ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌


Team Udayavani, Oct 25, 2021, 11:13 AM IST

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಮುಂಬಯಿ: ಬದುಕಿನ ಉನ್ನತ ಮೌಲ್ಯವನ್ನು ಅರ್ಥೈಸಿಕೊಂಡು ತನ್ನ ಜೀವನವನ್ನು ಸಮಾಜಮುಖೀಯಾಗಿ ಸಾರ್ಥಕಗೊಳಿಸಿದ ದಿ| ಜಯ ಸಿ. ಸುವ ರ್ಣರು ಸಮಾಜ ಗುರುತಿಸಿದ ಅಜೇಯ ವ್ಯಕ್ತಿತ್ವದವರು. ಪ್ರಬಲ ಸಂಘಟನೆಯಿಂದ ಬಹುಮುಖ ಪ್ರಗತಿಯ ಸಾಧ್ಯತೆಯನ್ನು ಸಮಾಜಕ್ಕೆ ನೀಡಿದ ಅವರು ಬಿಲ್ಲವರ ಭಾವೈ ಕ್ಯವನ್ನು ಬಯಸಿದರು. ಸಮಹಿತವನ್ನು ಆಶಿಸಿ ಬಂಧುತ್ವದ ಸೇತುವೆ ಕಟ್ಟಲು ಅವಿರತವಾಗಿ ದುಡಿದರು. ಕಡು ಬಡವರನ್ನು, ಮಧ್ಯಮ ವರ್ಗದವರನ್ನು ಹಾಗೂ ಶ್ರೀಮಂತರನ್ನು ಒಂದೇ ಸೂರಿನಲ್ಲಿ ಸಂಘಟಿಸಿ ನಾವೆಲ್ಲ ಒಂದೇ, ನಾವೆಲ್ಲ ಬಂಧು ಎಂಬ ವ್ಯಾಖ್ಯಾನವನ್ನು ಅನುಷ್ಠಾನಗೊಳಿಸಿದ ಮಾನವತಾ ವಾದಿ ಅವರಾಗಿದ್ದರು. ಗೋರೆಗಾಂವ್‌ ಪೂರ್ವದಲ್ಲಿ  ಅನಾವರಣಗೊಂಡ ಜಯ ಸುವರ್ಣ ಮಾರ್ಗ ಅವರ ಸಾಧನೆಯ ಹೆಜ್ಜೆಯ ಗುರುತಾಗಿದೆ ಎಂದು ಮುಂಬಯಿ ಬಿಲ್ಲವ ಅಸೋಸಿಯೇಶನ್‌ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ತಿಳಿಸಿದರು.

ಅ. 21ರಂದು ಸಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ  ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಆಯೋಜಿಸಿದ ದಿ| ಜಯ ಸಿ. ಸುವರ್ಣರ ಪ್ರಥಮ ಪುಣ್ಯತಿಥಿಯ ವಿವಿಧ ಕಾರ್ಯಕ್ರಮಗಳ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸತ್ಯಪ್ರಿ ಯರು, ನೇರ ನುಡಿಯ ಜಯ ಸುವರ್ಣರುಮುಂಬಯಿ ಬಿಲ್ಲವ ಅಸೋಸಿಯೇಶನ್‌ ಅಧ್ಯಕ್ಷರಾಗಿ, ಭಾರತ್‌ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾಗಿ, ರಾಷ್ಟ್ರೀಯ ಬಿಲ್ಲವರ ಮಹಾಮಂ ಡಲದ ಅಧ್ಯಕ್ಷರಾಗಿ, ಕುದ್ರೋಳಿ ದೇವಸ್ಥಾನದ ಅಭಿವೃದ್ಧಿಯ ಹರಿಕಾರರಾಗಿ ದುಡಿದು ಜನ್ಮಭೂಮಿ ಮತ್ತು ಕರ್ಮಭೂಮಿಯಲ್ಲಿ ಅಜರಾಮರಾದರು ಎಂದರು.

