ತೇಲುವ ವಿದ್ಯುತ್‌ ಸ್ಥಾ ವರ ನಿರ್ಮಾಣಕ್ಕೆ ಮುಂದಾದ ಬಿಎಂಸಿ


Team Udayavani, Dec 3, 2020, 8:37 PM IST

ತೇಲುವ ವಿದ್ಯುತ್‌ ಸ್ಥಾ ವರ ನಿರ್ಮಾಣಕ್ಕೆ ಮುಂದಾದ ಬಿಎಂಸಿ

ಮುಂಬಯಿ, ಡಿ. 2: ಮಧ್ಯ ವೈತರಣಾ ಅಣೆಕಟ್ಟಿನ ಹಿನ್ನೀರಿನಲ್ಲಿ 80 ಮೆಗಾವ್ಯಾಟ್‌ ಸಾಮರ್ಥ್ಯದ ತೇಲುವ ಸೌರ ವಿದ್ಯುತ್‌ ಸ್ಥಾವರವನ್ನು ನಿರ್ಮಿಸಲು ಮುಂಬಯಿ ಮಹಾನಗರ ಪಾಲಿಕೆ ಮುಂದಾಗಿದೆ.

ಈ ತೇಲುವ ಸೌರ ವಿದ್ಯುತ್‌ ಸ್ಥಾವರವು ರಾಷ್ಟ್ರೀಯ ಇಂಧನ ಭದ್ರತಾ ಕಾರ್ಯಕ್ರಮದಡಿ ಅಣೆಕಟ್ಟಿನ ಮೇಲೆ ಹೈಬ್ರಿಡ್‌ ಇಂಧನ ಸೌಲಭ್ಯಗಳ ಅಭಿವೃದ್ಧಿಯ ಭಾಗವಾಗಲಿದೆ. ಎಂಟು ವರ್ಷಗಳ ಹಿಂದೆ ಬಿಎಂಸಿ ಮಧ್ಯ ವೈತರಣಾ ಅಣೆಕಟ್ಟಿನ ಮೇಲೆ ಜಲವಿದ್ಯುತ್‌ ಸ್ಥಾವರವನ್ನು ನಿರ್ಮಿಸಲು ಪ್ರಸ್ತಾವಿಸಿತ್ತು. ಬಳಿಕ ಈ ವರ್ಷ ಮತ್ತೂಮ್ಮೆ ಬಿಎಂಸಿ ತನ್ನ ಬಜೆಟ್‌ನಲ್ಲಿ ಇದನ್ನು ಉಲ್ಲೇಖೀಸಿದ್ದು, ತೇಲುವ ಸೌರ ವಿದ್ಯುತ್‌ ಸ್ಥಾವರವನ್ನು ನಿರ್ಮಿಸಲು ನಿರ್ಧರಿಸಿದೆ.

ಸಂಯೋಜಿತ ಟೆಂಡರ್‌ಗಳ ಆಹ್ವಾನ :

ಚರ್ಚೆಯ ಸಮಯದಲ್ಲಿ ಜಲ ಯೋಜನೆ ನಿಗಮವು ನವೀಕರಿಸಬಹುದಾದ ಇಂಧನ ಮೂಲಗಳತ್ತ ಗಮನ ಹರಿಸಬೇಕು ಎಂದು ತಿಳಿಸಲಾಗಿತ್ತು. ಇದರ ಬಳಿಕ ನೀರು ಸರಬರಾಜು ಮಾಡುವ ಸರೋವರಗಳಲ್ಲಿ ತೇಲುವ ಸೌರ ಫಲಕಗಳನ್ನು ಸ್ಥಾಪಿಸುವಂತಹ ಆಯ್ಕೆಗಳನ್ನು ಅನ್ವೇಷಿಸಲು ಪ್ರಾರಂಭಿಸಿದ್ದೇವೆ. ಕಾರ್ಯಸಾಧ್ಯತೆಯನ್ನು ಪರಿಶೀಲಿಸಲಾಗಿದ್ದು, ಮಧ್ಯ ವೈತರಣಾ ಅಣೆಕಟ್ಟಿನಲ್ಲಿ ಈಗಾಗಲೇ ಜಲ ವಿದ್ಯುತ್‌ ಯೋಜನೆಯನ್ನು ಸ್ಥಾಪಿಸುತ್ತಿರುವುದರಿಂದ ತೇಲುವ ಸೌರ ಫಲಕಗಳನ್ನು ಅಲ್ಲಿ ಸ್ಥಾಪಿಸಬಹುದು ಎಂದು ಕಂಡುಬಂದಿದೆ. ಇದರ ಬಳಿಕ ಎರಡೂ ವಿದ್ಯುತ್‌ ಸ್ಥಾವರಗಳಿಗೆ ಸಂಯೋಜಿತ ಟೆಂಡರ್‌ ಆಹ್ವಾನಿಸಲಾಗಿದೆ ಎಂದು ಡಬ್ಲ್ಯುಎಸ್‌ಪಿ ಇಲಾಖೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

80 ಮೆಗಾವ್ಯಾಟ್‌ ವಿದ್ಯುತ್‌ ಸಾಮರ್ಥ್ಯ :

