ಬಂಟರ ಸಂಘ ಮುಂಬಯಿ: ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗಳ ಪ್ರದಾನ


Team Udayavani, Apr 17, 2018, 4:35 PM IST

1504mum01.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ವತಿಯಿಂದ  ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಬಂಟರ ದಿನಾಚರಣೆಯು ಎ. 14ರಂದು ಬೆಳಗ್ಗೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ದಿನವಿಡೀ ನಡೆಯಿತು. 

ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಇವರ ಅಧ್ಯಕ್ಷತೆಯಲ್ಲಿ ನಡೆದ ಬಿಸುಪರ್ಬ ಮತ್ತು ಬಂಟರ ದಿನಾಚರಣೆ ಸಮಾರಂಭದಲ್ಲಿ ಸಂಘವು ವಾರ್ಷಿಕವಾಗಿ ಕೊಡಮಾಡುವ ವಿವಿಧ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು.

ಸಮಾರಂಭದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಕಣಂಜಾರು ಆನಂದ ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದ, ಅರ್ಥದಾರಿ ಕೆ.ಕೆ. ಶೆಟ್ಟಿ ಇವರಿಗೆ ದಿ| ಆನಂದ ಶೆಟ್ಟಿಯವರ ಕುಟುಂಬಿಕರಾದ ಸುಧಾಕರ ಎಸ್‌. ಹೆಗ್ಡೆ, ರಂಜನಿ ಸುಧಾಕರ ಹೆಗ್ಡೆ, ಉದಯ್‌ ಶೆಟ್ಟಿ ಇವರು ಪ್ರಶಸ್ತಿಯನ್ನು ಪ್ರದಾನಿಸಿದರು. ಸಮ್ಮಾನ ಪತ್ರವನ್ನು ಸಂಘದ ಯಕ್ಷಗಾನ ಸಮಿತಿಯ ಸಂಚಾಲಕ ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ ವಾಚಿಸಿದರು.

ಸಂಘದ ಮಹಿಳಾ ವಿಭಾಗದ ಸದಸ್ಯೆ ಜ್ಯೋತಿ ಆರ್‌.ಎನ್‌. ಶೆಟ್ಟಿ ಮಹಿಳಾ ವಿಭಾಗದ ಮೂಲಕ ಪ್ರತಿವರ್ಷ ನೀಡುವ ಅತ್ಯುತ್ತಮ ಮಹಿಳಾ ಸಾಧಕಿ ಪ್ರೇಮಾ ನಾರಾಯಣ ರೈ ಪ್ರಶಸ್ತಿಯನ್ನು ಈ ಬಾರಿ ಮುಂಬಯಿಯ ಪ್ರತಿಭಾನ್ವಿತ ರಂಗಕಲಾವಿದೆ, ಸಾಧಕಿ ಸುಧಾ ಶೆಟ್ಟಿ ಅವರಿಗೆ ಜ್ಯೋತಿ ಆರ್‌.ಎನ್‌. ಶೆಟ್ಟಿ, ರಂಜನಿ ಸುಧಾಕರ ಹೆಗ್ಡೆ, ಡಾ| ಸುನೀತಾ ಎಂ. ಶೆಟ್ಟಿ ಪ್ರಶಸ್ತಿಯನ್ನು ಪ್ರದಾನಿಸಿದರು. ಸಮ್ಮಾನ ಪತ್ರವನ್ನು ಸಂಘದ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ ವಾಚಿಸಿದರು.

