ಬಿಎಂಸಿ ಹೊಸ ಮಾರ್ಗಸೂಚಿ: ಕಡಿಮೆಯಾಗುತ್ತಿದೆ ಐಸಿಯು ಹಾಸಿಗೆಗಳ ಬೇಡಿಕೆ

| ಐದು ಸಾವಿರಕ್ಕೂ ಹೆಚ್ಚು ಕರೆಗಳು | ಆ್ಯಂಬುಲೆನ್ಸ್‌ ತಂಡಗಳ ನೇಮಕ

Team Udayavani, May 1, 2021, 9:54 AM IST

ಬಿಎಂಸಿ ಹೊಸ ಮಾರ್ಗಸೂಚಿ: ಕಡಿಮೆಯಾಗುತ್ತಿದೆ ಐಸಿಯು ಹಾಸಿಗೆಗಳ ಬೇಡಿಕೆ

ಮುಂಬಯಿ: ಕೋವಿಡ್‌ ರೋಗಿಗಳಿಗೆ ಸಮರ್ಪಕವಾಗಿ ಹಾಸಿಗೆ ಗಳನ್ನು ಹಂಚಿಕೆ ಮಾಡಲು ಹೊಸ ಮಾರ್ಗಸೂಚಿ ಹೊರಡಿಸಿದ ನಾಲ್ಕು ದಿನಗಳ ಬಳಿಕ ಐಸಿಯು ಹಾಸಿಗೆಗಳ ಬೇಡಿಕೆ ಕ್ರಮೇಣ ಕಡಿಮೆಯಾಗುತ್ತಿದೆ ಎಂದು ಬಿಎಂಸಿ ಅಧಿಕಾರಿಗಳು ಹೇಳಿದ್ದಾರೆ.

ಹಾಸಿಗೆಗಳನ್ನು ಹಂಚುವ ಮೊದಲು ರೋಗಲಕ್ಷಣವಿರುವ ಕೋವಿಡ್‌ ರೋಗಿ ಗಳ ವೈದ್ಯಕೀಯ ತಪಾಸಣೆಯ ಮಾನ ದಂಡಗಳು ಹಾಸಿಗೆಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡಲು ಕಾರಣವಾಗಿದ್ದು, ಐಸಿಯು, ಆಮ್ಲಜನಕ ಮತ್ತು ವೆಂಟಿಲೇಟರ್‌ ಹಾಸಿಗೆಗಳನ್ನು ನಿರ್ಣಾಯಕ ರೋಗಿಗಳಿಗೆ ಮಾತ್ರ ಉಳಿಸಲಾಗುತ್ತಿದೆ ಎಂದು ಮುಂಬಯಿ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಐದು ಸಾವಿರಕ್ಕೂ ಹೆಚ್ಚು ಕರೆಗಳು :

ಕಳೆದ ಮೂರು ತಿಂಗಳಲ್ಲಿ ಕೋವಿಡ್‌ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು, ರೋಗಿಗಳು ಹಾಸಿಗೆ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ ಎಂಬ ವರದಿಗಳು ಮತ್ತು ದೂರುಗಳಿವೆ. ಬಿಎಂಸಿ ಸಹಾಯವಾಣಿ ಸಂಖ್ಯೆ 1916ಗೆ ಈ ಮೊದಲು ಪ್ರತೀದಿನ 2,500 ಕರೆಗಳು ಬರುತ್ತಿದ್ದವು.  ಪ್ರಸ್ತುತ ಕರೆಗಳ ಸಂಖ್ಯೆ ದಿನಕ್ಕೆ 5,000ಕ್ಕೂ ಹೆಚ್ಚಿದೆ. ಇದರ ಪರಿಣಾಮ ಹಾಸಿಗೆ ಹಂಚಿಕೆಗೆ ಈ ಹಂತವು ಸಹಾಯ ಮಾಡುತ್ತದೆ ಎಂದು ಬಿಎಂಸಿ ತಿಳಿಸಿದೆ.

