ಬಂಟರ ಸಂಘ ಪೊವಾಯಿ ಎಸ್ಎಂ ಶೆಟ್ಟಿ ಶಿಕ್ಷಣ ಸಂಸ್ಥೆಗೆ ಶೇ. 100 ಫಲಿತಾಂಶ
Team Udayavani, May 29, 2019, 12:37 PM IST
ಮುಂಬಯಿ: 2018-19ನೇ ಶೈಕ್ಷಣಿಕ ಸಾಲಿನ ಎಚ್ಎಸ್ಸಿ ಫಲಿತಾಂಶವು ಮಂಗಳವಾರ ಪ್ರಕಟ
ಗೊಂಡಿದ್ದು, ಬಂಟರ ಸಂಘ ಮುಂಬಯಿ ಸಂಚಾಲಕತ್ವದ ಪೊವಾಯಿ ಪ್ರತಿಷ್ಠಿತ ಎಸ್. ಎಂ. ಶೆಟ್ಟಿ ಶಿಕ್ಷಣ ಸಂಸ್ಥೆಯ ವಾಣಿಜ್ಯ ವಿಭಾಗಕ್ಕೆ ಶೇ. 100 ಫಲಿತಾಂಶ ಲಭಿಸಿದೆ.
ಪರೀಕ್ಷೆಗೆ ಹಾಜರಾದ 522 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. 146 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾದರೆ, 276 ವಿದ್ಯಾರ್ಥಿಗಳು ಪ್ರಥಮ ದರ್ಜೆ, 95 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, ನಾಲ್ವರು ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ ಸೈನಿ ಮಾನ್ವಿತ್ ಕೌರ್ ಅವತಾರ್ ಸಿಂಗ್ ಅವರು ಶೇ. 92.77 ಅಂಕಗಳನ್ನು ಪಡೆದು ಪ್ರಥಮ ಸ್ಥಾನಿಯಾದರೆ, ತೇಜ್ವಾನಿ ಸಿಮ್ರಾನ್ ಸುನಿಲ್ ಅವರು ಶೇ. 91.08 ಅಂಕಗಳನ್ನು ಪಡೆದು ದ್ವಿತೀಯ ಹಾಗೂ ಲಕ್ಷ್ಮೀ ಇಂದ್ರಾ ಸಿಂಗ್ ಅವರು ಶೇ. 90.46 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗಕ್ಕೆ ಶೇ. 94.25 ಫಲಿತಾಂಶ
ಸಂಸ್ಥೆಯ ವಿಜ್ಞಾನ ವಿಭಾಗಕ್ಕೆ ಶೇ. 94.25 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 365 ವಿದ್ಯಾರ್ಥಿಗಳ ಪೈಕಿ 8 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 70 ವಿದ್ಯಾರ್ಥಿಗಳು ಪ್ರಥಮ ದರ್ಜೆ, ನಾಲ್ವರು ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಭಾಗದ ಸೂರಜ್ ಮಹೇಂದ್ರ ಯಾದವ್ ಅವರು ಶೇ. 80.92 ಅಂಕಗಳೊಂದಿಗೆ ಪ್ರಥಮ, ನಿಕಿಲ್ ಜೈರಾಜ್ ಅವರು ಶೇ. 80.62 ಅಂಕಗಳೊಂದಿಗೆ ದ್ವಿತೀಯ ಹಾಗೂ ಕರಣ್ ಅಶೋಕ್ ಅವರು ಶೇ. 77.23 ಅಂಕಗಳನ್ನು ಪಡೆದು ತೃತೀಯ ಸ್ಥಾನಿಯಾಗಿದ್ದಾರೆ. ಜನರಲ್ ಸಾಯನ್ಸ್ ವಿಭಾಗದಲ್ಲಿ ಪುನೀತ್ ದೇವೇಂದ್ರ ಕುಮಾರ್ ಜೈನ್ ಅವರು ಶೇ. 87.08 ಅಂಕಗಳೊಂದಿಗೆ ಪ್ರಥಮ, ಮುಖೀಯಾ ಅಮನ್ ಕುಮಾರ್ ರಾಮಚಂದ್ರ ಅವರು ಶೇ. 85.23 ಅಂಕಗಳನ್ನು ಪಡೆದು ದ್ವಿತೀಯ ಹಾಗೂ ಡೈನಾ ವಿರಾಫ್ ಅವರು ಶೇ. 76.31 ಅಂಕಗಳೊಂದಿಗೆ ತೃತೀಯ ಸ್ಥಾನಿಯಾಗಿದ್ದಾರೆ.
ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು, ಸಹಕರಿಸಿದ ಶಿಕ್ಷಕವೃಂದ ಹಾಗೂ ಪ್ರಾಂಶುಪಾಲರನ್ನು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಎಸ್. ಎಂ. ಶೆಟ್ಟಿ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಸಿಎ ಶಂಕರ್ ಬಿ. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