ಅಕಾಡೆಮಿಯ ಸಾಧನೆ ಇತರರಿಗೆ ಮಾದರಿ: ಸಂಸದ ಗೋಪಾಲ್‌ ಶೆಟ್ಟಿ


Team Udayavani, Oct 18, 2022, 11:15 AM IST

ಅಕಾಡೆಮಿಯ ಸಾಧನೆ ಇತರರಿಗೆ ಮಾದರಿ: ಸಂಸದ ಗೋಪಾಲ್‌ ಶೆಟ್ಟಿ

ಮುಂಬಯಿ: ಪ್ರತಿಷ್ಠಿತ ಬಿಪಿನ್‌ ಫುಟ್‌ಬಾಲ್‌ ಅಕಾಡೆಮಿಯ 34ನೇ ವಾರ್ಷಿಕ ಬಿಪಿನ್‌ ಉಚಿತ ಫುಟ್‌ಬಾಲ್‌ ತರಬೇತಿ ಶಿಬಿರವನ್ನು ಅತಿಥಿಗಳಾದ ಬಿಜೆಪಿ ಸಂಸದ ಗೋಪಾಲ್‌ ಶೆಟ್ಟಿ ಹಾಗೂ ಭಾರತದ ಮಾಜಿ ಫುಟ್‌ಬಾಲ್‌ ಆಟಗಾರ, ಶಿವ ಛತ್ರಪತಿ ಪ್ರಶಸ್ತಿ ಪುರಸ್ಕೃತ ಗಾಡ್‌ ಫ್ರೆ ಪೆರೇರಾ ಅವರು ಅ. 17ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಬೊರಿವಲಿಯ ಜೋಗರ್ಸ್‌ ಪಾರ್ಕ್‌ ಫುಟ್‌ಬಾಲ್‌ ಗ್ರೌಂಡ್‌ನ‌ಲ್ಲಿ ಹಮ್ಮಿಕೊಳ್ಳಲಾಗಿದ್ದ ಉದ್ಘಾಟನ ಕಾರ್ಯಕ್ರಮದಲ್ಲಿ ಸಂಸದ ಗೋಪಾಲ್‌ ಶೆಟ್ಟಿ ಮಾತನಾಡಿ, ಎಳವೆಯಿಂದಲೇ ಮಕ್ಕಳಿಗೆ ಕ್ರೀಡೆ ಬಗ್ಗೆ ಅರಿವು ಮೂಡಿಸಿ ಅವರನ್ನು ಪ್ರೋತ್ಸಾಹಿಸಬೇಕು. ಇಂತಹ ಪಂದ್ಯಾವಳಿಗಳಿಗೆ ಸಹಕರಿ ಸಲು ಉತ್ಸುಕನಾಗಿದ್ದೇನೆ. ಸರಕಾರವು ಕೂಡ ಇಂತಹ ಕ್ರೀಡೆಯನ್ನು ಬೆಳೆಸಲು ವಿಶ್ವದರ್ಜೆಯ ಮೂಲ ಸೌಕರ್ಯ ಒದಗಿ ಸುತ್ತಿದೆ. ಮಕ್ಕಳು ಎಳವೆಯಲ್ಲಿಯೇ ಕ್ರೀಡೆ ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದೇಶದ ಕೀರ್ತಿ ಎತ್ತಿ ಹಿಡಿಯಬೇಕು. ಫುಟ್‌ಬಾಲ್‌ ಆಡುವುದರಿಂದ ದೇಹದ ಫಿಟ್ನೆಸ್‌ ವೃದ್ಧಿ ಜತೆಗೆ ಒಂದು ಶ್ರೇಷ್ಠ ತಂಡವನ್ನು ಕಟ್ಟುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಬಿಪಿನ್‌ ಫುಟ್‌ಬಾಲ್‌ ಅಕಾಡೆಮಿಯ ಕ್ರೀಡಾ ಕ್ಷೇತ್ರದ ಸಾಧನೆ ಅಪಾರವಾಗಿದೆ. ಬಾಲಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಟೂರ್ನಿಗಳಲ್ಲಿ ಪಾಲ್ಗೊಂಡು ರಾಷ್ಟ್ರೀಯ ತಂಡದಲ್ಲಿ ಆಡುವಂತಾಗಬೇಕೆಂದು ಎಂದು ತಿಳಿಸಿದರು.

