ಬೊರಿವಲಿ ವ್ಯಾಪಾರಿ ಸಮುದಾಯದಿಂದ ಗೋಪಾಲ್ ಶೆಟ್ಟಿಯವರಿಗೆ ಅಭಿನಂದನೆ
Team Udayavani, Jun 16, 2019, 3:36 PM IST
ಮುಂಬಯಿ: ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದಿಂದ ಸತತ 2ನೇ ಬಾರಿಗೆ ಪ್ರಚಂಡ ಬಹುಮತಗಳಿಂದ ಜಯ ಭೇರಿಗಳಿಸಿದ ಸಂಸದ ಗೋಪಾಲ್ ಸಿ. ಶೆಟ್ಟಿ ಅವರಿಗೆ ಬೊರಿವಲಿಯ ಸಮಸ್ತ ವ್ಯಾಪಾರಿ ಸಮುದಾಯದ ವತಿಯಿಂದ ಜೂ. 12ರಂದು ಬೊರಿವಲಿ ಪಶ್ಚಿಮದ ಮೆಗಾ ಮಧುರಮ್ ಬ್ಯಾಂಕ್ವೆಟ್ ಹಾಲ್ನಲ್ಲಿ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಬೊರಿವಲಿಯ ಸಮಾಜ ಸೇವಕ ಬಾಲಾಜಿ ಕನ್ಸ್ಟ್ರಕ್ಷನ್ನ ಗೋಪಾಲಕೃಷ್ಣ ಶೆಟ್ಟಿ, ಬಿಜೆಪಿಯ ಉತ್ತರ ಮುಂಬಯಿ ಜಿಲ್ಲಾ ಕಾರ್ಯದರ್ಶಿ ವಸಂತ್ ಎಚ್. ಶೆಟ್ಟಿ ಹಾಗೂ ಪರಿಚಯ್ ಗ್ರೂಪ್ನ ಚಂದ್ರಕಾಂತ್ ಭಾಯಿ, ಆಶಾಪುರ ಸಾರೀಸ್ನ ಹರಕ್ಚಂದ್ ಭಾಯಿ, ಆದರ್ಶ್ ಸ್ವೀಟ್ಸ್ನ ಜಯೇಶ್ ಛೆಡ್ಡಾ ಭಾಯಿ, ರಾಜೇಂದ್ರ ಫುಡ್ ಇದರ ಉಮೇಶ್ ಕಾಮತ್ ಮತ್ತು ಬೊರಿವಲಿಯ ಸಮಸ್ತ ಚಿಲ್ಲರೆ ವ್ಯಾಪಾರಸ್ಥರು ಹಾಗೂ ಅಭಿಮಾನಿಗಳು ಸಂಸದ ಗೋಪಾಲ್ ಶೆಟ್ಟಿ ಮತ್ತು ಉಷಾ ಗೋಪಾಲ್ ಶೆಟ್ಟಿ ದಂಪತಿಯನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು.
ಅಪಾರ ಸಂಖ್ಯೆಯಲ್ಲಿ ಗೋಪಾಲ್ ಶೆಟ್ಟಿ ಅವರ ಅಭಿಮಾನಿಗಳು, ಹಿತೈಷಿಗಳು, ಬಿಜೆಪಿಯ ಕಾರ್ಯಕರ್ತರು, ತುಳು-ಕನ್ನಡಿಗರು, ಇತರ ಭಾಷಿಗರು ಪಾಲ್ಗೊಂಡು ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ದ್ವಿತೀಯ ಬಾರಿಗೆ ಭಾರೀ ಮತಗಳ ಅಂತರದಿಂದ ಜಯಗಳಿಸಿದ ಗೋಪಾಲ್ ಸಿ. ಶೆಟ್ಟಿ ಅವರ ಸಿದ್ಧಿ-ಸಾಧನೆಗಳನ್ನು ಪ್ರಶಂಶಿಸಿ ಅಭಿನಂದಿಸಿ ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು