ಬಿಲ್ಲವ ಸಮಾಜದ ಹಿತಚಿಂತನೆ ಮುಖ್ಯ ಉದ್ದೇಶ: ಹರೀಶ್‌ ಜಿ. ಅಮೀನ್‌

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ 88, 89ನೇ ವಾರ್ಷಿಕ ಮಹಾಸಭೆ

Team Udayavani, Sep 15, 2021, 2:35 PM IST

ಬಿಲ್ಲವ ಸಮಾಜದ ಹಿತಚಿಂತನೆ ಮುಖ್ಯ ಉದ್ದೇಶ: ಹರೀಶ್‌ ಜಿ. ಅಮೀನ್‌

ಸಾಂತಾಕ್ರೂಜ್‌: ಸಮಾಜಕ್ಕೆ ಒಳ್ಳೆಯ ಕೆಲಸವಾಗಬೇಕೆಂಬ ಉದ್ದೇ ಶದಿಂದ ಅಸೋಸಿಯೇಶನ್‌ನಲ್ಲಿ ಸಕ್ರಿಯನಾಗಿ ಕೆಲಸ ಮಾಡಲು ಪ್ರಾರಂಭಿಸಿದೆ. ಪ್ರಸ್ತುತ ಅಸೋಸಿ ಯೇಶನ್‌ನ ಅಧ್ಯಕ್ಷನಾಗಿ ಉತ್ತಮ ಕಾರ್ಯಕರ್ತರೊಂದಿಗೆ ನಮ್ಮ ಸಮಾಜವನ್ನು ದಿ| ಜಯ ಸಿ. ಸುವರ್ಣರ ಪ್ರೇರಣೆ ಹಾಗೂ ಮಾರ್ಗ ದರ್ಶನದಲ್ಲಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಮುಂದಾಗಿದ್ದೇವೆ. ಈ ಮಹತ್ಕಾರ್ಯಕ್ಕೆ ಎಲ್ಲರ ಸಹಕಾರ, ಬೆಂಬಲ ಹಾಗೂ ಪ್ರೋತ್ಸಾಹದ ಅಗತ್ಯವಿದೆ. ಸಂಘಟನೆಯ ಬಲವ ರ್ಧನೆಯೊಂದಿಗೆ ಸಮಾಜದ ಹಿತಚಿಂತನೆ ನಮ್ಮ ಮುಖ್ಯ ಉದ್ದೇ ಶವಾಗಿದೆ ಎಂದು ಬಿಲ್ಲವರ ಅಸೋಸಿ ಯೇಶನ್‌ ಮುಂಬಯಿ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ತಿಳಿಸಿದರು.

ಸೆ. 12ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ಜರಗಿದ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ 88ನೇ ಹಾಗೂ 89ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ಹೆಚ್ಚಿನ ಸಂಖ್ಯೆ ಯಲ್ಲಿ ಯುವಕರು ಸಮಾಜದ ಸಂಘಟನೆಯಲ್ಲಿ ಕೆಲಸ ಮಾಡಲು ಮುಂದೆ ಬಂದಿದ್ದಾರೆ. ಸಮಾಜಪರ ಕೆಲಸ ಮಾಡಲು ಎಲ್ಲರಿಗೂ ಅವಕಾಶ ನೀಡುತ್ತೇವೆ ಎಂದರು.

ರಾಷ್ಟ್ರೀಯ ಬಿಲ್ಲವರ ಮಹಾಮಂ ಡಲದ ಅಧ್ಯಕ್ಷ ಡಾ| ರಾಜಶೇಖರ್‌ ಕೋಟ್ಯಾನ್‌ ಶುಭ ಹಾರೈಸಿದರು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅವರನ್ನು ಪ್ರಸ್ತುತ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಹರೀಶ್‌ ಜಿ. ಅಮೀನ್‌ ಅವರಿಗೆ ಚಂದ್ರಶೇಖರ ಎಸ್‌. ಪೂಜಾರಿ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು.

