ಸಮಸ್ಯೆ ಪ‌ರಿಹಾರಕ್ಕೆ ಸುಲಭ ಮಾರ್ಗ ಕಂಡುಕೊಳ್ಳುವುದು ಅಗತ್ಯ


Team Udayavani, Aug 29, 2017, 3:29 PM IST

28mum08A.jpg

ಮುಂಬಯಿ: ಸಮಾಜದಲ್ಲಿ ಸಂಸ್ಕೃತಿ, ಸಂಸ್ಕಾರದ ಕೊರತೆ ಮತ್ತು ಕಾನೂನಿನ ಅರಿವಿಲ್ಲದೆ ಜನಸಾಮಾನ್ಯರು ಮನಬಂದಂತೆ ವರ್ತಿಸಿ, ಅನಂತರ ಜೀವನದಲ್ಲಿ ಸಿಕ್ಕಿಹಾಕಿಕೊಂಡು ಪರದಾಡುತ್ತಾರೆ. ನ್ಯಾಯಾಂಗದ ಬಾಗಿಲು ಹತ್ತದೆ ನಮ್ಮ ಸಮಸ್ಯೆಗಳಿಗೆ ಪರಿಹಾರದ ಸೂಕ್ತ ಮಾರ್ಗ ಯಾವುದೆಂದು ಕಂಡು ಹುಡುಕಿಕೊಳ್ಳುವುದು ಇಂದಿನ ದಿನಗಳಲ್ಲಿ ಬಹಳ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಳೆದ  ಅನೇಕ ವರ್ಷಗಳಿಂದ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಕಾನೂನು ಮತ್ತು ಸಂವಿಧಾನ ಸಮಿತಿ ಈ ಕಾನೂನು ಸಲಹಾ ಶಿಬಿರ ಎಂಬ ಅರ್ಥಪೂರ್ಣ ಕಾರ್ಯಕ್ರಮವನ್ನು ಏರ್ಪಡಿಸಿ ಜನಸಾಮಾನ್ಯರಿಗೆ ಮಾರ್ಗದರ್ಶನ ನೀಡುತ್ತಿದೆ. ಇಂತಹ ಅತ್ಯಗತ್ಯದ ಶಿಬಿರಗಳನ್ನು ನಗರದ ಇತರ ಸಂಘ-ಸಂಸ್ಥೆಗಳು ಏರ್ಪಡಿಸುವುದಕ್ಕೆ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಬಂಟ್ಸ್‌ ನ್ಯಾಯ ಮಂಡಳಿಯ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ನುಡಿದರು.

ಆ. 19ರಂದು ಸಂಜೆ ಸಾಯನ್‌ನ ಸ್ವಾಮಿ ವಿವೇಕಾನಂದ ಸಭಾಗೃಹದಲ್ಲಿ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ನ ಕಾನೂನು ಮತ್ತು ಸಂವಿಧಾನ ಉಪಸಮಿತಿಯ ಕಾರ್ಯಾಧ್ಯಕ್ಷ ಡಿ. ಕೆ. ಶೆಟ್ಟಿ ಅವರ ನೇತೃತ್ವದಲ್ಲಿ ಆಯೋಜಿಸಲ್ಪಟ್ಟ ಕಾನೂನು ಸಲಹಾ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ದೀಪ ಪ್ರಜ್ವಲಿಸಿ ಶಿಬಿರವನ್ನು ಸಾಂಕೇತಿಕವಾಗಿ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ವಿವಾಹ ವಿಚ್ಛೇದನ ಮತ್ತು ಕೌಟುಂಬಿಕ ಆಸ್ತಿ ವಿವಾದಗಳು ಹೆಚ್ಚಾಗುವುದಕ್ಕೆ ನಮ್ಮಲ್ಲಿನ ಸಂಸ್ಕೃತಿ, ಸಂಸ್ಕಾರದ ಕೊರತೆಯೇ ಪ್ರಮುಖ ಕಾರಣ ಎಂದರು.