ಎಲ್ಲ ವಾರ್ಡ್‌ಗಳಲ್ಲಿ 10 ತಂಡ :

ಎಲ್ಲ  24 ವಾರ್ಡ್‌ಗಳಿಗೆ ಸ್ಟ್ಯಾಂಡ್‌ಬೈನಲ್ಲಿ  ಪ್ರತೀ ವಾರ್ಡ್‌ಗೆ 10 ಆ್ಯಂಬುಲೆನ್ಸ್‌ಗಳಿರುವ 10 ತಂಡಗಳನ್ನು ಹೊಂದಲು ನಿರ್ದೇಶಿಸಲಾಗಿದೆ. ಇವರಲ್ಲಿ ವೈದ್ಯರು ಸಹಿತ ಸಿಬಂದಿಯು ರೋಗಿಗಳಿರುವ ಮನೆಗಳಿಗೆ ಭೇಟಿ ನೀಡುತ್ತಾರೆ. ಈ ರೋಗಿಗಳಿಗೆ ಅವರ ಅಗತ್ಯತೆ ಮತ್ತು ವೈದ್ಯಕೀಯ ಸ್ಥಿತಿಗೆ ಅನುಗುಣವಾಗಿ ಅವರ ವೈದ್ಯಕೀಯ ಸ್ಥಿತಿಯ ವಿವರಣೆಗಳೊಂದಿಗೆ ಹಾಸಿಗೆಗಳನ್ನು ನೀಡಲಾಗುತ್ತದೆ.

ರೋಗ ಲಕ್ಷಣ ಇರುವವರಿಗೆ ಮಾತ್ರ ಪರೀಕ್ಷೆ :

ನಾವು ಹಾಸಿಗೆಗಳ ಸಂಪೂರ್ಣ ವ್ಯವಸ್ಥೆ ಯನ್ನು ಜಾರಿಗೆ ತರಲು ಬಯಸಿದ್ದೇವೆ. ಹಾಸಿಗೆಗಳ ಪ್ರಕಾರಗಳನ್ನು ಸೂಕ್ಷ್ಮವಾಗಿ ಗಮನಿಸು ತ್ತಿದ್ದೇವೆ. ರೋಗಿಗಳು ಮತ್ತು ಅವರ ಸಂಬಂಧಿಕರು ತಮ್ಮ ರೋಗಲಕ್ಷಣಗಳನ್ನು ಉಲ್ಲೇಖೀಸಿ ಹಾಸಿಗೆಗಳನ್ನು ಕೋರುವ ಮೊದಲು ಪಾಸಿಟಿವ್‌ ಪರೀಕ್ಷೆಗೆ ಒಳಗಾದ ರೋಗಿ ಗಳಿಗೆ ಪ್ರತ್ಯೇಕ ಹಾಸಿಗೆಗಳನ್ನು ವ್ಯವಸ್ಥೆ ಮಾಡ ಲಾಗಿದೆ. ರೋಗಲಕ್ಷಣ ಇರುವ ರೋಗಿಗಳ ವೈದ್ಯಕೀಯ ತಪಾಸಣೆ ನಡೆಸುವುದು ಪರಿ ಹಾರ ಎಂದು ನಾವು ಭಾವಿಸಿದ್ದೇವೆ ಎಂದು ಬಿಎಂಸಿ ಆರೋಗ್ಯ ವಿಭಾಗದ ಹೆಚ್ಚುವರಿ ಆಯುಕ್ತ ಸುರೇಶ್‌ ಕಾಕಾನಿ ಹೇಳಿದ್ದಾರೆ.

ಹೊಸ ಮಾರ್ಗಸೂಚಿ :

ಪರಿಣಾಮಕಾರಿ ಹಾಸಿಗೆ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ರೋಗಿಗಳನ್ನು ಅವರ ಮನೆಯಲ್ಲಿಯೇ ವೈದ್ಯಕೀಯ ಸಿಬಂದಿ ಪರೀಕ್ಷಿಸಿದ ಬಳಿಕವೇ ರೋಗಲಕ್ಷಣವಿರುವ ಕೋವಿಡ್‌ ರೋಗಿಗಳಿಗೆ ಹಾಸಿಗೆಯನ್ನು ಒದಗಿಸಲು ಮುಂಬಯಿ ಮಹಾನಗರ ಪಾಲಿಕೆ ಕಳೆದ ಶುಕ್ರವಾರ ನಿರ್ಧರಿಸಿದೆ. ಇದಕ್ಕಾಗಿ ಎ. 25ರಿಂದ ಜಾರಿಗೆ ಬರುವಂತೆ ಆಸ್ಪತ್ರೆಗಳಲ್ಲಿ ಕೋವಿಡ್‌ ರೋಗಿಗಳನ್ನು ದಾಖಲಿಸಲು ಬಿಎಂಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿತ್ತು.

