ಬೊರಿವಲಿ ಶ್ರೀ ಅಷ್ಟ ವಿನಾಯಕ ಅಯ್ಯಪ್ಪ ಭಕ್ತವೃಂದದಿಂದ ಅರಸಿನ ಕುಂಕುಮ


Team Udayavani, Jan 22, 2019, 12:47 PM IST

11.jpg

ಮುಂಬಯಿ: ಬದಲಾವಣೆಯ ಬದುಕಿನಲ್ಲಿ ತಾರತಮ್ಯಕ್ಕೆ ಮಹತ್ವ ನೀಡದೆ ಸಂಸ್ಕೃತಿಯ ವಿನಿಮಯದ ಜೊತೆಗೆ ಬದಲಾವಣೆ ಯನ್ನು ಮುಂದಿನ ಜನಾಂಗಕ್ಕೆ ಹಸ್ತಾಂತರಿಸುವಲ್ಲಿ ನಾವೆಲ್ಲ ಸಿದ್ಧರಾಗಿರಬೇಕು. ಮಕ್ಕಳು ಇಂದು ಬದಲಾವಣೆ ಬಯಸುತ್ತಿರುವ ಸಕಾಲದಲ್ಲಿ ನಮ್ಮ ಸಮಾಜದ ಸ್ಥಿತಿಗತಿಗಳನ್ನು ಅರ್ಥೈಯಿಸಿಕೊಂಡು ಮುನ್ನಡೆಯುವ ಕಾಲ ಒದಗಿ ಬಂದಿದೆ. ಆದ್ದರಿಂದ ಪ್ರತಿಯೋರ್ವ ಮಹಿಳೆಯರು ತಮ್ಮ ಬದುಕಿನ ಬದಲಾವಣೆಯತ್ತ ಹೆಚ್ಚು ಗಮನ ಹರಿಸಬೇಕು ಎಂದು ಲೇಖಕಿ, ಕವಿ ಅರುಷಾ ಎನ್‌. ಶೆಟ್ಟಿ ನುಡಿದರು.

ಜ. 14ರಂದು ಬೊರಿವಲಿಯ ಓಲ್ಡ್‌ ಎಂಎಚ್‌ಬಿ ಕಾಲನಿಯಲ್ಲಿನ ಶ್ರೀ ಅಷ್ಟ ವಿನಾಯಕ ಅಯ್ಯಪ್ಪ ಭಕ್ತವೃಂದ ಮಹಿಳೆಯರಿಗಾಗಿ ಆಯೋಜಿಸಿದ ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಧನುರಾಶಿಯಿಂದ ಸೂರ್ಯನು ಮಕರ ರಾಶಿ ಸ್ಥಾನಪಲ್ಲಟಗೊಳ್ಳುವ ಈ ಸಮಯ ಎಲ್ಲ ಕಾರ್ಯಗಳಿಗೆ ಶುಭ ಸಮಯವಾಗಿದ್ದು, ಉತ್ತರಾಯಣದ ಪರ್ವಕಾಲದಲ್ಲಿ ದಾನ-ಧರ್ಮದ ಮೂಲಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಉತ್ತಮ.  ಮಹಿಳೆಯರು ಭೇದ-ಭಾವ ಇಲ್ಲದೆ, ಇಂತಹ ಕಾರ್ಯಕ್ರಮಗಳಲ್ಲಿ ಸಮಾನತೆಯಿಂದ  ತೊಡಗಿಸಿಕೊಳ್ಳ ಬೇಕು ಎಂದು ನುಡಿದರು.

ಇನ್ನೋರ್ವ ಅತಿಥಿ ಲೇಖಕಿ ಲತಾ ಸಂತೋಷ್‌ ಶೆಟ್ಟಿ ಅವರು ಮಾತನಾಡಿ, ಅರಸಿನ ಕುಂಕುಮ ನಮ್ಮ ಭಾರತೀಯ ಪರಂಪರೆಯ ಸರ್ವಧರ್ಮದ ಸಂಕೇತ. ಹಿಂದು, ಮುಸ್ಲಿಂ, ಕ್ರಿಶ್ಚಿಯನ್‌ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅರಸಿನ ಕುಂಕುಮಕ್ಕೆ ಮಹತ್ವವಿದೆ. ಹಿರಿಯರಿಂದ ಬಂದ ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸುವ ಮೂಲಕ ನಾವು ನಮ್ಮೊಂದಿಗೆ ಬೆಳೆಸಬೇಕು. ಮರಾಠಿ ಮಣ್ಣಿನಲ್ಲಿ ಈ ಸಂಸ್ಕೃತಿಯನ್ನು ಅವರಿಗಿಂತ ಹೆಚ್ಚಾಗಿ ಅದ್ದೂರಿಯಾಗಿ ಆಚರಿಸುತ್ತಿರುವುದು ವಾಸ್ತವ. ಎಲ್ಲಿ ಭಜನೆ ಇದೆಯೋ ಅಲ್ಲಿ ವಿಭಜನೆಯಿಲ್ಲ. ಈ ಭಜನ ಕಾರ್ಯಕ್ರಮಗಳು ಹೊಸ ತಲೆಮಾರಿಗೆ ಒಂದು ಕೊಡುಗೆಯಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಾಜ ಸೇವಕಿ, ಚಾರ್‌ಕೋಪ್‌ ಕನ್ನಡಿಗರ ಬಳಗದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪದ್ಮಾವತಿ ಬಿ. ಶೆಟ್ಟಿ ಅವರು ಮಾತನಾಡಿ, ಹಿಂದು ಸಂಸ್ಕೃತಿಯ ಪ್ರಕಾರ ಹೆಣ್ಮಕ್ಕಳು ಮಾತೃಭಾವದ ಸಂಕೇತ. ಧಾರ್ಮಿಕತೆಯತ್ತ ಹೆಚ್ಚು ಪ್ರಭಾವಿತರಾದಾಗ ಸಂಸ್ಕೃತಿ, ಸಂಸ್ಕಾರಕ್ಕೆ ಹೊಸ ರೂಪುರೇಷೆ ದೊರೆಯುತ್ತದೆ. ಬದಲಾವಣೆಯ ಕಾಲಘಟ್ಟದಲ್ಲಿ ಮಹಿಳೆಯರು ಸಂಸ್ಕಾರದಿಂದ ದೂರ ಉಳಿಯುತ್ತಿರು ವುದು ವಿಷಾದನೀಯ. ಪ್ರತೀ ಯೋರ್ವ ಮಹಿಳೆಯರು ಅರಸಿನ- ಕುಂಕುಮವನ್ನು ಹಾಕಿ ತಾನೋರ್ವೆ ಪ್ರಕೃತಿಯ ಸೌಮ್ಯತೆಯನ್ನು ಪ್ರದರ್ಶಿಸಲು ಮುಂದಾಗಬೇಕು ಎಂದು ಹೇಳಿದರು.