ಕಾನೂನು ಮತ್ತು ಸಂವಿಧಾನ ಉಪಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಡಿ.ಕೆ. ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತ, ಯುವ ಪೀಳಿಗೆಯು ದಾರಿ ತಪ್ಪಿ ಹೋಗದಂತೆ ಎಚ್ಚರಿಕೆಯ ಘಂಟೆ ಎಂಬಂತೆ ಈ ಶಿಬಿರವನ್ನು ಏರ್ಪಡಿಸಿದ್ದೇವೆ. ಜೊತೆಗೆ ಹಿರಿಯರು ಪತ್ನಿ, ಮಕ್ಕಳ ಅಥವಾ ರಕ್ತ ಸಂಬಂಧಿಗಳ ನಡುವೆ ಭಿನ್ನಾಭಿಪ್ರಾಯ ಉದ್ಭವ ಆಗದಂತೆ ನೋಡಿಕೊಳ್ಳಬೇಕಾದ ಪ್ರಾಮುಖ್ಯ ವಿಷಯಗಳ ಬಗ್ಗೆ ಮಾಹಿತಿಯನ್ನು ಒದಗಿಸಿಕೊಡುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಮನೆ ಮಂದಿಗಳ ನಡುವಿನ ಸಂಬಂಧ ಖಾಯಂ ಆಗಿ ಉಳಿಯಬೇಕು. ವೈವಾಹಿಕ ಸಂಬಂಧ ಜೀವನ ಪರ್ಯಂತ ಉಳಿಯಬೇಕು. ಸಮಾಜ ಬೆಳೆದು ನಿಂತು ಇತರರಿಗೆ ಆದರ್ಶ ಸಮಾಜವೆಂದು ಗುರುತಿಸಿಕೊಳ್ಳುವಂತಾಗಬೇಕು ಎಂಬ ನಿಟ್ಟಿನಲ್ಲಿ ಈ ಸಮಾಜರಹಿತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಶಿಬಿರಕ್ಕೆ ಸಹಕರಿಸಿದ ಎಲ್ಲರಿಗೂ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಚಿರಋಣಿ ಎಂದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಅಸೋಸಿಯೇಶನ್‌ನ ಅಧ್ಯಕ್ಷ  ನ್ಯಾಯವಾದಿ ಉಪ್ಪೂರು ಶೇಖರ್‌ ಶೆಟ್ಟಿ ಅವರು ಮಾತನಾಡಿ, ನಮ್ಮ ಸಮಾಜದ ಜನರಲ್ಲಿ ಯಮ್ಮ ಕಠಿಣ ಪರಿಶ್ರಮ ಮತ್ತು ದೈವ ದೇವರ ಅನುಗ್ರಹ ಹಾಗೂ ವ್ಯವಹಾರದ ಜ್ಞಾನ ಭಂಡಾರ ಇರುವುದರಿಂದ ಶ್ರೀಮಂತಿಕೆ ಮೈಗೂಡಿಸಿಕೊಂಡಿದೆ. ಆದರೆ, ಕಾನೂನು, ಸಂಸ್ಕಾರ, ಸಂಸ್ಕೃತಿಯ ಅರಿವು ಸ್ವಲ್ಪ ಕಡಿಮೆ ಇರುವುದರಿಂದ ನಾವು ಕೆಲವೊಮ್ಮೆ ಹೆಜ್ಜೆ ತಪ್ಪುತ್ತೇವೆ. ನಮ್ಮ ಸಮಾಜ ಹೆಜ್ಜೆ ತಪ್ಪಬಾರದು. ಅಡಿಪಾಯ ಗಟ್ಟಿಯಾಗಿರಬೇಕು. ಹಿರಿಯರು, ಯುವಕರು, ಯುವತಿಯರು ಮತ್ತು ಮಹಿಳೆಯರು ಎಲ್ಲರನ್ನು ಒಂದೇ ಕಡೆ ಒಟ್ಟುಗೂಡಿಸಿ ಕಾನೂನು ಸಲಹಾ ಶಿಬಿರ ಎಂಬ ಆಶ್ರಯದ ನೆರಳನ್ನು ನೀಡುವ ಪ್ರಯತ್ನವನ್ನು ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಡುತ್ತಾ ಬಂದಿದೆ. ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸದಸ್ಯರು ಮಾತ್ರವಲ್ಲದೆ ಇನ್ನಿತರ ಸಮಾಜ ಬಾಂಧವರು ಸ್ಪಂದಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು.

