ಬಿಎಸ್‌ಕೆಬಿಎ ಗೋಕುಲ ಯುವ ವಿಭಾಗದಿಂದ ವಾರ್ಷಿಕ ಕ್ರೀಡೋತ್ಸವ


Team Udayavani, Jan 10, 2019, 10:46 AM IST

0801mum03.jpg

ಮುಂಬಯಿ: ಬಿಎಸ್‌ಕೆಬಿ ಅಸೋಸಿಯೇಶನ್‌ ಮುಂಬಯಿ ಗೋಕುಲ ಸಯಾನ್‌ ಇದರ ಯುವ ವಿಭಾಗದ ವತಿಯಿಂದ ಕ್ರೀಡೋತ್ಸವವು   ವಡಾಲದ  ರಾಷ್ಟ್ರೀಯ ಕನ್ನಡ ಶಿಕ್ಷಣ ಸಂಸ್ಥೆ (ಎನ್‌ಕೆಇಎಸ್‌) ಮೈದಾನದಲ್ಲಿ ನೆರವೇರಿತು.

ಸದಸ್ಯ ಬಾಂಧವರ 3 ವರ್ಷದ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೆ ಯುವ ವಿಭಾಗದ ಅಧ್ಯಕ್ಷ ಹರಿದಾಸ್‌ ಭಟ್‌ ನೇತೃತ್ವದಲ್ಲಿ ವಿವಿಧ ಸ್ಪರ್ಧೆಗಳೊಂದಿಗೆ ಕ್ರೀಡಾಕೂಟ   ಆಯೋಜಿಸಲಾಗಿದ್ದು ಬಿಎಸ್‌ಕೆಬಿಎ ಅಧ್ಯಕ್ಷ ಡಾ| ಸುರೇಶ್‌  ಎಸ್‌. ರಾವ್‌ ಕಟೀಲು ಉದ್ಘಾಟಿಸಿದರು.

ಯುವ ವಿಭಾಗದ ಸಂಚಾಲಕ  ನಾರಾಯಣ ಮೂರ್ತಿ ಹಾಗೂ ಕಾರ್ಯಕರ್ತೆ ಶ್ರೀಲಕ್ಷಿ ¾ ಉಡುಪ ಅವರ  ಮುಂದಾಳತ್ವದಲ್ಲಿ ಹಲವಾರು  ಆಟೋಟ ಸ್ಪರ್ಧೆಗಳು ಜರಗಿದವು. ಅಧ್ಯಕ್ಷ ಡಾ| ಸುರೇಶ್‌  ಎಸ್‌. ರಾವ್‌ ಕಟೀಲು, ಉಪಾಧ್ಯಕ್ಷ  ವಾಮನ್‌ ಹೊಳ್ಳ, ಗೌರವ ಕಾರ್ಯದರ್ಶಿ ಎ. ಪಿ. ಕೆ. ಪೋತಿ ಅವರು ವಿಜೇತರಿಗೆ ಬಹುಮಾನ ವಿತರಿಸಿ ಅಭಿನಂದಿಸಿದ‌ರು.

