ಬಂಟ್ಸ್‌ ಉನ್ನತ ಶಿಕ್ಷಣ ನೈಟ್‌ ಕಾಲೇಜು: ವಾರ್ಷಿಕೋತ್ಸವ


Team Udayavani, Jan 27, 2019, 3:42 PM IST

2401mum12a.jpg

ನವಿಮುಂಬಯಿ: ಬೋಂಬೆ  ಬಂಟ್ಸ್‌  ಅಸೋಸಿಯೇಶನ್‌  ಬಂಟ್ಸ್‌ ಕಾಲೇಜ್‌ ಆಫ್‌ ಹೈಯರ್‌ ಎಜುಕೇಶನ್‌ – ನೈಟ್‌ ಕಾಲೇಜು ಜೂಯಿನಗರ ಇದರ ವಾರ್ಷಿಕೋತ್ಸವ ಸಂಭ್ರಮವು ಜ. 19ರಂದು ಅಸೋಸಿಯೇಶನ್‌ನ ಬಂಟ್ಸ್‌ ಸೆಂಟರ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಬೋಂಬೆ ಬಂಟ್ಸ್‌ ಅಸೋಸಿ ಯೇಶನ್‌ನ ಹಿಂದಿನ ಅಧ್ಯಕ್ಷರಾದ  ಜಯರಾಮ ಎಸ್‌. ಮಲ್ಲಿ  ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.  ಸಮಾರಂಭವು ಸರಸ್ವತಿ ಪೂಜೆಯೊಂದಿಗೆ ಪ್ರಾರಂಭವಾಯಿತು. ಕಾಲೇಜಿನ ಪ್ರಾಂಶುಪಾಲ  ಡಾ| ಎಸ್‌. ಎಸ್‌.  ಭಂಡಾರಿ ಅವರು ಬಂಟ್ಸ್‌ ರಾತ್ರಿ ಕಾಲೇಜಿನ ಸಿದ್ಧಿ-ಸಾಧನೆಗಳನ್ನು ವಿವರಿಸಿ  ಪಿಪಿಟಿಯೊಂದಿಗೆ ವಾರ್ಷಿಕ ವರದಿಯನ್ನು ಓದಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಜಯರಾಮ ಎಸ್‌. ಮಲ್ಲಿ  ಅವರನ್ನು ಬೋಂಬೆ ಬಂಟ್ಸ್‌ ಅಸೋಸಿಯೇಶನ್‌  ಅಧ್ಯಕ್ಷ ಸುಭಾಷ್‌ ಬಿ. ಶೆಟ್ಟಿ ಮತ್ತು ವೇದಿಕೆಯಲ್ಲಿದ್ದ ಎಲ್ಲ ಗಣ್ಯರು ಸಮ್ಮಾನಿಸಿದರು. ಕಾರ್ಯಕಾರಿ  ಸಮಿತಿ ಸದಸ್ಯರು ನೈಟ್‌ ಕಾಲೇಜಿನ  ಕಾರ್ಯಚಟುವಟಿಕೆ ಮತ್ತು ಪ್ರಗತಿಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಮುಖ್ಯ ಅತಿಥಿ ಜಯರಾಮ ಮಲ್ಲಿ ಅವರು ವರದಿ ಮತ್ತು ಪ್ರಾಂಶುಪಾಲರಿಂದ ಪ್ರಸ್ತುತಪಡಿಸಿದ ಪಿಪಿಟಿ  ಮತ್ತು ವಿದ್ಯಾರ್ಥಿಗಳು ಹಾಗೂ ಸಿಬಂದಿಗಳ ಪ್ರಯತ್ನವನ್ನು ಶ್ಲಾಘಿಸಿದರು, ವಿದ್ಯಾರ್ಥಿಗಳಿಗೆ ಒಳ್ಳೆಯ ವಾತಾವರಣ ಕಲ್ಪಿಸಿಕೊಡಬೇಕು. ಶಿಕ್ಷಣವು ಉದ್ಯೋಗ ಆಧಾರಿತವಾಗಿರಬೇಕು. ಕಾಲೇಜಿನ ಉತ್ತಮ ಫಲಿತಾಂಶವನ್ನು ಕಂಡಾಗ ಸಂತೋಷವಾಗುತ್ತಿದೆ ಎಂದು ನುಡಿದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ  ಸ್ವಾಗತ ನೃತ್ಯ, ಗಾಯನ, ಕಿರು ನಾಟಕ ಮತ್ತು ಫ್ಯಾಷನ್‌ ಶೋ ಹೀಗೆ ವಿವಿಧ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ನಡೆದವು. ಗಣ್ಯರು ಪ್ರತಿಭಾವಂತ ಮಕ್ಕಳನ್ನು ಗೌರವಿಸಿದರು. ಶೈಕ್ಷಣಿಕ, ಕಲೆ, ಸಂಸ್ಕೃತಿ, ಕ್ರೀಡೆ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವ ಉದ್ದೇಶದಿಂದ ಪ್ರಶಸ್ತಿ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಮಹಾ ವಿದ್ಯಾಲಯದ ಪ್ರಾಂಶುಪಾಲರು, ಶಿಕ್ಷಕ ವೃಂದದವರು, ಶಿಕ್ಷಕೇತರ ಸಿಬಂದಿಗಳು ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

ಸಂಸ್ಥೆಯ ಪದಾಧಿಕಾರಿಗಳಾದ ನ್ಯಾಯವಾದಿ ಅಶೋಕ್‌ ಡಿ . ಶೆಟ್ಟಿ, ನ್ಯಾಯವಾದಿ ರತ್ನಾಕರ ವಿ. ಶೆಟ್ಟಿ, ಮುರಳಿ ಕೆ. ಶೆಟ್ಟಿ,  ಶ್ರೀಧರ ಕೆ. ಶೆಟ್ಟಿ , ಸಿಎ ಸುರೇಂದ್ರ ಕೆ. ಶೆಟ್ಟಿ, ಸಿಎ  ವಿಶ್ವನಾಥ ಎಸ್‌. ಶೆಟ್ಟಿ,  ಶಾರದಾ ಎಸ್‌.  ಶೆಟ್ಟಿ, ಚರಣ್‌ ಆರ್‌.  ಶೆಟ್ಟಿ ಹಾಗೂ ಕಾಲೇಜಿನ ಸ್ಟೂಡೆಂಟ್ಸ್‌ ಕೌನ್ಸಿಲ್‌ ಅಧ್ಯಕ್ಷ  ಕೋಮಲ್‌ ಪಾಟೀಲ್‌ ಉಪಸ್ಥಿತರಿದ್ದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿದ್ಯಾರ್ಥಿಗಳು, ಪಾಲಕ-ಪೋಷಕರು  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.