ಮಹಾರಾಷ್ಟ್ರ ಬಿಜೆಪಿ ಉಪಾಧ್ಯಕ್ಷ ಕೃಪಾಶಂಕರ್‌ ಸಿಂಗ್‌ ಮಾತನಾಡಿ, ಹೃದಯ ಹೃದಯಗಳನ್ನು ಜೋಡಿಸುವ ಚತುರತೆ, ಸಂಘ-ಸಂಸ್ಥೆಗಳನ್ನು ಪರಸ್ಪರ ಬೆಸೆಯುವ ಜಾಣ್ಮೆ ದಿ| ಜಯ ಸಿ. ಸುವರ್ಣರಲ್ಲಿ ರಕ್ತಗತವಾಗಿತ್ತು. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಅವರ ದೂರದೃಷ್ಟಿ ಅನನ್ಯವಾದದ್ದು. ನನ್ನ ತಾಯಿಯ ಹೆಸರಿನ ಶಿಕ್ಷಣ ಸಂಸ್ಥೆಯಿಂದ ದಿ| ಜಯ ಸಿ. ಸುವರ್ಣರ ಹೆಸರಿನಲ್ಲಿ  ಬಿಲ್ಲವ ಸಮಾಜದ ಅತ್ಯಂತ ಹೆಚ್ಚು ಅಂಕಗಳಿಸಿದ ಓರ್ವ ವೈದ್ಯಕೀಯ ವಿದ್ಯಾರ್ಥಿನಿಯ ಶುಲ್ಕ ಭರಿಸುತ್ತೇನೆ ಎಂಬ ಭರವಸೆ ನೀಡಿ ಪುಷ್ಪ ನಮನ ಸಲ್ಲಿಸಿದರು.

ಪೊವಾಯಿ ಶ್ರೀ ಮಹಾಶೇಷ ರುಂಡ ಮಾಲಿನಿ ದೇವಸ್ಥಾನದ ಧರ್ಮದರ್ಶಿ ಶ್ರೀ ಸುವರ್ಣ ಬಾಬಾ ಮಾತನಾಡಿ, ಸ್ವರ್ಗಸ್ಥ ಜಯ ಸಿ. ಸುವರ್ಣರ ಸಾಧನೆ, ಕ್ರಿಯಾಶೀಲತೆ ಇಚ್ಛಾಶಕ್ತಿಯಿಂದ ಬಿಲ್ಲವರು ವಿಶ್ವದಲ್ಲಿ  ಗುರುತಿಸಿಕೊಂಡಿದ್ದಾರೆ. ಧರ್ಮ ಬೀರು, ಶಿಕ್ಷಣ ಪ್ರೇಮಿ ಆಗಿರುವ ಅವರು ಬಿಲ್ಲವ ಸಮಾಜವನ್ನು ಒಗ್ಗೊಡಿಸಿದ ಅಪೂರ್ವ ಸಂಘಟಕರಾಗಿದ್ದಾರೆ ಎಂದರು.

ಅತಿಥಿಗಳಾಗಿ ಆಗಮಿಸಿದ ಹಿರಿಯ ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ, ಭಾರತ್‌ ಬ್ಯಾಂಕ್‌ನ ನಿರ್ದೇಶಕ ಭಾಸ್ಕರ ಎಂ. ಸಾಲ್ಯಾನ್‌, ಬಿಲ್ಲವರ ಅಸೋಸಿಯೇಶನ್‌ ಬೆಂಗಳೂರು ಅಧ್ಯಕ್ಷ ವೇದಕುಮಾರ್‌ ಮಾತನಾಡಿದರು.

ಶ್ರೀಕ್ಷೇತ್ರ ಕುದ್ರೋಳಿ ಇದರ ಗೌರವ ಕೋಶಾಧಿಕಾರಿ ಪದ್ಮರಾಜ ರಾಮಯ್ಯ ಮಾತನಾಡಿ, ಮಹಾರಾಷ್ಟ್ರ ನೆಲದಲ್ಲಿ  ಅದರಲ್ಲೂ  ಮಹಾನಗರ ಗೋರೆಗಾಂವ್‌ ಪೂರ್ವದ ರೈಲು ನಿಲ್ದಾಣದ ಸಮೀಪ ಜಯ ಸುವರ್ಣ ಮಾರ್ಗ ಅನಾವರಣಗೊಂಡಿರುವುದು ಅವರ ಸಾಮಾಜಿಕ ಕೊಡುಗೆ ಮತ್ತು ಸಾಧನೆಯ ಪ್ರತಿಬಿಂಬವಾಗಿದೆ ಎಂದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್‌ ಜಿ. ಸಾಲ್ಯಾನ್‌ ಪ್ರಸ್ತಾವಿಸಿ, ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಕೇಶವ ಕೆ. ಕೋಟ್ಯಾನ್‌ ಕಾರ್ಯಕ್ರಮ ನಿರ್ವಹಿಸಿದರು. ಇದೇ ಸಂದರ್ಭ ಉಚಿತ ಆರೋಗ್ಯ ತಪಾಸಣ ಶಿಬಿರವನ್ನು ಆಯೋಜಿಸಲಾ ಗಿತ್ತು. ಗುರು ಪೂಜೆಯ ಬಳಿಕ ಅನ್ನಪ್ರ ಸಾದ ಮತ್ತು ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ಕಲಾವಿದರಿಂದ ಕಾಂತಬಾರೆ ಬೂದಬಾರೆ ಬಯಲಾಟ ಪ್ರದರ್ಶನಗೊಂಡಿತು.

