![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಬೋಂಬೆ ಬಂಟ್ಸ್ ಅಸೋಸಿಯೇಶನ್ಯುವ ವಿಭಾಗ: ರಕ್ತದಾನ ಶಿಬಿರ
Team Udayavani, Aug 23, 2018, 1:35 PM IST
![2108mum09.jpg](https://www.udayavani.com/wp-content/uploads/2018/08/23/2108mum09.jpg)
ನವಿ ಮುಂಬಯಿ: ಬೋಂಬೆ ಬಂಟ್ಸ್ ಅಸೋಸಿಯೇಶನ್ ಯುವ ವಿಭಾಗದ ವತಿಯಿಂದ ರಕ್ತದಾನ ಶಿಬಿರವು ಆ. 15 ರಂದು ಜೂಯಿ ನಗರದಲ್ಲಿರುವ ಅಸೋಸಿಯೇಶನ್ನ ಬಂಟ್ಸ್ ಸೆಂಟರ್ನಲ್ಲಿ ನಡೆಯಿತು.
72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನೆರವೇರಿದ ರಕ್ತದಾನ ಶಿಬಿರವು ಬೋಂಬೆ ಬಂಟ್ಸ್ ಅಸೋಸಿಯೇಶನ್ ಬಂಟ್ಸ್ ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ ಇದರ ಪ್ರೋತ್ಸಾಹದೊಂದಿಗೆ ನೆರವೇರಿತು. ಶಿಬಿರವನ್ನು ಅಪೊಲೋ ಆಸ್ಪತ್ರೆ ನವಿಮುಂಬಯಿ ಇದರ ವೈದ್ಯರ ತಂಡವು ನಡೆಸಿಕೊಟ್ಟಿತು.
ಬೋಂಬೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ನ್ಯಾಯವಾದಿ ಸುಭಾಶ್ ಶೆಟ್ಟಿ ಅವರು ಶಿಬಿರವನ್ನು ಉದ್ಘಾಟಿಸಿದರು. ಸಮಿತಿಯ ಸದಸ್ಯರು, ನೀಲೇಶ್ ಕದಮ್, ಅಪೊಲೊ ಆಸ್ಪತ್ರೆಯ ತಂಡದವರಾದ ಚೇತನ್ ಗೋಸ್ವಾಮಿ, ಡಾ| ಪುನೀತ್ ಜೈನ್, ಬ್ಲಿಡ್ ಬ್ಯಾಂಕ್ನ ಪದಾಧಿಕಾರಿಗಳು ಹಾಗೂ ಯುವ ವಿಭಾಗ, ಮಹಿಳಾ ವಿಭಾಗದ ಸದಸ್ಯ-ಸದಸ್ಯೆಯರು, ಬೋಂಬೆ ಬಂಟ್ಸ್ ಅಸೋಸಿಯೇಶನ್ ಬಂಟ್ಸ್ ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ನ ವಿದ್ಯಾರ್ಥಿಗಳು, ಹಿತೈಷಿಗಳು, ಸಮಾಜ ಬಾಂಧವರು ಉಪಸ್ಥಿತರಿದ್ದರು.
ಬೆಳಗ್ಗೆ ಧ್ವಜಾರೋಹಣದ ಆನಂತರ ಶಿಬಿರವು ಪ್ರಾರಂಭಗೊಂಡಿತು. ಶಿಬಿರದಲ್ಲಿ 69 ಯುನಿಟ್ ರಕ್ತ ಸಂಗ್ರಹಗೊಂಡಿದ್ದು, ರಕ್ತದಾನಿಗಳಿಗೆ ಪ್ರಮಾಣ ಪತ್ರ, ಡೊನೇಶನ್ ಕಾರ್ಡ್ ಇತ್ಯಾದಿಗಳನ್ನು ನೀಡಲಾಯಿತು. ಯುವ ವಿಭಾಗದ ಕಾರ್ಯಾಧ್ಯಕ್ಷ ಚರಣ್ ಆರ್. ಶೆಟ್ಟಿ ಅವರ ನೇತೃತ್ವದಲ್ಲಿ ಆ. 1ರಂದು ಯುವ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ತುರ್ತು ಪರಿಸ್ಥಿತಿಯಲ್ಲಿ ಇತರರ ಜೀವವನ್ನು ರಕ್ಷಣೆ ಮಾಡುವ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ನೀಲೇಶ್ ಕದಂ, ಡಾ| ಅನುಪ್ರೀತಾ ಹರ್ನೆ, ತಂಡದವರು ಸಹಕರಿಸಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.