ಗಾಡ್‌ ಫ್ರೆ ಪೆರೇರಾ ಮಾತನಾಡಿ, ಭಾರತದ ಫುಟ್‌ಬಾಲ್‌ ಅತ್ಯಂತ ವೇಗವಾಗಿ ಪ್ರಗತಿ ಹೊಂದುತ್ತಿದ್ದು, ಇದಕ್ಕೆ ಸ್ಥಾನೀಯ ಸಂಸ್ಥೆಗಳು ಸಹಕಾರ ನೀಡುತ್ತಿವೆ. ಎಐಎಫ್‌ ಎಫ್‌ನಂತಹ ಹಲವಾರು ಸಂಘ-ಸಂಸ್ಥೆಗಳು ಫುಟ್‌ಬಾಲ್‌ನ ಪ್ರಗತಿಗಾಗಿ ಹಗಲಿರುಳು ಶ್ರಮಿಸುತ್ತಿವೆ. ಆಟಗಾರರು ಉತ್ತಮ ಕೌಶಲಗಳನ್ನು ತಮ್ಮಲ್ಲಿ ವೃದ್ಧಿಸಿಕೊಂಡು ಶ್ರೇಷ್ಠ ಪ್ರದರ್ಶನ ನೀಡಬೇಕು. ಅತ್ಯುತ್ತಮವಾಗಿ ಆಡುವುದಲ್ಲದೆ ಫಿಟ್ನೆಸ್‌ ಕೂಡ ಕಾಪಾಡಿಕೊಳ್ಳುವುದರ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

16ರ ಹರೆಯದ ಬಾಲಕ – ಬಾಲಕಿಯರಿಗಾಗಿ ನಡೆಯುತ್ತಿರುವ ಉಚಿತ ಫುಟ್‌ಬಾಲ್‌ ತರಬೇತಿ ಶಿಬಿರವು ಅ. 17ರಂದು ಆರಂಭವಾಗಿದ್ದು, ಡಿ. 31 ಹಾಗೂ 2023ರ ಜ. 1ರಂದು ನಡೆಯಲಿರುವ ಲೀಗ್‌ ಹಂತದ ನಾಕೌಟ್‌ ಪಂದ್ಯದೊಂದಿಗೆ ಮುಕ್ತಾಯಗೊಳ್ಳಲಿದೆ. 2007ರ ಜ. 1ರ ಬಳಿಕ ಜನಿಸಿದ ಬಾಲಕ ಮತ್ತು ಬಾಲಕಿಯರಿಗೆ ಈ ಶಿಬಿರಗಳಲ್ಲಿ ಭಾಗವಹಿಸಲು ಅವಕಾಶವಿದ್ದು, ಬೊರಿವಲಿ, ವಸಾಯಿ, ವಿರಾರ್‌, ಕಲ್ಯಾಣ್‌, ಕುರ್ಲಾ, ಉಲ್ಲಾಸ್‌ ನಗರ, ಕೊಲಬಾ, ಅಂಧೇರಿ ಮತ್ತು ಮದನ್‌ಪುರ ಹೀಗೆ 8 ಕೇಂದ್ರಗಳಲ್ಲಿ ಶಿಬಿರ ನಡೆಯುತ್ತಿದೆ. ಸಮಾರಂಭದಲ್ಲಿ ಮುನಿಸಿಪಲ್‌ ಮಾಜಿ ಕೌನ್ಸಿಲರ್‌ ಹರೀಶ್‌ ಚೆಡ್ಡಾ ಉಪಸ್ಥಿತರಿದ್ದರು.

