ಸಂಬಂಧಗಳ ಇರಿಸುವಿಕೆಗೆ ದೊಡ್ಡ ಮನಸ್ಸು ಬೇಕು: ತೋನ್ಸೆ


Team Udayavani, Jan 1, 2020, 5:59 PM IST

mumbai-tdy-1

ಮುಂಬಯಿ, ಡಿ. 31: ಇಂದು ಎರಡು ಕೃತಿಗಳ ಮೂಲಕ ಒಂದೊಂದು ವಿಷಯಗಳು ಲೋಕಾರ್ಪಣೆಗೊಂಡಿವೆ. ಸಂಬಂಧಗಳನ್ನು ಇಟ್ಟುಕೊಳ್ಳಬೇಕಾದರೆ ದೊಡ್ಡ ಮನಸ್ಸು ಬೇಕು. ಮುಂಬಯಿ ತುಳು ಸಾಹಿತ್ಯ ಕಂಡ ಒಂದು ವಿರಾಟ್‌ ರೂಪ ಶಿಮಂತೂರು ಅವರದ್ದು. ಇಂದು ನಮಗೆ ವಿಚಾರದ ಕೊರತೆ ಇದೆ. ಬದುಕು ಕಟ್ಟುವ ನಾವೂ ಇಂತಹ ಕೃತಿಗಳಿಂದ ವಿಚಾರಗಳನ್ನು ಓದಿ ಮನನ ಮಾಡಬೇಕು ಎಂದು ಕಲಾ ಜಗತ್ತು (ರಿ.) ಮುಂಬಯಿ ಸಂಸ್ಥೆಯ ಅಧ್ಯಕ್ಷ ಡಾ| ತೋನ್ಸೆ ವಿಜಯ ಕುಮಾರ್‌ ಶೆಟ್ಟಿ ತಿಳಿಸಿದರು.

ಡಿ. 28ರಂದು ಸಂಜೆ ಸಾಂತಾ ಕ್ರೂಜ್‌ ಪೂರ್ವದಲ್ಲಿನ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸಭಾಗೃಹದಲ್ಲಿ ಪೂಜಾ ಪ್ರಕಾಶನ ಮುಂಬಯಿ ಪ್ರಕಾಶಿತ ಪ್ರಶಸ್ತಿ ಪುರಸ್ಕೃತ ಕವಿ ಶಿಮಂತೂರು ಚಂದ್ರಹಾಸ ಸುವರ್ಣ ರಚಿತ ವೈಚಾರಿಕ ಲೇಖನಗಳ ಸಂಕಲನ “ಹಿಲಾಲು’ ಹಾಗೂ ಪ್ರಶಸ್ತಿ ವಿಜೇತ ಕವಯತ್ರಿ, ಲೇಖಕಿ ಶಾರದಾ ಆನಂದ್‌ ಅಂಚನ್‌ ರಚಿತ ವೈದ್ಯಕೀಯ ಲೇಖನಗಳ ಸಂಕಲನ “ಆರೋಗ್ಯ-ಆಯುಷ್ಯ’ ಕೃತಿಗಳ ಬಿಡುಗಡೆ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲಿಸಿ ಚಾಲನೆಯನ್ನಿತ್ತು ಸಭಾ ಧ್ಯಕ್ಷತೆ ವಹಿಸಿ ವಿಜಯ ಕುಮಾರ್‌ ಶೆಟ್ಟಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಅಧ್ಯಕ್ಷ ಸುರೇಂದ್ರಕುಮಾರ್‌ ಹೆಗ್ಡೆ ಮುಖ್ಯ ಅತಿಥಿಯಾಗಿದ್ದರು. ಅತಿಥಿ ಅಭ್ಯಾಗತರಾಗಿದ್ದ ಗೋರೆಗಾಂವ್‌ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ರಮೇಶ್‌ ಶೆಟ್ಟಿ ಪಯ್ನಾರು ಅವರು “ಹಿಲಾಲು’ ಕೃತಿ ಮತ್ತು “ಆರೋಗ್ಯ-ಆಯುಷ್ಯ’ ಕೃತಿಯನ್ನು ಏಕಕಾಲಕ್ಕೆ ಬಿಡುಗಡೆಗೊಳಿಸಿದರು. ಮೊಗವೀರ ಮಾಸಿಕದ ಸಂಪಾದಕ ಹಾಗೂ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎಸ್‌.ಸುವರ್ಣ ಪುಸ್ತಕಗಳನ್ನು ಪರಿಚಯಿಸಿದರು. ತುಳು ನಾಡಿಗೆ, ಸಂಸ್ಕೃತಿಗೆ ಆಚಾರ ವಿಚಾರಗಳಿಗೆ ಸಂಬಂಧಿಸಿದ ವಿಷಯ ಗಳನ್ನು ಅನುಭವಿಸಿ ಬರೆದಂತಹ ಕೃತಿಗಳು ಇಂದು ಬಿಡುಗಡೆಗೊಂಡವುಗಳು. ಆದ್ದರಿಂದಲೇ ಇವು ಅತ್ಯು ತ್ತಮ ಕೃತಿಗಳಾಗಿ ಮೂಡಿಬಂದಿವೆ ಎಂದು ಸುರೇಂದ್ರಕುಮಾರ್‌ ತಿಳಿಸಿದರು.

