಭಾಗೃಹದಲ್ಲಿ ಜರಗಿತು.
ಬಿಲ್ಲವರ ಅಸೋಸಿಯೇಶನ್ ಮುಖವಾಣಿ ಅಕ್ಷಯ ಮಾಸಿಕದ ಉಪ ಸಂಪಾದಕ ಹರೀಶ್ ಜಿ. ಪೂಜಾರಿ ಇವರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆಷಾಢ ತಿಂಗಳ ಕಷ್ಟ, ಕಾರ್ಪಣ್ಯ, ಅಂದಿನ ತಿಂಡಿ-ತಿನಸುಗಳನ್ನು ನಾವು ನಮ್ಮ ಮಕ್ಕಳಿಗೆ ಮನವರಿಕೆ ಮಾಡುವ ಮುಖ್ಯ ಉದ್ಧೇಶ ಈ ಕಾರ್ಯಕ್ರಮದ್ದಾಗಬೇಕು. ನಮ್ಮ ಸಂಸ್ಕೃತಿಯ ಘನತೆ, ಗೌರವವನ್ನು ಉಳಿಸಿ-ಬೆಳೆಸುವ ಚಿಂತನೆ ಇಂತಹ ಕಾರ್ಯಕ್ರಮಗಳಿಂದಾಗಬೇಕು. ಈ ಮೂಲಕ ನಮ್ಮ ಭಾಷೆ, ಸಂಸ್ಕೃತಿಗೆ ಮಹತ್ವ ನೀಡಲು ನಾವು ಮುಂದಾಗಬೇಕು ಎಂದು ನುಡಿದು, ಹಿಂದಿನ ಕಾಲದ ಆಟಿ ತಿಂಗಳ ಆಹಾರ ಪದ್ಧತಿ, ರೋಗ, ದಾರಿದ್ರÂ ನಿವಾರಣೆಗಾಗಿ ಆಟಿಕಳಂಜದ ಪಾತ್ರ ಇತ್ಯಾದಿಗಳನ್ನು ವಿವರಿಸಿದರು.
ಜತೆ ಕಾರ್ಯದರ್ಶಿ ಸಬಿತಾ ಜಿ. ಪೂಜಾರಿ ಬಳಗದವರು ಪ್ರಾರ್ಥನೆಗೈದರು. ಸಮಿತಿಯ ಕಾರ್ಯಾಧ್ಯಕ್ಷ ಯೋಗೇಶ್ ಕೆ. ಹೆಜ್ಮಾಡಿ ಸ್ವಾಗತಿಸಿ ಮಾತನಾಡಿ, ವಿದ್ಯಾರ್ಜನೆಗೆ ಮಹತ್ವ ನೀಡುವ ಬಿಲ್ಲವರ ಅಸೋಸಿಯೇಶನ್ನ ಮೂಲ ಉದ್ದೇಶವಾಗಿದ್ದು, ಸಮಿತಿಯು ಸ್ಥಳೀಯ ಮಕ್ಕಳಿಗೆ ಪ್ರತೀ ವರ್ಷವೂ ಧನ ಸಹಾಯ ನೀಡುತ್ತಾ ಬಂದಿದೆ. ಈ ವರ್ಷ ಮಹಿಳೆಯರು ವಿಶೇಷ ಉತ್ಸುಕತೆಯಿಂದ ಪ್ರಪ್ರಥಮವಾಗಿ ಆಟಿಡೊಂಜಿ ಕೂಟ ತುಳು ಕಾರ್ಯಕ್ರಮವನ್ನು ಆಯೋ ಜಿಸಿರುವುದು ಅಭಿನಂದನೀಯ ಎಂದರು.
ಭಾರತ್ ಬ್ಯಾಂಕಿನ ನಿರ್ದೇಶಕ ಗಂಗಾಧರ ಜೆ. ಪೂಜಾರಿ, ಕೇಂದ್ರ ಸಮಿತಿಯ ವಿದ್ಯಾ ಉಪಸಮಿತಿಯ ರವಿರಾಜ್ ಕಲ್ಯಾಣು³ರ್, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷ ಗಿರಿಜಾ ಚಂದ್ರಶೇಖರ್, ಪ್ರೇಮಾ ಕೋಟ್ಯಾನ್ ಅವರನ್ನು ಪುಷ್ಪಗುಚ್ಚವನ್ನಿತ್ತು ಸಮಿತಿಯ ವತಿಯಿಂದ ಸತ್ಕರಿಸಲಾಯಿತು.
