ಬಂಟರ ಸಂಘದಿಂದ ಅನಿಲ್ ಶೆಟ್ಟಿಗೆ ನೆರವಿನ ಭರವಸೆ
Team Udayavani, Nov 9, 2017, 3:40 PM IST
ಮುಂಬಯಿ: ರಾಜ್ಯ ಮಟ್ಟದ ಮಾಜಿ ದೇಹದಾಡ್ಯìಪಟು, ವೃತ್ತಿಪರ ವ್ಯಾಯಾಮ ತರಬೇತುದಾರ, ರಾಷ್ಟ್ರೀಯ ಕ್ರೀಡಾ ಪುರಸ್ಕೃತ 67 ಹರೆಯದ ಅನಿಲ್ ಶೆಟ್ಟಿ ಅವರು ತನ್ನ ಕ್ಷಯರೋಗದ ಚಿಕಿತ್ಸೆಗಾಗಿ ವಸಾಯಿಯಲ್ಲಿ ಸಾರ್ವಜನಿಕರಿಂದ ಭಿಕ್ಷಾರೂಪದಲ್ಲಿ ಹಣ ಸಂಗ್ರಹಿಸುತ್ತಿರುವ ವರದಿಯೊಂದು ಮಿಡ್ಡೇ ಆಂಗ್ಲ ದಿನ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾದ ಸುದ್ದಿ ತಿಳಿದ ಬಂಟರ ಸಂಘ ಮುಂಬಯಿ ಇದರ ನೂತನ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರು ತತ್ಕ್ಷಣ ಸ್ಪಂದಿಸಿದ್ದು, ವೈಯಕ್ತಿಕ ಹಾಗೂ ಸದಸ್ಯರಿಂದ ನೆರವು ದೊರಕಿಸಿಕೊಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ಬಂಟರ ಸಂಘದ ಜೊತೆ ಕೋಶಾಧಿಕಾರಿ, ಉದ್ಯಮಿ ಮಹೇಶ್ ಎಸ್. ಶೆಟ್ಟಿ ಅವರು ಸಂಪೂರ್ಣ ನೆರವಿಗಾಗಿ ಸ್ಪಂದಿಸಿದ್ದು, ಸಂಘದ ಮಾಜಿ ಅಧ್ಯಕ್ಷ ಸುಧಾಕರ ಎಸ್. ಹೆಗ್ಡೆ ಅವರು ಅನಿಲ್ ಶೆಟ್ಟಿ ಅವರ ಶೋಚನೀಯ ಪರಿಸ್ಥಿತಿಯನ್ನು ಕಂಡು ಮರುಕ ವ್ಯಕ್ತಪಡಿಸಿದ್ದಾರಲ್ಲದೆ, ವೈಯಯಕ್ತಿಕ ಸಹಾಯ ನೀಡಲು ಮುಂದಾಗಿದ್ದಾರೆ. ಸಂಘದ ಸದಸ್ಯರೆಲ್ಲರೂ ಮಾನವೀಯತೆಯ ದೃಷ್ಟಿಯಿಂದ ಅನಿಲ್ ಶೆಟ್ಟಿ ಅವರಿಗೆ ಎಲ್ಲಾ ರೀತಿಯ ಸಹಾಯಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