ಬಿಲ್ಲವರ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ವರದ ಉಲ್ಲಾಳ್‌ ಮಾತನಾಡಿ, ಅಸೋಸಿಯೇಶನ್‌ನ ಕಾರ್ಯ ಚಟುವಟಿಕೆಗಳಲ್ಲಿ ಕೆಲವು ಬದಲಾವಣೆಗಳ ಅಗತ್ಯವಿದೆ. ಇದನ್ನು ಸಂಬಂಧಪಟ್ಟವರು ಚರ್ಚಿಸಿ ಬದಲಾವಣೆ ಮಾಡಬೇಕಾಗಿದೆ. ಹಿರಿಯರು ಹೊಸ ಮುಖಗಳಿಗೆ ಹಾಗೂ ಯುವಕರಿಗೆ ಅವಕಾಶ ನೀಡಬೇಕು. ಈ ಸಂಸ್ಥೆಗೆ ಅನೇಕ ಮಹನೀಯರು ಹಲವು ವರ್ಷಗಳ ಹಿಂದಿನಿಂದಲೇ ಪರಿಶ್ರಮ ಪಟ್ಟಿ¨ªಾರೆ. ಅಂಥವರನ್ನು ಮರೆಯುವಂತಿಲ್ಲ ಎಂದರು.

ಇದನ್ನೂ ಓದಿ:ಹೈಟೆಕ್‌ ಪ್ರವಾಸಿ ಮಂದಿರ ನಿರ್ಮಾಣ ಶೀಘ್ರ: ರೇಣುಕಾಚಾರ್ಯ

ಮಾಜಿ ಅಧ್ಯಕ್ಷ ಎಲ್‌. ವಿ. ಅಮೀನ್‌ ಮಾತನಾಡಿ, ನಾರಾಯಣ ಗುರು ಹಾಗೂ ಜಯ ಸುವರ್ಣ ಅವರು ಹಾಕಿಕೊಟ್ಟ ದಾರಿಯಲ್ಲಿ ನಮ್ಮ ಸಮಾಜವನ್ನು ಮುನ್ನಡೆಸಬೇಕಾಗಿದೆ ಎಂದರು.

ಮಾಜಿ ಅಧ್ಯಕ್ಷ ನಿತ್ಯಾನಂದ ಎನ್‌. ಕೋಟ್ಯಾನ್‌ ಮಾತನಾಡಿ, ಸಮಾಜಕ್ಕೆ ಹಿರಿಯರು ಮಾಡಿದ ಕೆಲಸವನ್ನು ಮರೆಯದೆ ಅವರಿಗೆ ಸರಿಯಾದ ಗೌರವ ನೀಡುತ್ತಾ ಬರಬೇಕು ಎಂದವರು ಹೇಳಿದರು.

ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಎಂಡ್ ಇಂಡಸ್ಟ್ರೀಸ್‌ನ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ ಮಾತನಾಡಿ, ಪ್ರಸ್ತುತ ಹರೀಶ್‌ ಅಮೀನ್‌ ಅವರಿಗೆ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ ದೊರೆತಿದೆ. ಅವರಿಗೆ ನಾವೆಲ್ಲರೂ ಸಂಪೂರ್ಣ ಸಹಕಾರ ನೀಡೋಣ. ಸಮಾಜ ಬಾಂಧವರಿಗೆ ಸಹಾಯವಾಗುವ ಕೆಲಸ ನಮ್ಮಿಂದಾಗಲಿ. ಇದಕ್ಕಾಗಿ ನಾವೆಲ್ಲರೂ ಪ್ರಯತ್ನಿಸೋಣ ಎಂದು ಹೇಳಿದರು.

ಹಿರಿಯರಾದ ಕೆ. ಎಂ. ಮಾಬಿಯನ್‌, ನ್ಯಾಯವಾದಿ ರಾಜ ವಿ. ಸಾಲ್ಯಾನ್‌, ಭಾರತ್‌ ಬ್ಯಾಂಕ್‌ನ ನಿರ್ದೇಶಕರಾದ ಭಾಸ್ಕರ್‌ ಎಂ. ಸಾಲ್ಯಾನ್‌, ಪುರುಷೋತ್ತಮ ಕೋಟ್ಯಾನ್‌, ನವಿಮುಂಬಯಿ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ, ಉಮೇಶ ಅಂಚನ್‌, ಡಿ. ಎಂ. ಅಮೀನ್‌ ಮೊದಲಾದವರು ಸಲಹೆ-ಸೂಚನೆ ನೀಡಿದರು.

ಸಭೆಯಲ್ಲಿ ನೂತನ ಕಾರ್ಯ ಕಾರಿ ಸಮಿತಿಯ ಸದಸ್ಯರ ಹೆಸರನ್ನು ಘೋಷಿಸಲಾಯಿತು. ಗುರುನಾರಾಯಣ ರಾತ್ರಿ ಶಾಲೆಯಲ್ಲಿ ಈ ಬಾರಿ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಶೇ. 92 ಅಂಕಗಳನ್ನು ಪಡೆದ ಐಶ್ವರ್ಯಾ ಪೂಜಾರಿ ಅವರನ್ನು ಎಂ. ಬಿ. ಕುಕ್ಯಾನ್‌ ಬಂಗಾರದ ಪದಕ ನೀಡಿ ಗೌರವಿಸಲಾಯಿತು.

ವಿಧಿತಾ ಆನಂದ್‌ ಪೂಜಾರಿ ಪ್ರಾರ್ಥನೆಯೊಂದಿಗೆ ಮಹಾಸಭೆ ಆರಂಭಗೊಂಡಿತು. ಉಪಾಧ್ಯಕ್ಷರಾದ ಶಂಕರ್‌ ಡಿ. ಪೂಜಾರಿ, ದಯಾನಂದ ಆರ್‌. ಪೂಜಾರಿ, ಶ್ರೀನಿವಾಸ ಆರ್‌. ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ, ಜತೆ ಕಾರ್ಯದರ್ಶಿಗಳಾದ ಹರೀಶ್‌ ಜಿ. ಸಾಲ್ಯಾನ್‌, ಧರ್ಮೇಶ್‌ ಎಸ್‌. ಸಾಲ್ಯಾನ್‌, ಕೇಶವ ಕೆ. ಕೋಟ್ಯಾನ್‌, ಅಕ್ಷಯ್‌ ಪೂಜಾರಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್‌ ಜೆ. ಬಂಗೇರ, ಜತೆ ಕೋಶಾಧಿಕಾರಿಗಳಾದ ಶಿವರಾಮ್‌ ಎಸ್‌. ಪೂಜಾರಿ, ಸದಾಶಿವ ಎ. ಕರ್ಕೇರ, ಮೋಹನ್‌ ಡಿ. ಪೂಜಾರಿ, ಜಯ ಎಸ್‌. ಸುವರ್ಣ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವರದ ಉಲ್ಲಾಳ್‌, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ನಾಗೇಶ್‌ ಎಂ. ಕೋಟ್ಯಾನ್‌, ಸೇವಾದಳದ ದಳಪತಿ ಗಣೇಶ್‌ ಕೆ. ಪೂಜಾರಿ, ಸದಸ್ಯರಾದ ಮೋಹನ್‌ದಾಸ್‌ ಜಿ. ಪೂಜಾರಿ, ಧರ್ಮಪಾಲ್‌ ಜಿ. ಅಂಚನ್‌, ಮಹೇಶ್‌ ಕಾರ್ಕಳ, ಹರೀಶ್‌ ಹೆಜಮಾಡಿ, ಬಿ. ರವೀಂದ್ರ ಅಮೀನ್‌, ನೀಲೇಶ್‌ ಪೂಜಾರಿ ಪಲಿಮಾರ್‌, ವಿಶ್ವನಾಥ್‌ ಆರ್‌. ತೋನ್ಸೆ, ಅಶೋಕ್‌ ಕೆ. ಕುಕ್ಯಾನ್‌, ಸುಮಿತ್ರಾ ಎಸ್‌. ಬಂಗೇರ, ಶಕುಂತಲಾ ಕೆ. ಕೋಟ್ಯಾನ್‌, ಹರೀಶ್‌ ಜಿ ಪೂಜಾರಿ, ಬಬಿತಾ ಜೆ. ಕೋಟ್ಯಾನ್‌, ನವೀನ್‌ ಎಲ್‌. ಬಂಗೇರ, ಜಗನ್ನಾಥ್‌ ಎಂ. ಅಮೀನ್‌, ಕೇಶವ ಎಸ್‌. ಪೂಜಾರಿ, ಡಾ| ಗೀತಾಂಜಲಿ ಎಲ್‌. ಸಾಲ್ಯಾನ್‌, ವಿಶೇಷ ಆಮಂತ್ರಿತರಾದ ಶಂಕರ ಎಸ್‌. ಸುವರ್ಣ, ಆಂತರಿಕ ಲೆಕ್ಕಪರಿಶೋಧಕರಾದ ಸಚಿನ್‌ ಎಸ್‌. ಪೂಜಾರಿ, ದಿವಾಕರ್‌ ಎಂ. ಪೂಜಾರಿ, ಹಾಗೂ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರು ಉಪಸ್ಥಿತರಿದ್ದರು.