ಭಾರತ್‌ ಬ್ಯಾಂಕ್‌ನ ನಿರ್ದೇಶಕ ಸೂರ್ಯಕಾಂತ್‌ ಜಯ ಸುವರ್ಣ, ಉಪಾಧ್ಯಕ್ಷ ಧರ್ಮಪಾಲ್‌ ಜಿ. ಅಂಚನ್‌, ಜಯಂತಿ ಉಳ್ಳಾಲ್, ಕೆ. ಸುರೇಶ್‌ ಕುಮಾರ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಳಾ ಕೋಟ್ಯಾನ್‌ ಮತ್ತಿತರರಿದ್ದರು.

ಸಮಾಜದಲ್ಲಿ ಎಲ್ಲರೂ ವಿದ್ಯಾವಂತರಾಗಬೇಕು, ಸುಂಸ್ಕೃತರಾಗಬೇಕು, ಎಲ್ಲರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಬೇಕು ಎಂಬ ದಿ| ಜಯ ಸಿ. ಸುವರ್ಣರ ಮನದಾಳದ ಇಚ್ಚೆಯಾಗಿತ್ತು. ನಿರಾಂಡಂಬರ ವ್ಯಕ್ತಿತ್ವದ ಅವರು ಮಾಡಿ ತೋರಿಸುವ ಛಲ, ಸಾಧಿಸುವ ಬಲವುಳ್ಳ ಸಾಮಾನ್ಯ ವ್ಯಕ್ತಿತ್ವದ ಅಸಾಮನ್ಯ ಶಕ್ತಿಯಾಗಿದ್ದರು.-ಡಾ| ರಾಜಶೇಖರ್‌ ಕೋಟ್ಯಾನ್‌ಅಧ್ಯಕ್ಷ, ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ

ದಿ| ಜಯ ಸುವರ್ಣರ ಮಾರ್ಗದರ್ಶನದಂತೆ ಉಚಿತ ವಿದ್ಯಾಭ್ಯಾಸ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ತ್ವಗಳ ಪಾಲನೆ ಮೊದಲಾದ ಜನಪರ ಯೋಜನೆಗಳನ್ನು ಒಳಗೊಂಡ ಸಂಸ್ಥೆಯೊಂದನ್ನು  ಪುಣೆಯ ಎರಡು ಎಕರೆ ನಿವೇಶನದಲ್ಲಿ  ನಿರ್ಮಿಸುವುದು ನಮ್ಮ ಧ್ಯೇಯವಾಗಿದೆ. ಅದಕ್ಕೆ ಸಮಾಜ ಬಾಂಧವರ ಪ್ರೋತ್ಸಾಹ, ಸಹಕಾರ ಸದಾಯಿರಲಿ. -ವಿಶ್ವನಾಥ್‌ ಪೂಜಾರಿ ಕಡ್ತಲ ಅಧ್ಯಕ್ಷ, ಪುಣೆ ಬಿಲ್ಲವ ಸಂಘ

ದಿ| ಜಯ ಸುವರ್ಣರ ರಚನಾತ್ಮಕ ಬಳಕೆಯಿಂದ ಭಾರತ್‌ ಬ್ಯಾಂಕ್‌ ರಾಷ್ಟ್ರಮಟ್ಟದಲ್ಲಿ  ಪ್ರಬಲಗೊಂಡಿದೆ. ಶಾಖೆಗಳ ವಿಸ್ತರಣೆಯ ಮೂಲಕ ಸಾವಿರಾರು ಮಂದಿಗೆ ಉದ್ಯೋಗ ಕಲ್ಪಿಸಿ¨ªಾರೆ. ಅವರ ಆಶೀರ್ವಾದ ಸದಾ ನಮ್ಮ ಮೇಲಿರಲಿದೆ.-ಯು. ಎಸ್‌. ಪೂಜಾರಿ ,ಕಾರ್ಯಾಧ್ಯಕ್ಷ, ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಮುಂಬಯಿ

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.