ಬಂಟರ ಸಂಘ ಮುಂಬಯಿ: ನೂತನ ವಿಶ್ವಸ್ತರ ನೇಮಕ
Team Udayavani, Aug 8, 2017, 4:14 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ವಿಶ್ವಸ್ತರಾದ ಕೃಷ್ಣ ವೈ. ಶೆಟ್ಟಿ, ಎಂ. ಡಿ. ಶೆಟ್ಟಿ ಹಾಗೂ ಶಿವರಾಮ ಕೆ. ಶೆಟ್ಟಿ ಅವರು ಇತ್ತೀಚೆಗೆ ಸೇವಾವಧಿಯಿಂದ ನಿವೃತ್ತರಾದ ಸಂದರ್ಭದಲ್ಲಿ ಅವರ ಸ್ಥಾನಕ್ಕೆ ಬಂಟರ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಆಲ್ಕಾರ್ಗೋ ಲಾಜಿಸ್ಟಿಕ್ಸ್ ಲಿಮಿಟೆಡ್ ಇದರ ಸಿಎಂಡಿ ಶಶಿಕಿರಣ್ ಶೆಟ್ಟಿ, ಹೊಟೇಲ್ ಸನ್ಸಿಟಿ ಇದರ ಸಿಎಂಡಿ ಶಾಂತಾರಾಮ ಕೆ. ಶೆಟ್ಟಿ ಇವರನ್ನು 2017ರಿಂದ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಬಂಟರ ಸಂಘದ ನೂತನ ವಿಶ್ವಸ್ತರನ್ನಾಗಿ ಆಯ್ಕೆ ಮಾಡಲಾಯಿತು.
ಆ. 7ರಂದು ಕುರ್ಲಾ ಪೂರ್ವದ ಬಂಟರ ಸಂಘದ ಕಾನ್ಫರೆನ್ಸ್ ಹಾಲ್ನಲ್ಲಿ ಜರಗಿದ ವಿಶ್ವಸ್ತರ ಸಭೆಯಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಅವರು ನೂತನ ವಿಶ್ವಸ್ತರನ್ನು ಪುಷ್ಪಗುತ್ಛವನ್ನಿತ್ತು ಸ್ವಾಗತಿಸಿದರಲ್ಲದೆ, ನಿಕಟಪೂರ್ವ ವಿಶ್ವಸ್ತರಿಗೆ ಪುಷ್ಪಗುತ್ಛವನ್ನಿತ್ತು ಕೃತಜ್ಞತೆ ಸಲ್ಲಿಸಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಮೋಹನ್ದಾಸ್ ಎನ್. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್. ಶೆಟ್ಟಿ, ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಆರ್. ಸಿ. ಶೆಟ್ಟಿ, ಡಾ| ಪಿ. ವಿ. ಶೆಟ್ಟಿ, ಐಕಳ ಹರೀಶ್ ಶೆಟ್ಟಿ, ಸಿಎ ಶಂಕರ್ ಬಿ. ಶೆಟ್ಟಿ, ವಿಶ್ವಸ್ತರಾದ ರಘುರಾಮ ಶೆಟ್ಟಿ ಅವೆನ್ಯೂ, ಚಂದ್ರಹಾಸ್ ಕೆ. ಶೆಟ್ಟಿ, ಜಯರಾಮ ಎನ್. ಶೆಟ್ಟಿ, ಲತಾ
ಜಯರಾಮ ಶೆಟ್ಟಿ, ಸದಾನಂದ ಶೆಟ್ಟಿ ರಿಲಾಯೆಬಲ್ಸ್ ಅವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…