ಸಮಿತಿಯ ಉಪ ಕಾರ್ಯಾಧ್ಯಕ್ಷ ಎಸ್. ಜಿ. ಪೂಜಾರಿ ಮಾತನಾಡಿ, ಶ್ರೀ ನಾರಾಯಣ ಗುರುಗಳ ತತ್ವವನ್ನು ಆರ್ಥಿಕ ಧನ ಸಹಾಯವನ್ನಿತ್ತು ಮಕ್ಕಳಿಗೆ ತಿಳಿಸುವ ಈ ಕಾರ್ಯಕ್ರಮವು ವಿಶಿಷ್ಟವಾಗಿದ್ದು, ಮಕ್ಕಳು, ಸಾಮಾಜಿಕ ಜಾಲ ತಾಣಗಳಿಂದ ದೂರವಿದ್ದು, ವಿದ್ಯಾರ್ಜನೆಗೆ ಮಹತ್ವ ನೀಡಬೇಕು. ಜೊತೆಗೆ ಭಾಷೆ, ಸಂಸ್ಕೃತಿಯನ್ನು ಮನಸಾರೆ ಪ್ರೀತಿಸುವಂತಾಗಬೇಕು ಎಂದು ಮಕ್ಕಳಿಗೆ ತಿಳಿಸಿದರು.
ಭಾರತ್ ಬ್ಯಾಂಕಿನ ನಿರ್ದೇಶಕ ಗಂಗಾಧರ ಜೆ. ಪೂಜಾರಿ ಇವರು ಮಾತನಾಡಿ, ಆಟಿಡೊಂಜಿ ದಿನ ನಮ್ಮ ಪ್ರಥಮ ಕಾರ್ಯಕ್ರಮಕ್ಕೆ ಮಹಿಳೆಯರ ಹುರುಪು, ಉತ್ಸಾಹ ಮುಂದಿನ ಕಾರ್ಯಕ್ರಮಗಳಿಗೆ ಹೊಸ ಆಯಾಮ ನೀಡಿದಂತಾಗಿದೆ. ಹಾಗೆಯೇ ಕೇಂದ್ರ ಹಾಗೂ ಸಮಿತಿಯಲ್ಲಿ ಜರಗುವ ಎಲ್ಲಾ ಕಾರ್ಯಕ್ರಮಗಳಿಗೆ ಮಹಿಳೆಯರು ಇನ್ನಷ್ಟು ಸಹಕಾರ ನೀಡಬೇಕು. ಶ್ರೀ ನಾರಾಯಣ ಗುರುಗಳ ತಣ್ತೀ, ಸಿದ್ಧಾಂತವನ್ನು ಮಕ್ಕಳಿಗೆ ಆರ್ಥಿಕ ಧನ ಸಹಾಯ ನೀಡಿ ವಿದ್ಯಾರ್ಜನೆಗೆ ಮಹತ್ವ ನೀಡಿದ್ದು, ಗುರುವಿನಿಂದ ಪ್ರಸಾದ ಪಡೆದ ವಿದ್ಯಾರ್ಥಿಗಳೆಲ್ಲರು ವಿವಿಧ ಉನ್ನತ ಶಿಕ್ಷಣ ಪಡೆದು, ನಮ್ಮ ಸಂಸ್ಕೃತಿ, ಭಾಷೆ, ಸಂಸ್ಕೃತಿಗೂ ಮಹತ್ವ ನೀಡಿ ಎಂದು ನುಡಿದರು.
ಗೌರವ ಕೋಶಾಧಿಕಾರಿ ರಮೇಶ್ ಬಂಗೇರ ಧನ ಸಹಾಯ ಪಡೆದ ವಿದ್ಯಾರ್ಥಿಗಳ ಯಾದಿಯನ್ನು ವಾಚಿಸಿದರು. ಮಹಿಳಾ ಸದಸ್ಯೆ ಲತಾ ಬಂಗೇರ ಆಟಿ ತಿಂಗಳ ವಿಶೇಷತೆಯನ್ನು ವಿವರಿಸಿದರು. ಗೌರವ ಕಾರ್ಯದರ್ಶಿ ಉಮೇಶ್ ಸುರತ್ಕಲ್ ವಂದಿಸಿದರು. ವೇದಿಕೆಯಲ್ಲಿ ಗೌರವ ಕಾರ್ಯಾಧ್ಯಕ್ಷ ಭಾಸ್ಕರ ಎಂ. ಪೂಜಾರಿ, ಉಪ ಕಾರ್ಯಾಧ್ಯಕ್ಷ ಜಗನ್ನಾಥ್ ಡಿ. ಕುಕ್ಯಾನ್, ಜತೆ ಕೋಶಾಧಿಕಾರಿ ದೀಪಕ್ ಸುವರ್ಣ ಉಪಸ್ಥಿತರಿದ್ದರು. ಆನಂತರ ಮಹಿಳೆಯರು ವಿವಿಧ ಭಕ್ಷÂಗಳನ್ನು ಪ್ರದರ್ಶಿಸಿದರು. ಸಮಿತಿಯ ಪದಾಧಿಕಾರಿಗಳು ಸದಸ್ಯರು ಕಾರ್ಯಕ್ರಮಕ್ಕೆ ಸಹಕರಿಸಿದರು.
ಚಿತ್ರ-ವರದಿ: ರಮೇಶ್ ಉದ್ಯಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು