ಬಂಟರ ಸಂಘ ಮುಂಬಯಿ ಉನ್ನತ ಶಿಕ್ಷಣ ಸಂಸ್ಥೆಗೆ ಶೇ. 96.01 ಫಲಿತಾಂಶ
ಎಚ್ಎಸ್ಸಿ ಫಲಿತಾಂಶ ಪ್ರಕಟ
Team Udayavani, May 29, 2019, 12:35 PM IST
ಮುಂಬಯಿ: 2018-19ನೇ ಶೈಕ್ಷಣಿಕ ಸಾಲಿನ ಎಚ್ಎಸ್ಸಿ ಫಲಿತಾಂಶವು ಮಂಗಳವಾರ ಪ್ರಕಟಗೊಂಡಿದ್ದು, ಬಂಟರ ಸಂಘ ಮುಂಬಯಿ ಇದರ ಕುರ್ಲಾ ಪೂರ್ವದ ಬಂಟರ ಭವನದ ಸಂಕುಲದಲ್ಲಿರುವ ಪ್ರತಿಷ್ಠಿತ ಬಂಟರ ಸಂಘ ಉನ್ನತ ಶಿಕ್ಷಣ ಸಂಸ್ಥೆಗೆ ಶೇ. 96.01 ಫಲಿತಾಂಶ ಲಭಿಸಿದೆ.
ಸಂಸ್ಥೆಯ ವಾಣಿಜ್ಯ ವಿಭಾಗಕ್ಕೆ ಶೇ. 97.88 ಫಲಿತಾಂಶ
ಲಭಿಸಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು236 ವಿದ್ಯಾರ್ಥಿಗಳ ಪೈಕಿ 8 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 89 ವಿದ್ಯಾರ್ಥಿಗಳು ಪ್ರಥಮ ದರ್ಜೆ, 105 ವಿದ್ಯಾರ್ಥಿಗಳು ದ್ವಿತೀಯ ಹಾಗೂ 29 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸೌನಕ್ ಕುಮಾರ್ ಕರ್ಕೇರ ಅವರು ಶೇ. 83.23 ಅಂಕಗಳನ್ನು ಪಡೆದು ವಿಭಾಗಕ್ಕೆ ಪ್ರಥಮ ಸ್ಥಾನಿಯಾದರೆ, ರಿತಿಕ್ ರಾಜ್ಕುಮಾರ್ ಶರ್ಮಾ ಶೇ. 81.69 ಅಂಕಗಳನ್ನು ಗಳಿಸಿ ದ್ವಿತೀಯ ಮತ್ತು ಆರ್ಯನ್ ಪ್ರಶಾಂತ್ ಸನಿಲ್ ಅವರು ಶೇ. 81.08 ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಸಂಸ್ಥೆಯ ವಿಜ್ಞಾನ ವಿಭಾಗಕ್ಕೆ ಶೇ. 90.79 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 65 ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಡಿಸ್ಟಿಂಕ್ಷನ್, 10 ವಿದ್ಯಾರ್ಥಿಗಳು ಪ್ರಥಮ ದರ್ಜೆ, 45 ವಿದ್ಯಾರ್ಥಿಗಳು ದ್ವಿತೀಯ ಮತ್ತು ಮೂವರು ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಭಾಗದ ಅಲೆಕ್ಸ್ ಕಾಡೋìಜ್ ಆಸ್ಟಿನ್ ಅವರು ಶೇ. 78.62 ಅಂಕಗಳೊಂದಿಗೆ ಪ್ರಥಮಿಗರೆನಿಸಿದರೆ, ಗಿರಿನ್ ಪ್ರಿಯಾ ತುಳಸಿರಾಮ್ ಅವರು ಶೇ. 68.15 ಮತ್ತು ಶೇಖ್ ಮುಜಾಮಿಲ್ ಮೊಹಮ್ಮದ್ ಬನೆಮಿಯಾ ಅವರು ಶೇ. 67.69 ಅಂಕಗಳನ್ನು ಗಳಿಸಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು, ಸಹಕರಿಸಿದ ಶಿಕ್ಷಕ ವೃಂದ ಹಾಗೂ ಪಾಲಕ ಪೋಷಕರನ್ನು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಎನ್. ವಿವೇಕ್ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