ಬಂಟರ ಸಂಘ ಜೋಗೇಶ್ವರಿ-ದಹಿಸರ್‌: ಸಾಧಕರಿಗೆ ಸಮ್ಮಾನ


Team Udayavani, Sep 26, 2017, 4:27 PM IST

65586+5.jpg

ಮುಂಬಯಿ: ಬಂಟರ ಸಂಘ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ 11ನೇ ವಾರ್ಷಿಕೋತ್ಸವ ಸಂಭ್ರಮವು ಸೆ. 16 ರಂದು ಕಾಂದಿವಲಿ ಠಾಕೂರ್‌ ಕಾಂಪ್ಲೆಕ್ಸ್‌ನ ಅವೆನ್ಯೂ ಹೊಟೇಲ್‌ ಸಭಾಂಗಣದಲ್ಲಿ ವೈವಿಧ್ಯ ಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಗೋರೆಗಾಂವ್‌ ವಿವೇಕ್‌ ಕಾಲೇಜಿನ ಪ್ರಾಂಶುಪಾಲೆ ಡಾ| ವಿಜೇತಾ ಎಸ್‌. ಶೆಟ್ಟಿ, ಪತ್ತನಾಜೆ ತುಳು ಚಲನಚಿತ್ರದ ನಾಯಕಿ ರೇಷ್ಮಾ ಶೆಟ್ಟಿ, ಚಿತ್ರದ ನಿರ್ದೇಶಕ ತೋನ್ಸೆ ವಿಜಯಕುಮಾರ್‌ ಶೆಟ್ಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು.

ಸಮ್ಮಾನಕ್ಕೆ ಉತ್ತರಿಸಿದ ಕರ್ನಿರೆ ವಿಶ್ವನಾಥ ಶೆಟ್ಟಿ ಅವರು, ಪದ್ಮನಾಭ ಎಸ್‌. ಪಯ್ಯಡೆ, ಮುಂಡಪ್ಪ ಎಸ್‌. ಪಯ್ಯಡೆ ಅವರ ಮುಂದಾಳತ್ವದಲ್ಲಿ ಹಾಗೂ ಪ್ರಸ್ತುತ ಸಮಿತಿಯ ಕಾರ್ಯಾಧ್ಯಕ್ಷ ವಿಜಯ ಆರ್‌. ಭಂಡಾರಿ ಅವರ ನೇತೃತ್ವದಲ್ಲಿ ಮತ್ತು ಎಲ್ಲಾ ಪದಾಧಿಕಾರಿಗಳ ಸಹಕಾರದಿಂದ ಈ ಸಮಿತಿಯು ಅತ್ಯುತ್ತಮ ರೀತಿಯಲ್ಲಿ ಮುನ್ನಡೆಯುತ್ತಿದೆ. ವಿವಿಧ ಗಣ್ಯಾಥಿಗಣ್ಯರು ಸದಸ್ಯರಾಗಿರುವ ಈ ಸಮಿತಿಯು ಹಲವಾರು ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ಯಶಸ್ವಿ ಯಾಗಿ ನೆರವೇರಿಸಿದೆ. ಶೈಕ್ಷಣಿಕ ದತ್ತು ಸ್ವೀಕಾರ, ವೈದ್ಯಕೀಯದಂತಹ ಹಲವಾರು ಸಮಾಜ ಮುಖೀ ಕಾರ್ಯಕ್ರಮಗಳಲ್ಲೂ ಈ ಸಮಿತಿಯು ಯಶಸ್ವಿಯಾಗಿ ಕಾರ್ಯಸಾಧನೆಗೈದಿದೆ. ವಿವಿಧ ಮಹಾನ್‌ ಉದ್ಯಮಿಗಳು ನೆಲೆಸಿರುವ ಈ ಪರಿಸರದಲ್ಲಿ ಮಹಾನಗರದ ಉಪನಗರ ದಲ್ಲೊಂದು ಸ್ಥಳೀಯ ರಿಗೆ ಶಿಕ್ಷಣ ಪಡೆಯಲು ಕಾಲೇಜೊಂದರ ಸ್ಥಾಪನೆಯಾಗಬೇಕು ಎಂದು ನುಡಿದು ಸಮ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು.

ಇನ್ನೋರ್ವೆ ಸಮ್ಮಾನಿತೆ ಡಾ| ವಿಜೇತಾ ಎಸ್‌. ಶೆಟ್ಟಿ ಅವರು ಮಾತನಾಡಿ, ಬಂಟ ಸಮಾಜದಲ್ಲಿ ಹುಟ್ಟಿದ ನನಗೆ ಈ ಸಮ್ಮಾನ ಜೀವನದಲ್ಲಿ ಅಮೂಲ್ಯವಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಗೈದ ನನಗೆ ಇಂದು ಪ್ರಾಂಶುಪಾಲೆ ಹುದ್ದೆಯಲ್ಲಿರಲು ಶಿಕ್ಷಣದ ಶ್ರೇಯಸ್ಸೆ ಕಾರಣವಾಗಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ದೇಶದ ಭವಿಷ್ಯದ ಪ್ರಜ್ಞಾವಂತ ನಾಗರಿಕರನ್ನಾಗಿ ಮಾಡುವ ಕರ್ತವ್ಯ ಎಲ್ಲಾ ಪಾಲಕರ ಮೇಲಿದೆ ಎಂದರು.