ರಮೇಶ್‌ ಶೆಟ್ಟಿ ಶಿಮಂತೂರು ಹಾಗೂ ಶಾರದಾ ಅಂಚನ್‌ ಈಗಾಗಲೇ ಸಾರಸ್ವತ ಲೋಕಕ್ಕೆ ವೈವಿಧ್ಯಪೂರ್ಣವಾದ ಕೃತಿಗಳನ್ನು ನೀಡಿದ್ದಾರೆ. ಸುಮಾರು ಹದಿ ನೇಳು ಕೃತಿಗಳನ್ನು ನೀಡಿರುವ ಶಿಮಂತೂರು ನನ್ನಂಥವರಿಗೆ ಗುರು ಸ್ಥಾನದಲ್ಲಿರುವವರು ಎಂದು ಇಬ್ಬರಿಗೂ ಶುಭವನ್ನು ಕೋರಿದರು. ಅಶೋಕ್‌ ಸುವರ್ಣ ಮಾತನಾಡಿ ಊರಿನ ಕಟ್ಟುಕಟ್ಟಲೆಗಳಲ್ಲಿ ಬರುವ ‘ಹಿಲಾಲು ಪವಿತ್ರವಾದ ಒಂದು ಧಾರ್ಮಿಕ ಕ್ರಿಯೆ. ಅದನ್ನು ದಾಖಲಿಸುವ ಕೆಲಸ ಶಿಮಂತೂರು ಈ ಕೃತಿಯಲ್ಲಿ ಮಾಡಿದ್ದಾರೆ. ತುಳುನಾಡಿನ ಬಗ್ಗೆ ಅಧ್ಯಯನ ಮಾಡುವವರಿಗೆ ಒಂದು ಆಕರ ಗ್ರಂಥವಾಗಬಲ್ಲ ಈ ಕೃತಿ ಶಿಮಂತೂರು ಅವರ ಇತರ ಕೃತಿಗಳಿಗಿಂತ ಬಹಳ ಮಹತ್ವದ ಕೃತಿ ಎಂದು ಶಿಮಂತೂರು ಅವರ ಹಿಲಾಲು ಕೃತಿ ಪರಿಚಯಿಸಿದರು.

ಪೂಜಾ ಪ್ರಕಾಶನದ ಪ್ರಕಾಶಕ, ಕೃತಿಕಾರ ಚಂದ್ರಹಾಸ ಸುವರ್ಣ ಮತ್ತು ಕೃತಿಕರ್ತೆ ಶಾರದಾ ಅಂಚನ್‌ ಸಾಂದರ್ಭಿಕವಾಗಿ ಮಾತನಾಡಿ ಅಭಿಪ್ರಾಯ ವ್ಯಕ್ತಪಡಿಸಿ ತಮ್ಮ ಕೃತಿಗಳು ಹೊರ ಬರಲು ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಅಭಿನಯ ಸಾಮ್ರಾಜ್ಯ (ರಿ.) ಮುಂಬಯಿ ಮತ್ತು ಪೇಜಾವರ ಮಠ ಮುಂಬಯಿ ಶಾಖೆ ಸಹಯೋಗದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಹಲವಾರು ಲೇಖಕರು, ಸಾಹಿತ್ಯಾಭಿಮಾನಿ ಗಳು ಉಪಸ್ಥಿತರಿದ್ದು ಕೃತಿಕಾರರನ್ನು ಅಭಿನಂದಿಸಿದರು. ಶಾರದಾ ಎ. ಅಂಚನ್‌ ಪ್ರಾರ್ಥನೆಗೈದರು. ಪೂಜಾ ಪ್ರಕಾಶನದ ಸರಸ್ವತಿ ಸಿ. ಸುವರ್ಣ, ಆನಂದ್‌ ಅಂಚನ್‌, ಪೂಜಾಶ್ರೀ ಹರ್ಷಿದ್‌, ಹರ್ಷ ಪಾಲನ್‌, ಹೇಮಾ ಹರಿದಾಸ್‌, ಲಲಿತಾ ಕೋಟ್ಯಾನ್‌, ಅನುರಾಗ್‌ ಆನಂದ್‌ ಅಂಚನ್‌ ಅತಿಥಿಗಳಿಗೆ ಪುಷ್ಪಗುತ್ಛ ವನ್ನಿತ್ತು ಗೌರವಿಸಿದರು. ನವೀನ್‌ ಕರ್ಕೇರ ಸುಖಾಗಮನ ಬಯಸಿ, ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ಕೃಷ್ಣ ರಾಜ್‌ ಸುವರ್ಣ ವಂದಿಸಿದರು.

