ಬೊಯಿಸರ್ ಶ್ರೀ ನಿತ್ಯಾನಂದ ಸ್ವಾಮಿ ಮಂದಿರ:ಪ್ರತಿಷ್ಠಾ ವರ್ಧಂತಿ
Team Udayavani, Jan 1, 2019, 11:15 AM IST
ಮುಂಬಯಿ: ಬೊಯಿಸರ್ ಪಶ್ಚಿಮದ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿ ಮಂದಿರದ ಎಂಟನೇ ವಾರ್ಷಿಕ ಪ್ರತಿಷ್ಠಾಪನ ಮಹೋತ್ಸವವು ಡಿ. 27 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಧಾರ್ಮಿಕ ಕಾರ್ಯಕ್ರಮವಾಗಿ ಪ್ರಾತಃಕಾಲದಿಂದ ಗಣಹೋಮ, ಕಲಶಾಭಿಷೇಕ ಹಾಗೂ ಶ್ರೀ ಸತ್ಯನಾರಾಯಣ ಮಹಾಪೂಜೆಯು ವಿವಿಧ ವಿಧಿ-ವಿಧಾನಗಳೊಂದಿಗೆ ನೆರವೇರಿತು. ಪುರೋಹಿತರಾದ ಹರೀಶ್ ಶಾಂತಿ, ರಾಜೇಶ್ ಶಾಂತಿ ಅವರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಸದ್ಗುರು ನಿತ್ಯಾನಂದರ ನೂತನ ಉತ್ಸವ ಮೂರ್ತಿಯನ್ನು ಬೊಯಿಸರ್ ಹೊಟೇಲ್ ಉದ್ಯಮಿ ಪ್ರವೀಣ್ ವಾಸು ಶೆಟ್ಟಿ ಅವರು ಅರ್ಪಿಸಿದರು. ನಿತ್ಯಾನಂದ ಭಕ್ತ ಮಂಡಳಿಯ ಸುಹಾಸಿನಿ ಡಿ. ನಾೖಕ್, ಸತ್ಯಾ ಕೋಟ್ಯಾನ್, ರಮಾನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಸತ್ಯಾ ಕೋಟ್ಯಾನ್ ಮತ್ತು ಪ್ರವೀಣ್ ಶೆಟ್ಟಿ ಅವರು ಕಲಶಾಭಿಷೇಕ ಸೇವೆಯನ್ನು ಮಾಡಿದರು. ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಶ್ರೀ ನಿತ್ಯಾನಂದ ಸ್ವಾಮಿಗಳ ಭಕ್ತಾದಿಗಳು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ತುಳು-ಕನ್ನಡಿಗರು, ಸ್ಥಳೀಯ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಚಿತ್ರ-ವರದಿ : ಪಿ. ಆರ್. ರವಿಶಂಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