ಕವಿ, ಲೇಖಕ ಶಿಮಂತೂರು ಚಂದ್ರಹಾಸ ಸುವರ್ಣ ಅವರು ಮಾತನಾಡಿ, ಅರಸಿನ ಕುಂಕುಮ ಮುತ್ತೆ$çದೆಯರಿಗೆ ಮೀಸಲು ಎಂದು ಒಪ್ಪಲು ಸಾಧ್ಯವಿಲ್ಲ. ಇದೊಂದು ಮಹಿಳೆಯರು ಸಮಾನತೆಯನ್ನು ಪ್ರದರ್ಶಿಸುವ ಕಾರ್ಯಕ್ರಮವಾಗಬೇಕು. ಹೆಣ್ಣು ಹೆಣ್ಣಿಗೆ ಶತ್ರುವಾಗಬಾರದು. ಎಲ್ಲಕ್ಕಿಂತ ಮುಖ್ಯವಾಗಿ ಅರಸಿನ ಕುಂಕುಮ ಕಾರ್ಯಕ್ರಮ ನಮ್ಮ ಸಂಸ್ಕೃತಿಯಲ್ಲ ಎಂದು ನನ್ನ ಅನಿಸಿಕೆಯಾಗಿದೆ ಎಂದರು.

ಭಕ್ತವೃಂದ ಮಹಿಳಾ ಸದಸ್ಯೆಯರುಗಳಾದ ಕುಸುಮಾ ಅಮೀನ್‌, ರತ್ನಾ ಪೂಜಾರಿ, ಸುಲೋಚನಾ ಕುಕ್ಯಾನ್‌, ಹರಿಣಾ ಕೆ. ಸುವರ್ಣ, ವೇದಾ ಶೆಟ್ಟಿ, ದಯಾವತಿ ಶೇರ್ವೆಗಾರ್‌ ಅತಿಥಿಗಳನ್ನು ಶಾಲು ಹೊದೆಸಿ ಗೌರವಿಸಿದರು. ವೃಂದದ ಅಧ್ಯಕ್ಷ ಪ್ರವೀಣ್‌ ಶೆಟ್ಟಿ, ಸುರೇಶ್‌ ಗುರುಸ್ವಾಮಿ ಅವರನ್ನು  ಗೌರವಿಸಲಾಯಿತು. ಪ್ರಾರಂಭದಲ್ಲಿ ಮಹಿಳೆಯರಿಂದ ಭಜನ ಕಾರ್ಯಕ್ರಮ ನಡೆಯಿತು.

ಪರಿಸರದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಮಂದಿರದಲ್ಲಿ ವಿಶೇಷ ದೀಪಾಲಂಕಾರ, ಪೂಜೆ, ಪ್ರಸಾದ ವಿತರಣೆ ನಡೆಯಿತು. ವೃಂದದ ಸದಸ್ಯ ಶಿಮಂತೂರು ಪ್ರವೀಣ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವೇದಿಕೆಯಲ್ಲಿ ಲೀಲಾವತಿ ಎನ್‌. ಆಚಾರ್ಯ, ಲಕ್ಷ್ಮೀ  ಜಿ. ದೇವಾಡಿಗ, ಸಮಾಜ ಸೇವಕಿ ವಿಜಯಲಕ್ಷ್ಮೀ ಶೆಟ್ಟಿ, ರತ್ನಾ ಪೂಜಾರಿ, ಮಾಧುರಿ ಪೆಡೆ°àಕರ್‌ ಉಪಸ್ಥಿತರಿದ್ದರು.

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.