ಪ್ರತೀ ವಾರ್ಡ್‌ಗಳಿಗೆ ಒಟ್ಟು ಹತ್ತು ತಂಡಗಳು  ಅಂದರೆ 240 ವೈದ್ಯಕೀಯ ಸಿಬಂದಿಯನ್ನು ನಿಯೋಜಿಸಲಾಗಿದೆ. ಹಾಸಿಗೆಗಳನ್ನು ಹಂಚುವ ಮೊದಲು ರೋಗಲಕ್ಷಣವಿರುವ ಪ್ರತಿ ರೋಗಿಯ ವೈದ್ಯಕೀಯ ತಪಾಸಣೆಗಾಗಿ ಮನೆಗೆ ಭೇಟಿ ನೀಡಲಾಗುತ್ತಿದೆ. ಅಂದರೆ ದಿನಕ್ಕೆ ಸುಮಾರು 1,000 ಅಥವಾ ಹೆಚ್ಚಿನ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಆ ಸಂದರ್ಭ ರೋಗಿ ತುರ್ತು ಸ್ಥಿತಿಯಲ್ಲಿದ್ದರೆ ತಂಡವು ಅವರನ್ನು ಪರೀಕ್ಷಿಸುವಾಗ ನಿರ್ಣಾಯಕ ಸಮಯವನ್ನು ಕಳೆದುಕೊಳ್ಳಬೇಕಾಗುತ್ತದೆ. ತುರ್ತು ಅಗತ್ಯವಿರುವವರಿಗೆ ಬಿಎಂಸಿ ತುರ್ತು ಸಂದರ್ಭದಲ್ಲಿ ವಿನಾಯಿತಿಗಳನ್ನು ನೀಡಬೇಕಾಗುತ್ತದೆ.ಡಾ| ಯು. ಎ. ಮೆಹ್ತಾ, ನಗರದ ವೈದ್ಯ

ಹಾಸಿಗೆ ಹಂಚಿಕೆಗಾಗಿ ಹೊಸ ಮಾರ್ಗಸೂಚಿ ಜಾರಿಗೆ ತಂದ ಕೆಲವೇ ದಿನಗಳಲ್ಲಿ ವೈದ್ಯಕೀಯ ತಪಾಸಣೆ ಬಳಿಕ ಹಾಸಿಗೆಗಳನ್ನು ಹಂಚಿಕೆ  ಮಾಡಲಾಗಿದೆ. ಇದರಿಂದ ಐಸಿಯು ಹಾಸಿಗೆಗಳ ಬೇಡಿಕೆಯು ಕ್ರಮೇಣ ಕ್ಷೀಣಿಸುತ್ತಿದೆ. ರೋಗಿಗಳು ಮತ್ತು ಅವರ ಸಂಬಂಧಿಕರು ಐಸಿಯು ಹಾಸಿಗೆಗಳಿಗೆ ಆದ್ಯತೆ ನೀಡಿದರೂ ಅವರನ್ನು ಕೂಲಂಕುಷವಾಗಿ ಪರೀಕ್ಷಿಸಿದ ಬಳಿಕ ಹಾಸಿಗೆಗಳನ್ನು ನಿರ್ಧರಿಸಲಾಗುತ್ತಿದೆ. ಎಲ್ಲಿ ಸಮಸ್ಯೆಗಳಿವೆ ಎಂಬುದನ್ನು ಗಮನಿಸಿ ಅದನ್ನು ಸರಿಪಡಿಸಲಾಗುತ್ತಿದೆ. ರೋಗಿಗಳಿಗೆ ಅವರ ಹಾಸಿಗೆ ಲಭ್ಯವಾಗುವಂತೆ ಮಾಡಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ.ಸುರೇಶ್‌ ಕಾಕಾನಿ, ಹೆಚ್ಚುವರಿ ಆಯುಕ್ತರು, ಮುಂಬಯಿ ಮಹಾನಗರ ಪಾಲಿಕೆ

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.