ಇದೇ ಸಂದರ್ಭದಲ್ಲಿ ಸುರೇಶ್‌ ರಾವ್‌  ಮಾತನಾಡಿ, ಕ್ರೀಡಾ ಚಟುವಟಿಕೆಗಳು ಮನಸ್ಸಿಗೆ ಮತ್ತು ದೇಹಕ್ಕೆ ಚೈತನ್ಯ ತುಂಬುತ್ತವೆ. ಇದು ಪ್ರಕೃತಿ ಸಹಜ ಶಕ್ತಿ ತುಂಬುವ ಕಲೆಯೂ ಹೌದು. ಕ್ರೀಡೆಯಿಂದ ಆರೋಗ್ಯ ಸುಧಾರಣೆ ಜತೆಗೆ ಮನಸ್ಸುಗಳೂ ಸ್ವಸ್ಥಗೊಳ್ಳುತ್ತವೆ. ಆದುದರಿಂದ ನಾವೆಲ್ಲರೂ ಕ್ರೀಡೆಗೆ ಹೆಚ್ಚು ಮಹತ್ವ ನೀಡೋಣ ಎಂದು ಸ್ಪರ್ಧಾಳುಗಳನ್ನು ಅಭಿನಂದಿಸುತ್ತಾ ಗೋಕುಲ ಕಟ್ಟಡ ನಿರ್ಮಾಣ ಕಾರ್ಯದ ಸದ್ಯದ ಪ್ರಗತಿಯ ಬಗ್ಗೆ ವಿವರವಾಗಿ ತಿಳಿಸಿ,  ಯೋಜನೆಯ ಯಶಸ್ಸಿಗೆ ಸರ್ವರ ಸಹಕಾರ ಕೋರುತ್ತಾ,  ಸಣ್ಣ ಉಳಿತಾಯದ ಮೂಲಕ ನಿಧಿ ಸಂಗ್ರಹಿಸುವ ಪ್ರಯುಕ್ತ ಹಲವು ಸದಸ್ಯರಿಗೆ ಹುಂಡಿಯನ್ನು ವಿತರಿಸಿದ ಅವರು ಕ್ರೀಡಾಳುಗಳಿಗೆ  ಶುಭಹಾರೈಸಿದರು.

ಶ್ರೀಲಕ್ಷ್ಮೀ ಉಡುಪ  ವಿಜೇತರ ಯಾದಿಯನ್ನು ವಾಚಿಸಿದರು. ವಿಜೇತ ಬಾಲಕ  ಶ್ರೀಕೃಷ್ಣ  ಉಡುಪ ಸೇರಿದಂತೆ  ಇತರ ವಿಜೇತರೂ, ಹಲವಾರು ಸದಸ್ಯರು ತಮ್ಮ ಬಹುಮಾನದ ಮೊತ್ತವನ್ನು ನಿರ್ಮಾಣ ಹಂತದಲ್ಲಿರುವ ಗೋಕುಲದ ಪುನರ್‌ ನಿರ್ಮಾಣ ಯೋಜನೆಗೆ ದೇಣಿಗೆಯನ್ನಿತ್ತು ಎಲ್ಲರ ಮೆಚ್ಚುಗೆಗೆ ಪಾತ್ರರಾದರು.  ಹರಿದಾಸ್‌ ಭಟ್‌  ಹಾಗೂ  ಗುರುರಾಜ್‌  ಭಟ್‌   ಆಟೋಟ ಸ್ಪರ್ಧೆಗಳನ್ನು ನಿರ್ವಹಿಸಿದರು. ಕಾರ್ಯಕಾರಿ ಸಮಿತಿಯ ಸದಸ್ಯರಾದ  ಪ್ರಶಾಂತ್‌ ಹೆರ್ಲೆ, ಉಮೇಶ್‌ ರಾವ್‌,  ಸಹನಾ ಪೋತಿ,  ಪ್ರೇಮಾ ಬಿ. ರಾವ್‌.  ಸಪ್ನಾ ಭಟ್‌, ಚಂದ್ರಾವತಿ ರಾವ್‌, ಪಿ. ಸಿ. ಎನ್‌. ರಾವ್‌, ಕುಸುಮ್‌ ಶ್ರೀನಿವಾಸ್‌,  ಶಶಿಧರ್‌ ರಾವ್‌, ಶಾಂತಿಲಕ್ಷ್ಮೀ ಉಡುಪ, ಹರಿಶ್ಚಂದ್ರ ರಾವ್‌, ಪ್ರಸಾದ್‌ ನಿಂಜೂರ್‌ ಹಾಗೂ ಯುವ ವಿಭಾಗದ ಕಾರ್ಯಕರ್ತರು ಉಪಸ್ಥಿತರಿದ್ದು ಸಹಕರಿಸಿದರು. ಎ. ಪಿ. ಕೆ. ಪೋತಿ ವಂದಿಸಿದರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡಾಸ್ಫೂರ್ತಿ ಮೆರೆದರು.
 

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.