ಬಂಟ್ಸ್ ಅಸೋಸಿಯೇಶನ್ ಪುಣೆ ವಾರ್ಷಿಕೋತ್ಸವ, ಸಮ್ಮಾನ
Team Udayavani, Jan 10, 2018, 12:29 PM IST
ಪುಣೆ: ಬಂಟ್ಸ್ ಅಸೋಸಿಯೇಶನ್ ಪುಣೆ ಇದರ ಏಳನೇ ವಾರ್ಷಿಕೋತ್ಸವ ಸಮಾರಂಭವು ಜ. 3 ರಂದು ನಗರದ ತಿಲಕ್ರೋಡ್ನ ತಿಲಕ್ ಸ್ಮಾರಕ್ ಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಬಂಟ್ಸ್ ಅಸೋಸಿಯೇಶನ್ ಪುಣೆ ಇದರ ಅಧ್ಯಕ್ಷ ನಾರಾಯಣ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಮಾಜದ ವಿಶೇಷ ಸಾಧಕರಾದ ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೆàರ್ ಟ್ರಸ್ಟ್ ಇದರ ಅಧ್ಯಕ್ಷ ಹಾಗೂ ಶ್ರೀ ದೇವಿ ಎಜುಕೇಶನ್ ಟ್ರಸ್ಟ್ ಮಂಗಳೂರು ಇದರ ಕಾರ್ಯಾಧ್ಯಕ್ಷ ಎ. ಸದಾನಂದ ಶೆಟ್ಟಿ ಹಾಗೂ ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ ಹಾಗೂ ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷರಾದ ಸದಾನಂದ ಕೆ. ಶೆಟ್ಟಿ ಅವರನ್ನು ಸಂಘದ ವತಿಯಿಂದ ಶಾಲು ಹೊದೆಸಿ, ಸ್ಮರಣಿಕೆ, ಫಲಪುಷ್ಪ, ಸಮ್ಮಾನ ಪತ್ರವನ್ನಿತ್ತು ಸಮ್ಮಾನಿಸಲಾಯಿತು.
ಈ ಸಂದರ್ಭ ವೇದಿಕೆಯಲ್ಲಿ ಅಡ್ವಾನ್ಸ್ಡ್ ಟೆಕ್ನಿಕಲ್ ಸರ್ವಿಸಸ್ ಕತಾರ್ ಇದರ ಆಡಳಿತ ನಿರ್ದೇಶಕ ಹಾಗೂ ಕತಾರಣ್ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾದ ರವಿ ಶೆಟ್ಟಿ ಮೂಡಂಬೈಲ್, ಸಂಘದ ಅಧ್ಯಕ್ಷರಾದ ನಾರಾಯಣ ಕೆ. ಶೆಟ್ಟಿ, ಮಾಜಿ ಅಧ್ಯಕ್ಷ ಜಯ ಶೆಟ್ಟಿ ಮಿಯ್ನಾರು, ಉಪಾಧ್ಯಕ್ಷರುಗಳಾದ ಸುರೇಶ್ ಎಸ್. ಶೆಟ್ಟಿ, ಆನಂದ್ ಶೆಟ್ಟಿ ಮಿಯ್ನಾರು, ಪ್ರಧಾನ ಕಾರ್ಯದರ್ಶಿ ರೋಹಿತ್ ಡಿ. ಶೆಟ್ಟಿ ನಗ್ರಿಗುತ್ತು, ಗೌರವ ಕೋಶಾಧಿಕಾರಿ ಅರವಿಂದ ರೈ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಬಾಲಕೃಷ್ಣ ಡಿ. ಶೆಟ್ಟಿ, ಮಹಿಳಾ ವಿಭಾಗದ ನಿಕಟಪೂರ್ವ ಕಾರ್ಯಾಧ್ಯಕ್ಷೆ ಸರೋಜಿನಿ ಜಯ ಶೆಟ್ಟಿ, ಕಾರ್ಯಾಧ್ಯಕ್ಷೆ ಮಲ್ಲಿಕಾ ಆನಂದ್ ಶೆಟ್ಟಿ, ಕಾರ್ಯದರ್ಶಿ ಉಷಾ ಉಲ್ಲಾಸ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಪ್ರದೀಪ್ ಶೆಟ್ಟಿ ಮೊದಲಾದವರು ಕಾರ್ಯ ಕ್ರ ಮ ದಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ : ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