ಸಮಾರಂಭದಲ್ಲಿ ಪ್ರಾದೇಶಿಕ ಸಮಿತಿಯ ಸಂಚಾಲಕರಾಗಿ ಸದಾ ಸಮಿತಿಯಲ್ಲಿ ಸಕ್ರಿಯರಾಗಿರುವ ಮನೋಹರ ಎಸ್‌. ಶೆಟ್ಟಿ ಅವರನ್ನು ಜೀವಮಾನದ ಸಾಧನ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಲಾಯಿತು. ಸಮಾರಂಭದ ವೇದಿಕೆಯಲ್ಲಿ ಡಾ| ಪಿ. ವಿ. ಶೆಟ್ಟಿ, ಸಂಘದ ಉಪಾಧ್ಯಕ್ಷ ಮುಂಡಪ್ಪ ಎಸ್‌. ಪಯ್ಯಡೆ, ಡಾ| ಸತೀಶ್‌ ಶೆಟ್ಟಿ, ಸಿಎ ಸುರೇಂದ್ರ ಶೆಟ್ಟಿ, ಐಕಳ ಹರೀಶ್‌ ಶೆಟ್ಟಿ, ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಸಮಿತಿಯ ಗೌರವ ಕಾರ್ಯದರ್ಶಿ ನಿಟ್ಟೆ ಎಂ. ಜಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಮಹಿಳಾ, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಬಿ. ಶೆಟ್ಟಿ,ಯುವ ವಿಭಾಗದ ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ, ಗೌರವ ಕೋಶಾಧಿಕಾರಿ ಕೆ. ಪ್ರೇಮನಾಥ್‌ ಶೆಟ್ಟಿ, ಗೌರವ ಕಾರ್ಯದರ್ಶಿ ಎಂ. ಜಿ. ಶೆಟ್ಟಿ, ಉದ್ಯಮಿ ರಘುರಾಮ ಶೆಟ್ಟಿ, ಹರೀಶ್‌ ಶೆಟ್ಟಿ, ಜಯಶೀಲ ಶೆಟ್ಟಿ, ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಕುತ್ಯಾರ್‌, ಜತೆ ಕೋಶಾಧಿಕಾರಿ ಮಹೇಶ್‌ ಎಸ್‌. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸ್ಥಳೀಯ ಸಮಿತಿಯ ಉಪ ಕಾರ್ಯಾಧ್ಯಕ್ಷ ರವೀಂದ್ರ ಎಸ್‌. ಶೆಟ್ಟಿ, ಸ್ಥಳೀಯ ಸಮಿತಿಯ ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷೆ ಸುಚರಿತಾ ಶೆಟ್ಟಿ, ಜತೆ ಕಾರ್ಯದರ್ಶಿ ಗಂಗಾಧರ ಎ. ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಕಾಶ್‌ ಎ. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ವಿಜಯ ಎನ್‌. ಶೆಟ್ಟಿ, ವೈದ್ಯಕೀಯ ಸಮಿತಿಯ ವಿಕಾಸ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ವಿನೋದಾ ಎ.ಶೆಟ್ಟಿ, ಕಾರ್ಯದರ್ಶಿ ಶೈಲಜಾ ಎ. ಶೆಟ್ಟಿ, ಜತೆ ಕಾರ್ಯದರ್ಶಿ ಸುನಿತಾ ಎನ್‌. ಹೆಗ್ಡೆ, ಸಾಂಸ್ಕೃತಿಕ ವಿಭಾಗದ ಸರಿತಾ ಎಂ. ಶೆಟ್ಟಿ, ಸಲಹೆಗಾರ್ತಿ ಪದ್ಮಾವತಿ ಬಿ. ಶೆಟ್ಟಿ, ಸಂಚಾಲಕಿ ಸವಿತಾ ಸಿ. ಶೆಟ್ಟಿ, ಕೋಶಾಧಿಕಾರಿ ರೇಖಾ ವೈ. ಶೆಟ್ಟಿ, ಜತೆ ಕೋಶಾಧಿಕಾರಿ ಜ್ಯೋತಿ ಪಿ. ಶೆಟ್ಟಿ, ಸದಸ್ಯತ್ವ ನೋಂದಾವಣೆ ಸಮಿತಿಯ ಸುಲತಾ ಎಸ್‌. ಶೆಟ್ಟಿ, ಸದಸ್ಯರು, ಸಲಹೆಗಾರರು, ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

 ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.