ಬಂಟರ ಸಂಘ ಕುರ್ಲಾ-ಭಾಂಡೂಪ್ : ಆರ್ಥಿಕ ನೆರವು ಅರ್ಜಿ ಸ್ವೀಕಾರ
Team Udayavani, Apr 3, 2018, 3:12 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವರ್ಷಂಪ್ರತಿ ಸಮಾಜ ಬಾಂಧವರಿಗೆ ಕೊಡಲ್ಪಡುವ ವಿದ್ಯಾರ್ಥಿ ವೇತನ, ವಿಧವಾ ವೇತನ ಹಾಗೂ ವಿಕಲ ಚೇತನಗಳಿಗೆ ಅರ್ಜಿ ಸ್ವೀಕಾರ ಕಾರ್ಯಕ್ರಮವು ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯಿಂದ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಪೂರ್ವಾಹ್ನದಿಂದ ಮಧ್ಯಾಹ್ನದವರೆಗೆ ನಡೆಯಿತು.
ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್ದಾಸ್ ಶೆಟ್ಟಿ, ಬಂಟರ ಸಂಘ ಮುಂಬಯಿ ಇದರ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸಿಎ ವಿಶ್ವನಾಥ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಉದಯ್ ಶೆಟ್ಟಿ ವಿಕ್ರೋಲಿ, ಇತರ ಪದಾಧಿಕಾರಿಗಳಾದ ಗಿರೀಶ್ ಶೆಟ್ಟಿ, ಬಂಟರ ಸಂಘ ಕುರ್ಲಾ- ಭಾಂಡೂಪ್ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಕಾರ್ಯಾಧ್ಯಕ್ಷ ತಾರನಾಥ ಶೆಟ್ಟಿ, ಮಹಿಳಾ ವಿಭಾಗದ ಪದಾಧಿಕಾರಿಗಳಾದ ಡಾ| ಪಲ್ಲವಿ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ವಿಭಾಗದ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದು ಆರ್ಥಿಕ ಸಹಾಯ ವಿತರಣೆಯ ಅರ್ಜಿಗಳನ್ನು ಸ್ವೀಕರಿಸಿದರು.
ಬಂಟರ ಸಂಘ ಮುಂಬಯಿ ಇದರ ಕುರ್ಲಾ-ಭಾಂಡೂಪ್ ಪ್ರಾದೇ ಶಿಕ ಸಮಿತಿಗೆ ಒಳಪಟ್ಟ ಕುರ್ಲಾ, ವಿದ್ಯಾವಿಹಾರ್, ಚೆಂಬೂರು, ಘಾಟ್ಕೋಪರ್, ವಿಕ್ರೋಲಿ, ಕಾಂಜೂರ್ ಮಾರ್ಗ್, ಭಾಂಡೂಪ್ ಇನ್ನಿತರ ಪ್ರದೇಶಗಳಲ್ಲಿ ನೆಲೆಸಿರುವ ಆರ್ಥಿಕವಾಗಿ ಹಿಂದುಳಿದ ಬಂಟ ಬಾಂಧವರು ಅರ್ಜಿಗಳನ್ನು ಸಲ್ಲಿಸಿದರು. ಸದಸ್ಯರು ಅರ್ಜಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