ಸಮಾಜದ ಅಭಿವೃದ್ಧಿಗೆ ಶ್ರಮಿಸೋಣ
ಸಮಾಜದ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ. ಆಗ ಮಾತ್ರ ನಮ್ಮ ಜನನಾಯಕ ಜಯ ಸಿ. ಸುವರ್ಣ ಅವರ ಕನಸನ್ನು ನನಸು ಮಾಡಲು ಸಾಧ್ಯ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಸೇರಿ ಸಮಾಜದ ಅಭಿವೃದ್ಧಿಗಾಗಿ ನಿರಂತರ ಕೆಲಸ ಮಾಡಬೇಕು. ನಮಗೆ ಸಮಾಜ ಸೇವೆ ಮಾಡಲು ಸಿಕ್ಕಿದ ಅವಕಾಶ ಗುರುದೇವರ ಆಶೀರ್ವಾದದಿಂದಾಗಿದೆ. ಸಮಾಜವನ್ನು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಗೆ ತರುವಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು.
-ಡಾ| ರಾಜ್‌ಶೇಖರ್‌ ಕೋಟ್ಯಾನ್‌ ಅಧ್ಯಕ್ಷರು, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ

ಸಮಾಜಕ್ಕೆ ಒಳಿತಾಗಲಿ
ಕಳೆದ ಮೂವತ್ತು ವರ್ಷಗಳಿಂದ ದಿ| ಜಯ ಸಿ. ಸುವರ್ಣ ಅವರ ಮಾರ್ಗದರ್ಶನದಂತೆ ಬಿಲ್ಲವರ ಅಸೋಸಿಯೇಶನ್‌ನಲ್ಲಿ ಸಮಾಜಪರ ಕೆಲಸದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದೇನೆ. ಜಯ ಸಿ. ಸುವರ್ಣರ ಆಸೆಯಂತೆ ಸಮಾಜದ ಉದ್ಧಾರವಾಗಬೇಕು. ಸಮಾಜಕ್ಕೆ ಎಲ್ಲ ರೀತಿಯಿಂದಲೂ ಒಳಿತಾಗಲಿ ಎಂಬುವುದೇ ನನ್ನ ಆಶಯ.
-ಚಂದ್ರಶೇಖರ್‌ ಎಸ್‌. ಪೂಜಾರಿ
ನಿಕಟಪೂರ್ವ ಅಧ್ಯಕ್ಷರು, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ

ಚಿತ್ರ -ವರದಿ: ಸುಭಾಷ್‌ ಶಿರಿಯ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.