ಬಂಟರ ಸಂಘ ವಸಾಯಿ-ಡಹಾಣೂ: ಮಹಿಳೆಯರಿಗೆ ಫುಟ್ಬಾಲ್‌ ಪಂದ್ಯಾಟ


Team Udayavani, Aug 5, 2018, 4:05 PM IST

0308mum05a.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ವತಿಯಿಂದ ಬಂಟ ಮಹಿಳೆಯರಿಗಾಗಿ ಫುಟ್ಬಾಲ್‌ ಪಂದ್ಯಾಟವು ಜು. 29 ರಂದು ನಲಸೋಪರ ಪೂರ್ವದ ಸೈಂಟ್‌ ಅಲೋಶಿಯಸ್‌ ಸ್ಕೂಲ್‌ ಮೈದಾನದಲ್ಲಿ ನಡೆಯಿತು.

ಬೆಳಗ್ಗೆ ಫುಟ್ಬಾಲ್‌ ಪಂದ್ಯಾಟವನ್ನು ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಪಯ್ಯಡೆ ಅವರು ದೀಪಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ, ಬಂಟ ಸಮಾಜದ ಮಕ್ಕಳು ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಅವರ ಕ್ರೀಡಾ ಮನೋಭಾವ ವೃದ್ಧಿಸುವ ಕಾರ್ಯಕ್ಕಾಗಿ ಪ್ರಾದೇಶಿಕ ಸಮಿತಿ ಮಹಿಳೆಯರ ಫುಟ್ಬಾಲ್‌ ಪಂದ್ಯಾಟವನ್ನು ಆಯೋಜಿಸಿ ಪ್ರತಿಭೆಗಳಿಗೆ ಅವಕಾಶ ನೀಡಿರುವುದು ಅಭಿನಂದನೀಯ. ಸ್ಪರ್ಧೆಯಲ್ಲಿ ಸೋಲು-ಗೆಲುವುಗಳ ಬಗ್ಗೆ ಅವಲೋಕಿಸದೆ ನಮ್ಮ ಕ್ರೀಡಾ ಅಭಿರುಚಿಗೆ ತಕ್ಕಂತೆ ಆಡಬೇಕು ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವಸಾಯಿ-ವಿರಾರ್‌ ಮಹಾನಗರ ಪಾಲಿಕೆಯ ಮೇಯರ್‌ ರೂಪೇವ್‌ ಜಾಧವ್‌ ಅವರು ಮಾತನಾಡಿ ಶುಭಹಾರೈಸಿದರು. ಸಂಘದ ಪಶ್ಚಿಮ ವಲಯ ಪ್ರಾದೇಶಿಕ ಸಮಿತಿಯ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ ಬೋಳ ಅವರು ಮಾತನಾಡಿ, ಬಂಟರ ಸಂಘದ ಪ್ರಾದೇಶಿಕ ಸಮಿತಿಯು ಪ್ರಥಮ ಬಾರಿಗೆ ಬಂಟ ಮಹಿಳೆಯರಿಗೆ ಫುಟ್ಬಾಲ್‌ ಪಂದ್ಯಾಟವನ್ನು ಆಯೋಜಿಸಿದ್ದು, ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಕ್ರೀಡಾಸ್ಫೂರ್ತಿಯಿಂದ ತಂಡಗಳು ಆಡಬೇಕು ಎಂದು ನುಡಿದರು.

ಸಂಘದ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ ಮಾತನಾಡಿ, ಈ ಪ್ರಾದೇಶಿಕ ಸಮಿತಿ ಮಹಿಳೆಯರ ಕ್ರೀಡಾ ಪ್ರತಿಭೆಗೆ ಅವಕಾಶ ನೀಡಿದೆ. ಪಂದ್ಯಾಟದಲ್ಲಿ ಪಾಲ್ಗೊಂಡ ಸಂಘದ ಪ್ರಾದೇಶಿಕ ಸಮಿತಿಗಳು ಗೆಲ್ಲಲು ಪ್ರಯತ್ನಿಸಬೇಕು ಎಂದರು. ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಜಯಂತ್‌ ಪಕ್ಕಳ ಅವರು ಮಾತನಾಪಿ, ನಮ್ಮ ಸಮಿತಿಯ ಯುವ ವಿಭಾಗವು ಸಕ್ರಿಯವಾಗಿ ವಿವಿಧ ರೀತಿಯ ಸಹಕಾರ ನೀಡುತ್ತಿದೆ. ಯುವ ವಿಭಾಗದವು ಶಿಸ್ತು ಮತ್ತು ಅಚ್ಚುಕಟ್ಟಾಗಿ ಫುಟ್ಬಾಲ್‌ ಪಂದ್ಯಾಟವನ್ನು ಆಯೋಜಿಸಿರುವುದು ಅಭಿನಂದನೀಯ ಎಂದರು.