ಗಾಡ್‌ ಫ್ರೆ ಪೆರೇರಾ ಅವರು ಆಟಗಾರರಿಗೆ ಉಪಯುಕ್ತ ಸಲಹೆ ನೀಡಿದರು. ಮಹಾರಾಷ್ಟ್ರದ ಮಾಜಿ ಆಟಗಾರ ಹಾಗೂ ಬೊರಿವಲಿ ಕೇಂದ್ರದ ತರಬೇತುದಾರ ಫ್ರಾನ್ಸಿಸ್‌ ನ್ಯೂಸ್‌ ಭಾಗವಹಿಸಿದ್ದರು. ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.

ಸಂಸ್ಥಾಪಕ ಸುರೇಂದ್ರ ಕರ್ಕೇರ : ಮೂಲತಃ ಉಡುಪಿ ಜಿಲ್ಲೆಯ ಕಾಪು ಪೊಲಿಪುವಿನವರಾದ ಸುರೇಂದ್ರ ಕರ್ಕೇರ ಅವರು ಬಿಪಿನ್‌ ಫ‌ುಟ್‌ಬಾಲ್‌ ಅಕಾಡೆಮಿಯ ಸಂಸ್ಥಾಪಕರಾಗಿದ್ದು, ಅಕಾಲಿಕವಾಗಿ ಮರಣ ಹೊಂದಿದ ತನ್ನ ಪುತ್ರನ ನೆನಪಿನಲ್ಲಿ ಅಕಾಡೆಮಿಯನ್ನು ಸ್ಥಾಪಿಸಿ ಅದರ ಮುಖಾಂತರ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತವಾಗಿ ಫ‌ುಟ್‌ಬಾಲ್‌ ತರಬೇತಿ ನೀಡುತ್ತಿದ್ದಾರೆ. ಮಹಾರಾಷ್ಟ್ರ ಫ‌ುಟ್‌ಬಾಲ್‌ ಕ್ಷೇತ್ರದಲ್ಲಿ ಹಲವು ಹುದ್ದೆಗಳನ್ನು ಅಲಂಕರಿಸಿದ ಖ್ಯಾತಿ ಸುರೇಂದ್ರ ಕರ್ಕೇರರಿಗಿದೆ. ಮಹಾರಾಷ್ಟ್ರ ರಾಜ್ಯ ಫ‌ುಟ್‌ಬಾಲ್‌ ಸಂಸ್ಥೆಯ ಆಯ್ಕೆಗಾರರಾಗಿ, ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸಿರುವ ಇವರು, ಮುಂಬಯಿ ಫ‌ುಟ್‌ಬಾಲ್‌ ಅಸೋಸಿಯೇಶನ್‌ನ ಎಕ್ಸಿಕ್ಯುಟಿವ್‌ ಸಮಿತಿಯ ಸದಸ್ಯರಾಗಿ ಹಾಗೂ ಮಹಾರಾಷ್ಟ್ರ ವುಮೆನ್ಸ್‌ ಫ‌ುಟ್‌ಬಾಲ್‌ ಸಂಸ್ಥೆಯ ಸಂಚಾಲಕರಾಗಿಯೂ ಸೇವೆ ಸಲ್ಲಿಸಿದ್ದಾರೆ. 1989ರಲ್ಲಿ ಪ್ರಥಮ ಉಚಿತ ಫ‌ುಟ್‌ಬಾಲ್‌ ತರಬೇತಿ ಶಿಬಿರವನ್ನು ಆರಂಭಿಸಿದ ಸುರೇಂದ್ರ ಕರ್ಕೇರ ಅವರು ಇದರ ಯಶಸ್ಸಿನ ಬಳಿಕ ಪ್ರತೀ ವರ್ಷವೂ ಉಚಿತ ತರಬೇತಿ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.