ಉಮಾ ಕೆ. ಶೆಟ್ಟಿ ಮತ್ತು ಗೀತಾ ಡಿ. ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಅತಿಥಿಗಳು ಅಧ್ಯಕ್ಷಕರು ದೀಪ ಪ್ರಜ್ವಲಿಸಿ ಚಾಲನೆ ನೀಡಿದ ಈ ಶಿಬಿರದಲ್ಲಿ ನಗರದ ಖ್ಯಾತ ವಕೀಲರು ಮಾತ್ರವಲ್ಲದೆ, ಸಾಮಾಜಿಕ ಚಿಂತಕರೂ ಆಗಿರುವ ನಚಿಕೇತ್‌ ಡಿ. ಜಯವಂತ್‌ ಅವರು ಉಪನ್ಯಾಸ ನೀಡುತ್ತಾ, ಜನಸಾಮಾನ್ಯರು ಆರೋಗ್ಯದ ಬಗ್ಗೆ ಯಾವ ಯಾವ ರೀತಿಯಲ್ಲಿ ನಿರ್ಲಕ್ಷé ವಹಿಸುತ್ತಾರೆ. ಅದರಿಂದಾಗುವ ದುಷ್ಪರಿಣಾಮಗಳೇನೆಂಬುದರ ಬಗ್ಗೆ, ಮೂಲ ಅಪರಾಧ ಮತ್ತು ಬಾಲ ಅಪರಾಧ ಮತ್ತದರ ಕಾನೂನು ಕ್ರಮ ಏನು ? ಮತ್ತು ಹೇಗೆಂಬುದರ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು.

ಇನ್ನೋರ್ವ ವಕೀಲ ಅಡ್ವೊಕೇಟ್‌ ಕೆ. ಬಾಲಕೃಷ್ಣ ಅಡ್ಯಂತಾಯ ಅವರು ಉಪನ್ಯಾಸ ನೀಡುತ್ತ, ಇಂದಿನ ದಿನಗಳಲ್ಲಿ ವಿವಾಹ ಸಂಬಂಧದ ತಕರಾರು, ಕೌಟುಂಬಿಕ ಆಸ್ತಿ ವಿವಾದಗಳು ಹೆಚ್ಚಾಗುವುದಕ್ಕೆ ಕಾರಣಗಳೇನು ? ಹಾಗೂ ಅದರ ಪರಿಹಾರ ಮಾರ್ಗ ಯಾವುದೆಂಬುದರ ಬಗ್ಗೆ ಹತ್ತಾರು ಉದಾಹರಣೆಗಳನ್ನು ನೀಡಿ, ನ್ಯಾಯಾಲಯದ ಮೆಟ್ಟಿಲು ಹತ್ತದೆ, ನಮ್ಮ ನಮ್ಮೊಳಗೆ ಹೊಂದಾಣಿಕೆ ಮಾಡಿಕೊಂಡು ಇತ್ಯರ್ಥಗೊಳಿಸುವುದು ಸೂಕ್ತ ಮಾತ್ರವಲ್ಲದೆ, ಅರೋಗ್ಯಕರ ಎಂದು ತಿಳಿಸಿದರು.

ಉಪನ್ಯಾಸಕರನ್ನು, ಅತಿಥಿಯನ್ನು, ಅಧ್ಯಕ್ಷರು ಮತ್ತು  ಪದಾಧಿಕಾರಿಗಳು ಹೂಗುತ್ಛ ನೀಡಿ ಗೌರವಿಸಿದರು.

ಯುವ ವಿಭಾಗದ ಕಾರ್ಯಾಧ್ಯಕ್ಷೆ ವೈಶಾಲಿ ಎಚ್‌. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ್‌ ಎಸ್‌. ಶೆಟ್ಟಿ, ಮಾಜಿ ಅಧ್ಯಕ್ಷ ಎನ್‌. ಸಿ. ಶೆಟ್ಟಿ ಅವರು ಉಪನ್ಯಾಸಕರು ಮತ್ತು ಅತಿಥಿ ಗಣ್ಯರ ಪರಿಚಯ ಮಾಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ಅಡ್ವೊಕೇಟ್‌ ಸುಭಾಷ್‌ ಶೆಟ್ಟಿ ಮತ್ತು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಜೆ. ಶೆಟ್ಟಿ ಉಪಸ್ಥಿತರಿದ್ದರು. ಅಡ್ವೊಕೇಟ್‌ ಅಶೋಕ್‌ ಡಿ. ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.