ಬಂಟರ ಸಂಘದ ಜತೆ ಕೋಶಾಧಿಕಾರಿ ಐಕಳ ಗುಣಪಾಲ್‌ ಶೆಟ್ಟಿ ಅವರು ಮಾತನಾಡಿ, ಈ ಪ್ರಾದೇಶಿಕ ಸಮಿತಿ ಅನೇಕ ಚಟುವಟಿಕೆಗಳನ್ನು ಆಯೋಜಿಸಿದೆ. ಫುಟ್ಬಾಲ್‌ ಪಂದ್ಯಾಟ ಮಹಿಳೆಯರ ಕ್ರೀಡಾಸಕ್ತಿಯನ್ನು ಹೆಚ್ಚಿಸಿದೆ ಎಂದರು.
ವೇದಿಕೆಯಲ್ಲಿ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ರಂಜನಿ ಸುಧಾಕರ ಹೆಗ್ಡೆ, ಪ್ರಾದೇಶಿಕ ಸಮಿತಿಯ ಸಂಚಾಲಕ ಶಶಿಧರ್‌ ಕೆ. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಕರ್ನೂರು ಶಂಕರ್‌ ಆಳ್ವ, ಗೌರವ ಕಾರ್ಯದರ್ಶಿ ಪ್ರವೀಣ್‌ ಶೆಟ್ಟಿ ಕಣಂಜಾರು ಕೋಶಾಧಿಕಾರಿ ವಿಜಯ ಶೆಟ್ಟಿ, ಜತೆ ಕಾರ್ಯದರ್ಶಿ ರತೀಶ್‌ ಶೆಟ್ಟಿ, ಜೊತೆ ಕೋಶಾಧಿಕಾರಿ  ಜಗನ್ನಾಥ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಜಯಾ  ಶೆಟ್ಟಿ, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷೆ ಮಂಜುಳಾ ಶೆಟ್ಟಿ, ಕ್ರೀಡಾ ಸಮಿತಿಯ ವಿಭಾಗದ  ಕಾರ್ಯಾಧ್ಯಕ್ಷ ಅರುಣ್‌ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸುಪ್ರೀತ್‌ ಶೆಟ್ಟಿ ನೀರೆ ಹಾಗೂ ಪದಾಧಿಕಾರಿಗಳಾದ ಹರೀಶ್‌ ಶೆಟ್ಟಿ, ಪ್ರಖ್ಯಾತ್‌ ಶೆಟ್ಟಿ, ಶ್ರದ್ಧಾ ಶೆಟ್ಟಿ, ಯಶ್ವಿ‌ನ್‌ ಶೆಟ್ಟಿ, ರಿತೇಶ್‌ ಶೆಟ್ಟಿ, ಪ್ರೀತಿ ಶೆಟ್ಟಿ, ಸಂಜನಾ ಶೆಟ್ಟಿ ಉಪಸ್ಥಿತರಿದ್ದರು. ಪ್ರವೀಣ್‌ ಶೆಟ್ಟಿ ಕಣಂಜಾರು ಕಾರ್ಯಕ್ರಮ ನಿರ್ವಹಿಸಿದರು. ಸುಪ್ರೀತ್‌ ಶೆಟ್ಟಿ ವಂದಿಸಿದರು. ಭಾರತೀಯ ಫುಟ್ಬಾಲ್‌ ತಂಡದ ಆಟಗಾರ್ತಿ ರುಚಿ ಶೆಟ್ಟಿ ಅವರು ಫುಟ್ಬಾಲ್‌ ಆಡುವುದರ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು.

ಪಂದ್ಯಾಟದಲ್ಲಿ ಎಂಟು ತಂಡಗಳು ಭಾಗವಹಿಸಿದ್ದು, ಸಂಜೆಯವರೆಗೆ ನಡೆಯಿತು. ಬಂಟರ ಸಂಘದ ಪದಾಧಿಕಾರಿಗಳು, ವಿವಿಧ ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ವಿವಿಧ ಸಂಘಟನೆಗಳ 
ಪದಾಧಿಕಾರಿಗಳು, ಸಮಾಜದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅತಿಥಿಯಾಗಿ ಪಾಲ್ಗೊಂಡ  ಭಾರತೀಯ ಫುಟ್ಬಾಲ್‌ ತಂಡದ ಆಟಗಾರ್ತಿ ರುಚಿ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು.
 

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.