ಪ್ರತಿಷ್ಠಿತ ರಾಧಾಬಾಯಿ ಟಿ. ಭಂಡಾರಿ ಸ್ಮರಣಾರ್ಥ ಪ್ರಶಸ್ತಿಯನ್ನು ಈ ಬಾರಿ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ, ಸಮಾಜ ಸೇವಕಿ ಲತಾ ಪ್ರಭಾಕರ ಶೆಟ್ಟಿ ಅವರಿಗೆ ಪ್ರಶಸ್ತಿ ಆಯ್ಕೆ ಸಮಿತಿಯ ಕಾರ್ಯಾಧ್ಯಕ್ಷ, ಹಿರಿಯ ಮುತ್ಸದ್ಧಿ ಎಂ.ಡಿ. ಶೆಟ್ಟಿ, ಡಾ| ಸುನೀತಾ ಎಂ. ಶೆಟ್ಟಿ, ಭಂಡಾರಿ ಕುಟುಂಬದ ಲತಾ ಪಿ. ಭಂಡಾರಿ ಹಾಗೂ ಕುಟುಂಬಸ್ಥರು ಪ್ರದಾನಿಸಿದರು. ಪ್ರಶಸ್ತಿ ಪತ್ರವನ್ನು ಮಹಿಳಾ ವಿಭಾಗದ ಕೋಶಾಧಿಕಾರಿ ಆಶಾ ವಿ. ರೈ ವಾಚಿಸಿದರು. ಪ್ರಶಸ್ತಿ ಪುರಸ್ಕೃತರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರ, ಕಿರುಕಾಣಿಕೆಯನ್ನು ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕೆ.ಕೆ. ಶೆಟ್ಟಿ ಇವರು, ದಿ| ಕಣಂಜಾರು ಆನಂದ ಶೆಟ್ಟಿ ಅವರೊಂದಿಗಿನ ಸುಮಾರು 50 ವರ್ಷಗಳ ಸಂಬಂಧವನ್ನು ನೆನಪಿಸಿ ಕೊಂಡರು. ಯಕ್ಷಗಾನದ ಬಗ್ಗೆ ಅವರಿಗಿದ್ದ ಅಗಾಧ ಅನುಭವ, ಪ್ರತಿಭೆ, ಕಲಾವಿದರ ಬಗ್ಗೆ ಇದ್ದ ದಯೆ, ಕರುಣೆಯನ್ನು ಶ್ಲಾಘಿಸಿದರು. ಇದುವರೆಗೆ 11 ಮಂದಿ ಯಕ್ಷಕಲಾವಿದರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದ್ದು, ಈ ಬಾರಿ ಸಂಬಂಧಿಕನಾದ ನಾನೇ ಪಡೆಯಬೇಕು ಎಂಬುವುದು ಸುಧಾಕರ ಹೆಗ್ಡೆ ಯವರ ಇಚ್ಛೆಯಾಗಿತ್ತು. ಅವರ ಇಚ್ಛೆಯನ್ನು ವಿನಮ್ರತೆಯಿಂದ ಒಪ್ಪಿಕೊಂಡು ಪ್ರಶಸ್ತಿ ಸ್ವೀಕರಿಸ ಬೇಕಾಯಿತು. ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯು ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ ಅವರ ಸಾರಥ್ಯದಲ್ಲಿ ಮುನ್ನಡೆಯುತ್ತಿರುವುದು ಅಭಿಮಾನದ ವಿಷಯವಾಗಿದೆ ಎಂದು ನುಡಿದರು.