ದೀರ್ಘ‌ಕಾಲ ಇರುವ ಜಲವಿದ್ಯುತ್‌ ಸ್ಥಾವರವು 20 ಮೆಗಾವ್ಯಾಟ್‌ ಸಾಮರ್ಥ್ಯ ಹೊಂದಿದ್ದರೆ, ತೇಲುವ ಸೌರ ವಿದ್ಯುತ್‌ ಸ್ಥಾವರವು 80 ಮೆಗಾವ್ಯಾಟ್‌ ವಿದ್ಯುತ್‌ ಅನ್ನು ಉತ್ಪಾದಿಸಬಹುದು. ಯೋಜನೆ ಪೂರ್ಣಗೊಳ್ಳಲು 31 ತಿಂಗಳು ತೆಗೆದುಕೊಳ್ಳುತ್ತದೆ. ಒಟ್ಟು 100 ಮೆಗಾವ್ಯಾಟ್‌ಗಳಲ್ಲಿ ದ್ವೀಪ ನಗರ ಮತ್ತು ಅದರ ಸ್ವಂತ ಕಚೇರಿಗಳಲ್ಲಿ ಬೆಸ್ಟ್‌ ವಿದ್ಯುತ್‌ ಸರಬರಾಜನ್ನು  ಹೆಚ್ಚಿಸಲು ಯೋಜಿಸಿದೆ.

25 ವರ್ಷಗಳ ನಿರ್ವಹಣೆಯ ಜವಾಬ್ದಾರಿ :

ಯೋಜನೆಗಾಗಿ ಅಂತಿಮಗೊಳಿಸಿದ ಏಜೆನ್ಸಿ 25 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವ ಹಣೆಯ ಜವಾಬ್ದಾರಿಯನ್ನು ಹೊಂದಿರುತ್ತದೆ. ಪುರಸಭೆ ಹೈಬ್ರಿಡ್‌ ವಿದ್ಯುತ್‌ ಯೋಜನೆಯನ್ನು ಕಾರ್ಯಗತ ಗೊಳಿ ಸು ತ್ತಿರು ವುದು ಇದೇ ಮೊದಲು. ಜಗತ್ತು ನವೀಕರಿ ಸಬಹು ದಾದ ಶಕ್ತಿಯತ್ತ ಸಾಗುತ್ತಿದ್ದು, ಸೌರ ವಿದ್ಯುತ್‌ ಸ್ಥಾವರ ವನ್ನು ಸ್ಥಾಪಿಸುವ ಮೂಲಕ ಬಿಎಂಸಿ ಈಗಾಗಲೇ ಭಾಂಡೂಪ್‌ ವಾಟರ್‌ ಕಾಂಪ್ಲೆಕ್ಸ್‌ನಲ್ಲಿ ಶುದ್ಧ ಶಕ್ತಿಯನ್ನು ಬಳಸಲಾರಂಭಿಸಿದೆ. ಯೋಜನೆಗೆ ಗುತ್ತಿಗೆದಾರರನ್ನು ನೇಮಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಡಬ್ಲ್ಯುಎಸ್‌ಪಿ ಇಲಾಖೆಯ ಹಿರಿಯ ಅಧಿಕಾರಿ ಹೇಳಿ¨ªಾರೆ.

ಪ್ರತೀದಿನ 455 ಮಿಲಿಯನ್‌ ಲೀಟರ್‌ ನೀರು ಪೂರೈಕೆ :

ಕಳೆದ ವರ್ಷ ವಾರ್ಧಾ, ಬೆಬಾಲಾ, ಖಡಕ್ಪುರ ಮತ್ತು ಪೆಂಟಕ್ಲಿ ಅಣೆಕಟ್ಟುಗಳ ಹಿನ್ನೀರಿನಲ್ಲಿ ತೇಲುವ ಸೌರ ಫಲಕಗಳನ್ನು ಸ್ಥಾಪಿಸಲು ರಾಜ್ಯ ಸರಕಾರ ಯೋಜಿಸಿತ್ತು. ಮಧ್ಯ ವೈತರಣಾ ಅಣೆಕಟ್ಟಿನ ನಿರ್ಮಾಣ 2012ರಲ್ಲಿ ಪೂರ್ಣಗೊಂಡಿದೆ. ಅಣೆಕಟ್ಟಿನ ಎತ್ತರ 102.4 ಮೀ. ಇದ್ದು, ಈ ಅಣೆಕಟ್ಟಿನಿಂದ ಮುಂಬಯಿಗೆ ಪ್ರತೀದಿನ 455 ಮಿಲಿಯನ್‌ ಲೀಟರ್‌ ನೀರು ಸರಬರಾಜಾಗುತ್ತಿದೆ. ಬಿಎಂಸಿ ಮೊದಲಿನಿಂದಲೂ ಜಲ ಯೋಜನೆ ಬಗ್ಗೆ ಉತ್ಸುಕವಾಗಿದ್ದರೂ ರಾಜ್ಯವು ಅನುಮತಿ ನೀಡಲು ನಿರಾಕರಿಸಿತ್ತು. 2017ರಲ್ಲಿ ಬಿಎಂಸಿ ಯೋಜನೆಯ ಕುರಿತು ವರದಿ ತಯಾರಿಸಲು ನೇಮಕಗೊಂಡ ಸಲಹೆಗಾರರ ಒಪ್ಪಂದವನ್ನು ರದ್ದುಗೊಳಿಸಿತು. ಕಳೆದ ವರ್ಷ ಮಹಾ ವಿಕಾಸ್‌ ಅಘಾಡಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ಬಗ್ಗೆ ಮತ್ತೆ ಚರ್ಚೆ ಪ್ರಾರಂಭವಾಯಿತು. 2019ರ ಡಿಸೆಂಬರ್‌ನಲ್ಲಿ ಅಣೆಕಟ್ಟಿನಲ್ಲಿ ವಿದ್ಯುತ್‌ ಉತ್ಪಾದನೆ ಮಾಡುವ ಬಿಎಂಸಿ ಯೋಜನೆಯನ್ನು ಸಿಎಂ ಠಾಕ್ರೆ ಅನುಮೋದಿಸಿದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.