 

 ಚಿತ್ರ-ವರದಿ: ರೋನ್ಸ್‌ ಬಂಟ್ವಾಳ

Ad

ಟಾಪ್ ನ್ಯೂಸ್

Kharge-CM-Siddu

ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ  ಮಾತುಕತೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

xi-Jinping

ಚೀನದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಆಧಿಪತ್ಯ ಅಂತ್ಯ?

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

Madan-Gopal

ಪ್ರತಿಭೆಗೆ ಮುಕ್ತ ಅವಕಾಶ, ಸಾಧನೆಯೇ ಮೆರಿಟ್‌: ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌

Eshwar-Khndre

ಮೈಸೂರು, ಬನ್ನೇರುಘಟ್ಟ ಮೃಗಾಲಯದ ಪ್ರವೇಶ ಶುಲ್ಕ ಹೆಚ್ಚಳ: ಸಚಿವ ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಥಾ ಸರಣಿ ಭಾಗ 7-ಕೊನೆಗೂ ಭೀಷ್ಮ ಅಬ್ಬರಿಸಿದ್ದ; ಸ್ವಯಂವರದಲ್ಲಿ ಪರಾಕ್ರಮಿ ಭೀಷ್ಮ

ಕಥಾ ಸರಣಿ ಭಾಗ 7-ಕೊನೆಗೂ ಭೀಷ್ಮ ಅಬ್ಬರಿಸಿದ್ದ; ಸ್ವಯಂವರದಲ್ಲಿ ಪರಾಕ್ರಮಿ ಭೀಷ್ಮ

ಹೆಗಲ ಮೇಲಿನ ಶಾಲು

ಹೆಗಲ ಮೇಲಿನ ಶಾಲು

ಪುಣೆಯ ಮಕ್ಕಳ ತಜ್ಞ ಡಾ| ಸುಧಾಕರ್‌ ಶೆಟ್ಟಿಯವರಿಗೆ ಸಮಾಜ ಭೂಷಣ ಪ್ರ ಶಸ್ತಿ ಪ್ರದಾನ

ಪುಣೆಯ ಮಕ್ಕಳ ತಜ್ಞ ಡಾ| ಸುಧಾಕರ್‌ ಶೆಟ್ಟಿಯವರಿಗೆ ಸಮಾಜ ಭೂಷಣ ಪ್ರ ಶಸ್ತಿ ಪ್ರದಾನ

Foreign Life: ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು!

Foreign Life: ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು!

Scuba Diving: ಪೆಸಿಫಿಕ್‌ ಮಹಾಸಾಗರದೊಳಗೆ ಮೊದಲ ಸ್ಕೂಬಾ ಡೈವ್‌

Scuba Diving: ಪೆಸಿಫಿಕ್‌ ಮಹಾಸಾಗರದೊಳಗೆ ಮೊದಲ ಸ್ಕೂಬಾ ಡೈವ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kharge-CM-Siddu

ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ  ಮಾತುಕತೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

Shivalingegowda

Congress Govt: ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ: ಶಿವಲಿಂಗೇಗೌಡ

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

xi-Jinping

ಚೀನದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಆಧಿಪತ್ಯ ಅಂತ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.