ಪ್ರಶಸ್ತಿ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ ಎಸ್‌. ಹೆಗ್ಡೆ ಅವರು ಮಾತನಾಡಿ, ಬಂಟರ ಸಂಘವು  ಕಳೆದ ಹಲವಾರು ವರ್ಷಗಳಿಂದ ಪ್ರಶಸ್ತಿಯನ್ನು ಪ್ರದಾನಿಸಿ ಸಾಧಕರಿಗೆ ಉತ್ತೇಜನವನ್ನು ನೀಡುತ್ತಿದೆ. ಇದು ನಿರಂತರವಾಗಿ ನಡೆದಾಗ ಯುವಪೀಳಿಗೆಗೆ ಇದು ಪ್ರೇರಣೆಯಾಗುತ್ತದೆ. ದಿ| ಆನಂದ ಶೆಟ್ಟಿ ಇವರ ಪ್ರೀತಿ, ಭಕ್ತಿಗೆ ಮಾರು ಹೋಗ ಕೆ.ಕೆ. ಶೆಟ್ಟಿ ಅವರಿಗೆ ಈ ಪ್ರಶಸ್ತಿ ಸಂದಿರುವುದು ಅಭಿಮಾನದ ಸಂಗತಿಯಾಗಿದೆ. ಇಂದು ಸಂಘದ ವಿವಿಧ ಪ್ರಶಸ್ತಿಗಳನ್ನು ಪಡೆದು ಎಲ್ಲರಿಗೂ ಅಭಿನಂದನೆಗಳು ಎಂದರು.
ಪ್ರೇಮಾ ನಾರಾಯಣ ರೈ ಪ್ರಶಸ್ತಿ ಸ್ವೀಕರಿಸಿದ  ರಂಗಕಲಾವಿದೆ, ಸಾಧಕಿ ಸುಧಾ ಶೆಟ್ಟಿ ಇವರು ಮಾತನಾಡಿ, ನನಗೆ ಯೋಗ್ಯತೆ ಮತ್ತು ಅರ್ಹತೆ ಇದೆ ಎಂಬುವುದನ್ನು ಬಂಟರ ಸಂಘವು ಗುರುತಿಸಿರುವುದಕ್ಕೆ ಚಿರಋಣಿ. ನನ್ನಿಂದ ಹೆಚ್ಚಿನ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ಸಲ್ಲಬೇಕು. ಜಗತ್ತಿನಲ್ಲಿ ದೇವರಿದ್ದರೆ ಅದು ನಮ್ಮ ಅಮ್ಮ. ನಮ್ಮ ಅಮ್ಮನನ್ನು ಸದಾ ಪೂಜಿಸಬೇಕು. ಬಂಟರ ಸಂಘದ ಕೀರ್ತಿ ಇನ್ನಷ್ಟು ಬೆಳಗಲಿ ಎಂದು ಹಾರೈಸಿದರು.
ರಾಧಾಬಾಯಿ ಟಿ. ಭಂಡಾರಿ ಸ್ಮರಣಾರ್ಥ ಪ್ರಶಸ್ತಿ ಪಡೆದ  ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ, ಸಮಾಜ ಸೇವಕಿ ಲತಾ ಪ್ರಭಾಕರ ಶೆಟ್ಟಿ ಇವರು ಮಾತನಾಡಿ, ಆಯ್ಕೆ ಸಮಿತಿಯು ನನ್ನನ್ನು ಗುರುತಿಸಿರುವುದು ಸಂತೋಷ ತಂದಿದೆ. ಸಮಿತಿಯ ಎಲ್ಲರಿಗೂ ಕೃತಜ್ಞತೆಗಳು. ನನ್ನ ಜೀವನದಲ್ಲಿಂದು ಯೋಗ ಮತ್ತು ಭಾಗ್ಯ ಒಂದಾಗಿ ಬಂದಿದೆ. ಬಂಟರ ಸಂಘದಲ್ಲಿ ಶಾಶ್ವತ ಹೆಸರಾಗಿರುವ ಕೊಡುಗೈದಾನಿ ರಾಧಾಬಾಯಿ ಟಿ. ಭಂಡಾರಿ ಹೆಸರಿನಲ್ಲಿ ನನಗೆ ನೀಡಿರುವ ಪ್ರಶಸ್ತಿಯಿಂದ ಸಂತೋಷವಾಗುತ್ತಿದೆ. ಬಯಸದೇ ಬಂದ ಭಾಗ್ಯವಿದು. ಅದನ್ನು ಜೀವನ ಪರ್ಯಂತ ಮರೆಯಲಾರೆ ಎಂದು ನುಡಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಗೌರವ ಅತಿಥಿಯಾಗಿ ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ, ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿ.ಎ. ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್‌ ಶೆಟ್ಟಿ ಐಕಳ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್‌ ವಿ. ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ ಅತಿಥಿ-ಗಣ್ಯರುಗಳನ್ನು ಸ್ವಾಗತಿಸಿದರು. ಬಂಟರವಾಣಿಯ ಗೌರವ ಸಂಪಾದಕ ಅಶೋಕ್‌ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸಿ.ಎ. ಸಂಜೀವ ಶೆಟ್ಟಿ ವಂದಿಸಿದರು.

ಚಿತ್ರ-ವರದಿ: ಪ್ರೇಮನಾಥ ಶೆಟ್ಟಿ ಮುಂಡ್ಕೂರು

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madame Tussauds: ಮೇಡಮ್‌ ಟುಸ್ಸಾಡ್‌: ಮಾನವ ಪ್ರತಿಕೃತಿಯ ಮೇಣದ ಗೊಂಬೆಗಳ ಲೋಕ

Madame Tussauds: ಮೇಡಮ್‌ ಟುಸ್ಸಾಡ್‌: ಮಾನವ ಪ್ರತಿಕೃತಿಯ ಮೇಣದ ಗೊಂಬೆಗಳ ಲೋಕ

ಕನ್ನಡ ಸಂಘ ಬಹ್ರೈನ್‌: 2025-27ರ ನೂತನ ಆಡಳಿತ ಮಂಡಳಿ ಆಯ್ಕೆ

ಕನ್ನಡ ಸಂಘ ಬಹ್ರೈನ್‌: 2025-27ರ ನೂತನ ಆಡಳಿತ ಮಂಡಳಿ ಆಯ್ಕೆ

ಕತಾರ್‌: ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕತಾರ್‌: ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ದಶಮಾನೋತ್ಸವ-2025 ಸಂಭ್ರಮ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ದಶಮಾನೋತ್ಸವ-2025 ಸಂಭ್ರಮ

Europe: ಇಟಲಿ ಏಕೆ ಅಷ್ಟು ಪ್ರವಾಸಿಗರನ್ನು ಆಕರ್ಷಿಸುತ್ತದೆ? ಇದರ ಒಳಗುಟ್ಟೇನು!

Europe: ಇಟಲಿ ಏಕೆ ಅಷ್ಟು ಪ್ರವಾಸಿಗರನ್ನು ಆಕರ್ಷಿಸುತ್ತದೆ? ಇದರ ಒಳಗುಟ್ಟೇನು!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.